Yuvavahini

ಘಟಕಗಳು

ಶಿವಗಿರಿ ಯಾತ್ರೆ

ಯುವವಾಹಿನಿ (ರಿ) ಬಜ್ಪೆ ಘಟಕದ ನೇತೃತ್ವದಲ್ಲಿ ದಿನಾಂಕ 21/10/2017ರಿಂದ 24/10/2017ರವರೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹದಿಂದ ಮತ್ತು ಶ್ರೀ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಶಿವಗಿರಿ ಯಾತ್ರೆಯು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 52 ಯಾತ್ರಾರ್ಥಿಗಳು ಭಾಗವಹಿಸಿದ್ದರು. ಘಟಕದ ಅಧ್ಯಕ್ಷರಾದ ಚಂದ್ರಶೇಖರ್ ಪೂಜಾರಿ ಮತ್ತು ಕಾರ್ಯದರ್ಶಿ ಕನಕಾ ಮೋಹನ್, ಸಂಚಾಲಕರಾದ ದೇವರಾಜ್ ಅಮೀನ್, ಶಿವರಾಮ ಪೂಜಾರಿ ಇವರು ಶಿವಗಿರಿ ಯಾತ್ರೆಯ ನೇತ್ರತ್ವ ವಹಿಸಿದ್ದರು.

Read More

ಗುರುಗಳು ತೋರಿದ ಹಾದಿಯಲ್ಲಿ ಸಂಘಟಿತ ಸಮಾಜ ನಿರ್ಮಿಸಬೇಕು

ಮಹಾ ಮಾನವತಾವಾದಿ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುವರ್ಯರು ಸಮಾಜದ ಒಳಿತಿಗಾಗಿ ದುಡಿದವರು. ಸಮಸ್ತ ಮಾನವ ಜನಾಂಗಕ್ಕೆ ಹೊಸ ಹಾದಿ ತೋರಿದ ಅವರ ಸಂದೇಶದ ಅನುಷ್ಠಾನದ ಜತೆಗೆ ಅವರು ತೋರಿದ ಹಾದಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಮಂಗಳೂರಿನ ಖ್ಯಾತ ವಕೀಲರು ಹಾಗು ಕಾಂತಾವರದ ಅಲ್ಲಮ ಪ್ರಭು ಪೀಠದ ಅಧ್ಯಕ್ಷರಾದ ಶ್ರೀ ಯಶೋಧರ ಪಿ. ಕರ್ಕೇರರವರು ತಿಳಿಸಿದರು ಅವರು ಯುವವಾಹಿನಿ(ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜಯಂತಿಯ ಪ್ರಯುಕ್ತ ದಿನಾಂಕ […]

Read More

ರಕ್ತದಾನ ಮತ್ತು ಉಚಿತ ಕಣ್ಣು ಪರೀಕ್ಷಾ ಶಿಬಿರ

ರಕ್ತದಾನ ಮಹಾದಾನ ಶ್ರೇಷ್ಠ ದಾನ ,ಇದು ಮಾನವೀಯತೆಯ ಪ್ರತೀಕ ,ನಾವೆಲ್ಲಾ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ , ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಯುವವಾಹಿನಿ ಮಾಣಿ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ ತಿಳಿಸಿದರು. ಯುವವಾಹಿನಿ (ರಿ) ಮಾಣಿ ಮತ್ತು ಬಂಟ್ವಾಳ ಘಟಕ, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆ ರಕ್ತನಿಧಿ, ಸರಕಾರಿ ಲೇಡಿಗೋಷನ್ ಆಸ್ಪತ್ರೆ, […]

Read More

ಉತ್ತರ ಕರ್ನಾಟಕ ಪ್ರವಾಸ

ಯುವವಾಹಿನಿ (ರಿ) ಉಡುಪಿ ಘಟಕದ ಸದಸ್ಯರ ಹಾಗೂ ಕುಟುಂಬಸ್ಥರ ಉತ್ತರ ಕರ್ನಾಟಕದ ಜಗತ್ಪ್ರಸಿದ್ಧ ಐತಿಹಾಸಿಕ ಸ್ಥಳಗಳಿಗೆ ದಿನಾಂಕ 30.09.2017 ರಿಂದ 03.10.2017 ರ ವರಗೆ ಪ್ರವಾಸ ಜರುಗಿತು. ಬಿಜಾಪುರದ ಗೊಲ್ ಗುಂಬಜ಼್ , ಆಲಮಟ್ಟಿ ಅಣೆಕಟ್ಟು, , ಕೂಡಲ ಸಂಗಮ, ಬಾದಾಮಿ, ಐಹೊಳೆ, ಪಟ್ಟದಕಲ್ಲು ಮುಂತಾದ ಐತಿಹಾಸಿಕ ಸ್ಥಳಗಳಿಗೆ 49 ಯುವವಾಹಿನಿ ಕುಟುಂಬಸ್ಥರ ಪ್ರವಾಸವು ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್, ಉಪಾಧ್ಯಕ್ಷರಾದ ಅಶೋಕ್ ಕೋಟ್ಯಾನ್, ಸಂಚಾಲಕರಾದ ಜಗದೀಶ್ ಕೋಟ್ಯಾನ್ ಪ್ರವಾಸದ ನೇತ್ರತ್ವ […]

Read More

ರಕ್ತದಾನದಿಂದ ಹಲವರ ಜೀವ ಉಳಿಸಲು ಸಾಧ್ಯ: ಸೆಬಾಸ್ಟಿನ್ ಜತ್ತನ್

ರಕ್ತದಾನ ಅತ್ಯಂತ ಶ್ರೇಷ್ಠ ದಾನ. ರಕ್ತದಾನ ಮೂಲಕ ಅನೇಕರ ಜೀವ ಉಳಿಸುವುದರೊಂದಿಗೆ ದಾನಿಯೂ ಉತ್ತಮ ಆರೋಗ್ಯ ಗಳಿಸಲು ಸಾಧ್ಯ ಎಂದು ಹಳೆಯಂಗಡಿ ಸಿಎಸ್‌ಐ ಅಮ್ಮನ್ ಮೆಮೋರಿಯಲ್ ಚರ್ಚ್ ಸಭಾಪಾಲಕ ಸೆಬೆಸ್ಟಿನ್ ಜತ್ತನ್ ಹೇಳಿದರು. ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಲಿಯೋ ಮತ್ತು ಲಯನ್ಸ್ ಕ್ಲಬ್ ಹಳೆಯಂಗಡಿ, , ಜೋರ್ಜ್ ಎ.ಬೆರ್ನಾಡ್ ಮೆಮೋರಿಯಲ್ ಟ್ರಸ್ಟ್ ಹಳೆಯಂಗಡಿ, ಹೆಲ್ತ್ ಕೇರ್ ಡಯಾಗ್ನಾಸ್ಟಿಕ್ ಸೆಂಟರ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು , ರೆಡ್ ರಿಬ್ಬನ್ ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು […]

Read More

ದೇಯಿ ಬೈದೇತಿ ಮೂರ್ತಿಗೆ ಅಪಮಾನ ಪ್ರಕರಣ

ಪಡುಮಲೆಯ ದೇಯಿ ಬೈದೇತಿಯ ಔಷದ ವನದಲ್ಲಿ ದುಷ್ಕರ್ಮಿಯೊಬ್ಬ ಅಶ್ಲೀಲಕರವಾಗಿ ಚಿತ್ರೀಕರಿಸಿ ವಿಕೃತಿ ಮೆರೆದಿದ್ದಾನೆ ಮತ್ತು ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟು ತುಳುನಾಡಿನ ಆರಾಧ್ಯ ದೈವ ದೇಯಿ ಬೈದೇತಿಯ ಭಕ್ತರ ಹಾಗೂ ಅಖಂಡ ಹಿಂದೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುತ್ತಾರೆ. ಈ ರೀತಿ ಧಕ್ಕೆ ತಂದಿರುವ ದುಷ್ಕರ್ಮಿ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಯುವವಾಹಿನಿ(ರಿ) ಸುಳ್ಯ ಘಟಕದ ವತಿಯಿಂದ ಸುಳ್ಯ ಪೋಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲಾಯಿತು. ಈ […]

Read More

ರಕ್ತದಾನ ಶಿಬಿರ

ರಕ್ತದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದೆ . ನಾವು ದಾನ ಮಾಡುವ ರಕ್ತದಿಂದ ಜೀವ ಉಳಿಸಬಹುದಾಗಿದೆ ;ರಕ್ತದಾನದಿಂದ ಆರೋಗ್ಯವೂ ಉಲ್ಲಾಸಮಯವಾಗಿರುತ್ತದೆ . ಯುವವಾಹಿನಿ ಪುತ್ತೂರು ಘಟಕವು ಇಂತಹ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಾ ವರ್ಷ 365 ದಿನಗಳಲ್ಲಿ ಕೂಡ ರಕ್ತದ ಅವಶ್ಯಕತೆ ಇದ್ದವರಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು ದಿನಾಂಕ 01.10.2017 ರಂದು ಯುವವಾಹಿನಿ (ರಿ ) ಪುತ್ತೂರು ಘಟಕದ ಆಶ್ರಯದಲ್ಲಿ […]

Read More

ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯಾತ್ರೆಯಲ್ಲಿ ಪಾನೀಯ ಸೇವೆ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಉತ್ಸವದ ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯತ್ರೆಯು ದಿನಾಂಕ 30.09.2017 ರಂದು ವೈಭವದಿಂದ ಸಂಪನ್ನಗೊಂಡಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಂಗಳೂರು ದಸರಾ ಶೋಭಾಯಾತ್ರೆಗೆ ವಿವಿಧ ಸಂಘ ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ ,ಸಾಂಸ್ಕೃತಿಕ, ಹುಲಿವೇಷ ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಯೂರಿನ ಬಣ್ಣದ ಕೊಡೆಗಳು, ಕೇರಳದ ಚೆಂಡೆ ವಾದ್ಯ, ಕಲ್ಲಡ್ಕದ ಶಿಲ್ಪಾ ಬೊಂಬೆ ಬಳಗ, ಬೆಂಗಳೂರಿನ ಬ್ಯಾಂಡ್ ಬಳಗ, ಸೋಮನ ಕುಣಿತ, ಪೂಜಾ ಕುಣಿತಗಳು, ರಾಜ್ಯದ ವಿವಿಧ ಸಾಂಸ್ಕೃತಿಕ ಕಲಾ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಪುತ್ತೂರು ಎಂಡೋ ಪಾಲನಾ ಕೇಂದ್ರಕ್ಕೆ ಕೊಡುಗೆ

ಯುವವಾಹಿನಿ (ರಿ) ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ಪುಣ್ಯ ತಿಥಿಯ ಪ್ರಯುಕ್ತ ದಿನಾಂಕ 27.09.2017 ರಂದು ಪುತ್ತೂರು ಕೊಯಿಲ ಎಂಡೋ ಪಾಲನಾ ಕೇಂದ್ರಕ್ಜೆ ಬೇಟಿ ನೀಡಿ ಎಂಡೋ ಸಂತ್ರಸ್ತರಿಗೆ ವಿಶೇಷ ರೀತಿಯ 10 ಜೊತೆ ಶೂ ಹಾಗೂ ಊಟೋಪಚಾರದ ಕೊಡುಗೆ ನೀಡಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜ, ಜತೆ ಕಾರ್ಯದರ್ಶಿ ರವೀಂದ್ರ ಸಂಪ್ಯ, ಉಪಾಧ್ಯಕ್ಷರಾದ ಹರೀಶ್ ಶಾಂತಿ, ಮಾಜಿ ಅಧ್ಯಕ್ಷರಾದ ಬಿ.ಟಿ.ಮಹೇಶ್ ಚಂದ್ರ ಸಾಲ್ಯಾನ್, ಪ್ರಭಾಕರ ಸಾಲ್ಯಾನ್, ನಿರ್ದೇಶಕರಾದ ಸುರೇಶ್ ಸಂಪ್ಯ, ಹರೀಶ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!