04-01-2026, 1:55 PM
ಹೆಜಮಾಡಿ: ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದಾಗ ಸಂಘಟನೆಗಳು ಇನ್ನಷ್ಟು ಸದೃಢವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಹೇಳಿದರು. ಅವರು ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಆಯೋಜಿಸಲಾದ ತುಳು ಹಾಸ್ಯಮಯ ನಾಟಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ದಿನಾಂಕ 04-01-2026ರಂದು ಡಾ. ದೇವದಾಸ್ ಕಾಪಿಕಾಡ್ ಅವರ “ಎನ್ನನೇ ಕಥೆ” ತುಳು ಹಾಸ್ಯಮಯ […]
Read More
04-01-2026, 1:47 PM
ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಮಂಗಳೂರು ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿದರು ಕಾರ್ಯಕ್ರಮವು ಭಕ್ತಿಭಾವ ಹಾಗೂ ನೆರವೇರಿತು.
Read More
04-01-2026, 12:17 PM
ಮಂಗಳೂರು: ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವಾರ್ಷಿಕ ಜಾತ್ರಾ ಉತ್ಸವದ ಅಂಗವಾಗಿ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಶಕ್ತಿ ನಗರ ಘಟಕದ ಸದಸ್ಯರಿಂದ ಸ್ವಯಂಸೇವಾ ಕಾರ್ಯ ನಡೆಯಿತು. ಜಾತ್ರೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸ್ವಚ್ಛತೆ, ಶಿಸ್ತು ಹಾಗೂ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಸೇವೆಯೇ ಸಾಧನೆ ಎಂಬ ಧ್ಯೇಯದೊಂದಿಗೆ ಯುವವಾಹಿನಿ ಶಕ್ತಿ ನಗರ ಘಟಕದ ಸದಸ್ಯರು ಸಮಾಜಮುಖಿ ಸೇವೆ ಸಲ್ಲಿಸಿ ಮೆಚ್ಚುಗೆಗೆ ಪಾತ್ರರಾದರು. ಈ ಸ್ವಯಂಸೇವಾ ಕಾರ್ಯವು ಯುವವಾಹಿನಿಯ […]
Read More
04-01-2026, 12:10 PM
ಮಂಗಳೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವರ್ಷಾವಧಿ ಉತ್ಸವದ ಪ್ರಯುಕ್ತ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಸ್ವಯಂಸೇವಾ ಕಾರ್ಯದಲ್ಲಿ ತೊಡಗಿ ಸೇವೆ ಸಲ್ಲಿಸಿದರು. ಉತ್ಸವದ ವೇಳೆ ಭಕ್ತಾದಿಗಳಿಗೆ ಸಹಾಯ, ಶಿಸ್ತು ಹಾಗೂ ಸ್ವಚ್ಛತೆ ಕಾಪಾಡುವ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಸಮಾಜಮುಖಿ ಸೇವೆಯ ಮೂಲಕ ಯುವವಾಹಿನಿ ಕೊಲ್ಯ ಘಟಕವು ಸಂಘಟನೆಯ ಸೇವಾ ಧ್ಯೇಯವನ್ನು ಮತ್ತೊಮ್ಮೆ ಸಾರಿತು.
Read More
04-01-2026, 11:24 AM
ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]
Read More
04-01-2026, 7:01 AM
ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ಪೂಜ್ಯ ನಾರಾಯಣ ಗುರುಗಳು ರಚಿಸಿದ “ದೈವ ದಶಕಂ” ಕೃತಿಯ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಸದಸ್ಯರು […]
Read More
04-01-2026, 3:32 AM
ಪಣಂಬೂರು ಕುಳಾಯಿ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿಯಲ್ಲಿ ನಡೆದ ವರ್ಷಾವಧಿ ಉತ್ಸವದ ಸಂದರ್ಭದಲ್ಲಿ ದಿನಾಂಕ 04.01.2026 ರಂದು ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಸದಸ್ಯರು ಸ್ವಯಂಸೇವೆಯ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಉತ್ಸವದ ಅವಧಿಯಲ್ಲಿ ಶಿಸ್ತು, ಸಹಕಾರ ಮತ್ತು ಸೇವಾಭಾವನೆಯೊಂದಿಗೆ ಯುವವಾಹಿನಿ ಸದಸ್ಯರು ಕಾರ್ಯ ನಿರ್ವಹಿಸಿದರು
Read More
03-01-2026, 11:00 PM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್ಸ್ಟ್ಯಾಂಡ್ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]
Read More
03-01-2026, 4:09 AM
ಕಾರ್ಕಳ: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ “ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ” ಕಾರ್ಯಕ್ರಮವು ಜನವರಿ 3ರಂದು ಘಟಕದ ಪೂರ್ವಾಧ್ಯಕ್ಷರಾದ ಗಣೇಶ್ ಸಾಲ್ಯಾನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮವನ್ನು ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಸರಕಾರ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು […]
Read More
01-01-2026, 12:29 PM
ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವು ಜಾತಿ–ಮತ–ಭೇದಗಳನ್ನು ಮೀರಿ ಮಾನವೀಯತೆಯ ಆಧಾರದ ಮೇಲೆ ಸಮಾಜವನ್ನು ಒಗ್ಗೂಡಿಸುವ ಶಾಶ್ವತ ಚಿಂತನೆಯಾಗಿದೆ. ಗುರುಗಳ ತತ್ತ್ವಗಳು, ಶಾಂತಿ, ಸೌಹಾರ್ದತೆ ಮತ್ತು ಸಮತೋಲನದ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ. ಗುರುಗಳ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸಮಾಜ ಸಮರಸತೆ ಸಾಧ್ಯವಾಗುತ್ತದೆ ಎಂಬ ಸತ್ಯವನ್ನು ಈ ಚಿಂತನೆ ನಮಗೆ ನೆನಪಿಸುತ್ತದೆ ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಜನವರಿ 01ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ರಾಮನಗರ ಮದ್ವದಲ್ಲಿ, ಯುವವಾಹಿನಿ ಬಂಟ್ವಾಳ […]
Read More