Yuvavahini

ಘಟಕಗಳು

ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

    ಮಾಣಿ ಘಟಕದ “ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನ ಮಣ್ಣು ಅಂದರೆ ಅದಕ್ಕೆ ಅದರದೇ ಆದ ಗುಣವಿದೆ. ರೋಗರುಜಿನ ಗುಣ ಮಾಡುವ ಶಕ್ತಿ ಇದೆ. ಅದರಲ್ಲೂ ಕೆಸರುಗದ್ದೆಯ ಮಣ್ಣು ಅಂದರೆ ಇನ್ನೂ ಶ್ರೇಷ್ಠವಾದದ್ದು ಅಂಥ ನಮ್ಮ ಹಿರಿಯರ ಮಾತು. ಇದರ ಜೊತೆಗೆ ನಮ್ಮ ಗ್ರಾಮೀಣ ಕ್ರೀಡೆಯನ್ನು ನೆನಪಿಸುವ ದೃಷ್ಠಿಯಿಂದ ಇಂದು ಘಟಕದ ಸದಸ್ಯರಿಗೆ ಕುಟುಂಬ ಸಮ್ಮಿಲನ ರೀತಿಯಲ್ಲಿ ಸುತ್ತಲಿನ ಹತ್ತು ಗ್ರಾಮದ ಬಿಲ್ಲವ ಬಾಂಧವರ ಜೊತೆಗೂಡಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ ಅನಂತಾಡಿಯ […]

Read More

ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ-2019”

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, […]

Read More

ಮದ್ಯಮುಕ್ತ ಮದರಂಗಿ

ಯುವವಾಹಿನಿಯೆಂಬ ಕೂಡುಕುಟುಂಬದ ಸದಸ್ಯರೊಬ್ಬರ ಮದುವೆಯಲ್ಲಿ “””ಮದ್ಯಮುಕ್ತ ಮದರಂಗಿ“”” ಪ್ರತಿಜ್ಞಾ ವಿಧಿ ಸಂಕಲ್ಪ ದೊಂದಿಗೆ ನೆರವೇರಿಸಿ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಸಾರಿದ ಅಭೂತಪೂರ್ವ ಕ್ಷಣ ನಮ್ಮ ಘಟಕದ ಸದಸ್ಯರಾದ ಚಿ.ರಕ್ಷಿತ್ ಕೃಷ್ಣ ಸನಿಲ್ ರವರ ಮದುವೆಯ ಮದರಂಗಿ ಕಾರ್ಯಕ್ರಮ ವು ತಾರೀಕು 13-11-2019 ನೇ ಬುಧವಾರದಂದು ಸಾಯಂಕಾಲ ಮದುಮಗನ ನಿವಾಸ ಕೊಲ್ಯ ಕನೀರುಬೀಡುವಿನಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂತ ಸೆಬಾಸ್ಟಿಯನ್ ಕಾಲೇಜು ಪೆರ್ಮನ್ನೂರು ತೊಕ್ಕೋಟು ಇಲ್ಲಿಯ ಉಪನ್ಯಾಸಕರಾದ ಸಾಹಿತಿ ಅರುಣ್ ಉಳ್ಳಾಲ್ ರವರ ಆಶಯ ಭಾಷಣದಲ್ಲಿ ತಿಳಿಯಪಡಿಸಿದ ವಿಚಾರ […]

Read More

ಮಕ್ಕಳಿಗೆ ಛದ್ಮವೇಷ ಸ್ಪರ್ಧೆ

ಬಿಲ್ಲವ ಸಮಾಜ ಸೇವಾ ಸಂಘ ಎಕ್ಕಾರು-ಪೆರ್ಮುದೆ ಹಾಗು ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಜಂಟಿ ಆಶ್ರಯದಲ್ಲಿ 14/11/2019 ಮಕ್ಕಳ ದಿನಾಚರಣೆಯಂದು ಅಂಗನವಾಡಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನ ಹಾಗು ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಅಧ್ಯಕ್ಷರಾದ ಸಂದೇಶ್ ಪೂಜಾರಿ, ಗ್ರಾಮ ಪಂಚಾಯತ್ ಪೆರ್ಮುದೆ ಇದರ ಅಧ್ಯಕ್ಷರಾದ ಸರೋಜ, ಯುವವಾಹಿನಿ(ರಿ) ಎಕ್ಕಾರು-ಪೆರ್ಮುದೆ ಇದರ ಹಿರಿಯ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ, ಚಂದ್ರಕಲಾ ಹಾಗು ಇತರ ಸದಸ್ಯರು ಉಪಸ್ಥಿತರಿದ್ದರು.

Read More

ಮದ್ಯಮುಕ್ತ ಮದರಂಗಿ

ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]

Read More

ಮಕ್ಕಳ ದಿನಾಚರಣೆ

ವಿದ್ಯೆ ,ಉದ್ಯೋಗ, ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ)ಕಡಬ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ನ.14ರಂದು ಕಡಬ ತಾಲೂಕಿನ ಮೀನಾಡಿ ದ.ಕ.ಜಿ.ಪ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಯುವವಾಹಿನಿ ಕಡಬ ಘಟಕದ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲರವರು ಐಡಿ ಕಾರ್ಡ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೀನಾಡಿ ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಗಿರಿಧರ ಯುವವಾಹಿನಿ ಪದಾಧಿಕಾರಿಗಳಾದ ಜಯಪ್ರಕಾಶ್ ದೋಳ,ತಾರನಾಥ ಮರ್ಧಳ ,ಸರಿತಾ ಉಂಡಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ (ರಿ,) ಮುಲ್ಕಿ ಘಟಕದ ವತಿಯಿಂದ 14.11.2019ರಂದು ಮುಲ್ಕಿಯ ಸಿ.ಎಸ್ .ಐ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ವನ್ನು ಏರ್ಪಾಡಿಸಿಲಾಯಿತು. ಘಟಾಕಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮ ವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ರಾದ ಲೋಕೇಶ್ ಅಮೀನ್ ರವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಕಾರ್ಯ ಕ್ರಮ ದ ಪ್ರಾರಂಭದಲ್ಲಿ ಬಾಲಿಕಾಶ್ರಮದ ಮಕ್ಕಳು ಪ್ರಾರ್ಥನೆ ಗೈದರು, ಅಧ್ಯಕ್ಷರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಕಾರ್ಯ ಕ್ರಮ ವನ್ನು ಊಧ್ಘಾಟಿಸಿ ಮಾತಾನಾಡಿದ ಲೋಕೇಶ್ ಅಮೀನ್ ರು ತನ್ನ ನೆರೆಕರೆಯ […]

Read More

ಮಕ್ಕಳ ದಿನಾಚರಣೆ

ದಿನಾಂಕ 14.11.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಯುವವಾಹಿನಿ ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಸಂವೇದನಾ ಮಕ್ಕಳ ಆಶ್ರಮ ನಂತೂರು, ತಾರೆತೋಟ ಇಲ್ಲಿ ಆಚರಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೀಪ ಪ್ರಜ್ವಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ನಮ್ಮ ಘಟಕದ ವತಿಯಿಂದ ಎಲ್ಲಾ ಮಕ್ಕಳಿಗೂ 10,600 ರೂ ಪಾದರಕ್ಷೆಗಳನ್ನು ವಿತರಿಸಲಾಯಿತು. […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ (ರಿ) ವೇಣೂರು ಘಟಕ  ಇದರ ವತಿಯಿಂದ ಸ್ಪೂರ್ತಿ ಭಿನ್ನಚೇತನಾ ಶಾಲೆ ಮೂಡಬಿದಿರೆಯಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ ವಹಿಸದ್ದರು .ಮಕ್ಕಳಿ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು .ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಿತೀಶ್ ಎಚ್, ಘಟಕದ ಸಲಹೆಗಾರರಾದ ಹರೀಶ್ ಪೋಕ್ಕಿ, ಘಟಕದ ಕೋಶಧಿಕಾರಿ ಹರೀಶ್ ಪಿ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!