Yuvavahini

ಘಟಕಗಳು

ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆ

ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 30-07-2016 ರಂದು ಬಲ್ಮಠದ ಶ್ರದ್ಧಾನಂದ ಆಶ್ರಮದ ಮಕ್ಕಳಿಗೆ ಕ್ಷೌರ ಸೇವೆಯನ್ನು (hair cutting) ಘಟಕದ ಕೆಲವು ಸೌಂದರ್ಯ ತಜ್ಞೆಯರಿಂದ ನಡೆಸಿಕೊಡಲಾಯಿತು. ಮಕ್ಕಳಿಗೆ ಸ್ವೀಟ್, ಬಿಸ್ಕೆಟ್, ಪೆನ್, ಪೆನ್ಸಿಲ್‌ಗಳನ್ನು ನೀಡಲಾಯಿತು. ಸುಮಾರು 35 ಮಕ್ಕಳು ಇವುಗಳ ಪ್ರಯೋಜನ ಪಡೆದರು.

Read More

ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ

ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]

Read More

ಹಳೆಯಂಗಡಿ ಘಟಕದ ವತಿಯಿಂದ ಆಟಿದ ಆಯನ ಕಾರ್ಯಕ್ರಮ

ಯುವವಾಹಿನಿ(ರಿ) ಹಳೆಯಂಗಡಿ ವತಿಯಿಂದ ದಿನಾಂಕ 24-7-2016 ರಂದು ಆಟಿದ ಆಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕೋಟಿ ಚೆನ್ನಯರು ಆರಾಧಿಸಿದ ಕೆಮ್ಮಲೆಜೆಯ ನಾಗಬ್ರಹ್ಮ ಗುಡಿಯ ಆಕರ್ಷಕ ರಂಗ ವಿನ್ಯಾಸದ ವೇದಿಯಲ್ಲಿ ಹಳೆಯಂಗಡಿ ಯುವವಾಹಿನಿಯ ಅವಳಿ ಸದಸ್ಯರ ಕೋಟಿ-ಚೆನ್ನಯ ಕಿರು ರೂಪಕದೊಂದಿಗೆ ಕಾರ್ಯಕ್ರಮ ಆರಂಭ. ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ಹಾಗೂ ತುಳು ಚಿತ್ರನಟ, ರಂಗಭೂಮಿ ಕಲಾವಿದ ಶ್ರೀ ಅರವಿಂದ ಬೋಳಾರ್ ಇವರು ನಾಗಬ್ರಹ್ಮ ಗುಡಿಯ ಜೋಡು ನಂದಾ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ವಿಶಿಷ್ಠವಾಗಿ […]

Read More

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ವಿವಿಧ ಕಾರ್ಯಕ್ರಮಗಳು

ಘಟಕದ ವತಿಯಿಂದ ತಾ. 16-7-2016 ರಂದು ಕೋಡಿಕಲ್ ದ.ಕ. ಜಿಲ್ಲಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಆಚರಣೆ, ಸಸಿ ವಿತರಣೆ ಹಾಗೂ ಶಾಲೆಯ 30 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಜರಗಿರುತ್ತದೆ. ಕಾರ್ಯಕ್ರಮವನ್ನು ಕೋಡಿಕಲ್ ಬಿಲ್ಲವ ಸಂಘ ಇದರ ಅಧ್ಯಕ್ಷೆ ಶ್ರೀಮತಿ ಲೋಲಾಕ್ಷಿ ದೇವೇಂದ್ರ ಕೋಟ್ಯಾನ್‌ರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಯ ಜಯಪ್ಪ ಅದ್ಯಪಾಡಿ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ವೀಣಾ ಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿದ್ಯಾ ರಾಕೇಶ್, ಘಟಕದ ಸಲಹೆಗಾರರ ಸಾಧು ಪೂಜಾರಿ ಹಾಗೂ […]

Read More

ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಯುವವಾಹಿನಿ (ರಿ) ಉಡುಪಿ ಘಟಕದ ಇದರ ನೇತೃತ್ವದಲ್ಲಿ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ತಾ. 17-7-2016 ರಂದು ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜೇಂದ್ರ ಕುಮಾರ್ ಉಪಾಧ್ಯಕ್ಷರು ತಾಲೂಕು ಪಂಚಾಯತ್ ಉಡುಪಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ(ರಿ) ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಯುವ ಉದ್ಯಮಿಗಳಾದ ಜಗನ್ನಾಥ ಪೂಜಾರಿ ಮತ್ತು ಲ|ಶಾಲಿನಿ ಡಿ.ಬಂಗೇರ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 19 ಮಕ್ಕಳಿಗೆ ರೂ. 65000 ದಷ್ಟು ವಿದ್ಯಾನಿಧಿಯನ್ನು ವಿತರಿಸಲಾಯಿತು. ವಿದ್ಯಾನಿಧಿ ಸಂಚಾಲಕರಾದ ರಘುನಾಥ್ […]

Read More

ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ […]

Read More

ಮುಲ್ಕಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ ಅಭಿಯಾನ

ಇಪ್ಪತ್ತನೇ ಶತಮಾನದ ಪ್ರಾರಂಭದಲ್ಲಿ ಕೇರಳ ಹಾಗೂ ಕರ್ನಾಟಕದಲ್ಲಿ ಅಸ್ಪೃಶ್ಯತೆ, ಮೂಢನಂಬಿಕೆ, ಬಡತನ, ಅಜ್ಞಾನ ಹಾಗೂ ಜಾತೀಯತೆ ತಾಂಡವಾಡುತ್ತಿದ್ದು, ಸಂಪೂರ್ಣ ಕೇರಳವೇ ಒಂದು ಭ್ರಾಂತಾಲಯವೆಂದು ಸ್ವಾಮಿ ವಿವೇಕಾನಂದರಿಂದ ಕರೆಯಲ್ವಟ್ಟ ದಿನಗಳವು, ಬಿಡುಗಡೆ ಇಲ್ಲದ ಬೇಡಿಯಿಂದ ಶತಮಾನಗಳಿಂದಲು ಅಸ್ಪೃಶ್ಯರು ಮೇಲ್ವರ್ಗದವರೆಂದು ಗುರುತಿಸಲ್ಪಟ್ಟ ಜನರಿಂದ ತುಳಿತಕ್ಕೊಳಪಟ್ಟಿದ್ಟರು. ಜಾತಿಬೇಧದ ಬೇರುಗಳ ಜೊತೆ ದಾಸ್ಯದ ಭೀಕರತೆ ಜನಜೀವನದಲ್ಲಿ ಬಹಳ ಆಳಕ್ಕೆ ಇಳಿದಿತ್ತು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷ ರಾಜೀವ್ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ಪೊಲೀಸ್ ಅಧಿಕಾರಿ ಶಾಂತಾರಾಮ್ ಇವರಿಗೆ ಅಭಿನಂದನೆ

ಪೊಲೀಸ್ ಇಲಾಖೆಯಲ್ಲಿನ ತಮ್ಮ ವಿಶೇಷ ಸೇವೆಗಾಗಿ 2015-16 ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪ್ರಾಮಾಣಿಕ, ನಿಷ್ಠಾವಂತ ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್ ಇವರನ್ನು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಯುವವಾಹಿನಿ ಸಲಹೆಗಾರರಾದ ಬಿ. ತಮ್ಮಯ, ಅಣ್ಣು ಪೂಜಾರಿ, ಅಧ್ಯಕ್ಷರಾದ ರಾಜೇಶ್ ಸುವರ್ಣ, ಕೋಶಾಧಿಕಾರಿ […]

Read More

ಯುವವಾಹಿನಿ(ರಿ) ಹಳೆಯಂಗಡಿ ಘಟಕದಿಂದ ಉಚಿತ ಪುಸ್ತಕ ವಿತರಣೆ

ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ: 12-6-2016 ರಂದು ಹಳೆಯಂಗಡಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಕೊಲ್ನಾಡು ದಿ! ಕಮಲ ಬೂಬ ಅಮೀನ್‌ರವರ ಸ್ಮರಣಾರ್ಥ ಅವರ ಮಕ್ಕಳಿಂದ (ಪೂಜಾ ಎರೇಂಜರ್‍ಸ್ & ಕೆಟರರ್‍ಸ್) ಇವರ ಪ್ರಾಯೋಜಕತ್ವದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ.ಗಣೇಶ್ ಜಿ. ಬಂಗೇರ ವಹಿಸಿದರು. ಶ್ರೀ ಜೈಕೃಷ್ಣ ಬಿ. ಕೋಟ್ಯಾನ್, ಮಾಲಕರು ಪೂಜಾ ಎರೇಂಜರ್‍ಸ್ & ಕೆಟರರ್‍ಸ್ ಹಳೆಯಂಗಡಿ ಇವರು ಹಳೆಯಂಗಡಿ ಸುತ್ತಮುತ್ತಲ್ಲಿನ 41 ಅರ್ಹ ಶಾಳಾ ಮತ್ತು ಕಾಲೇಜು […]

Read More

ಹರೀಶ್ ಕುಟುಂಬಕ್ಕೆ ಬಂಟ್ವಾಳ ಯುವವಾಹಿನಿಯ ಸಹಾಯ ಹಸ್ತ

ಬಂಟ್ವಾಳ ತಾಲೂಕಿನ ನಾವೂರು ಹಳೆಗೇಟು ಬಳಿ ಗುರುವಾರ ರಾತ್ರಿ ಅಮಾಯಕ ಯುವಕ ಹರೀಶ್ ಪೂಜಾರಿಯನ್ನು ಹತ್ಯೆ ಮಾಡಿರುವುದು ಕ್ರೂರ ಹಾಗೂ ಸಹಿಸಲಸಾಧ್ಯವಾದ ಉಗ್ರ ಕೃತ್ಯ ಹಾಗೂ ಅಮಾಯಕ ಹರೀಶ್ ಪೂಜಾರಿಯನ್ನು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದ್ದಾರೆ. ದಿನಾಂಕ 15-11-2015 ನೇ ಆದಿತ್ಯವಾರದಿಂದ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸುಮಾರು 40 ಸದಸ್ಯರು ಮೃತ ಹರೀಶ ಪೂಜಾರಿ ಮನೆಗೆ ತೆರಳಿ ಸಾಂತ್ವಾನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!