Yuvavahini

ಘಟಕಗಳು

ಯಕ್ಷಗಾನ ಪ್ರದರ್ಶನ ಹಾಗೂ ಆರೋಗ್ಯ ನಿಧಿ ಹಸ್ತಾಂತರ

ಪೆರ್ಮಂಕಿ : ಯುವವಾಹಿನಿ (ರಿ.) ಪೆರ್ಮಂಕಿ ಘಟಕದ ವತಿಯಿಂದ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ಶ್ರೀದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲ್ಕುಡ-ಕಲ್ಲುರ್ಟಿ ದೈವದ ಮಹಾತ್ಮೆ ಸಾರುವ ‘ನಾಗರತಿ’ ಎಂಬ ಕಾಲಮಿತಿ ಯಕ್ಷಗಾನ ಪ್ರದರ್ಶನವು ಪೆರ್ಮಂಕಿಯ ವಿಶಾಲ್ ಗಾರ್ಡನ್‌ನಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಸನ್ಮಾನ ಮತ್ತು ಆರ್ಥಿಕ ನೆರವು:ಇದೇ ಸಂದರ್ಭದಲ್ಲಿ ಉದ್ಯಮ ರಂಗದ ಜೊತೆಗೆ ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಪ್ರಮುಖ ಉದ್ಯಮಿ, ಸಮಾಜ ಸೇವಕ ಶೈಲೇಂದ್ರ ವೈ. ಸುವರ್ಣ ಅವರನ್ನು ಘಟಕದ ವತಿಯಿಂದ ಅತ್ಯಂತ […]

Read More

ಶ್ರದ್ಧಾ-ಭಕ್ತಿಯ ‘ಮನೆ ಮನೆ ಭಜನಾ ಸಂಕೀರ್ತನೆ’

ಬಜಪೆ: ಯುವವಾಹಿನಿ ಬಜಪೆ ಘಟಕದ ವತಿಯಿಂದ ಮೇ ತಿಂಗಳ ‘ಮನೆ ಮನೆ ಭಜನಾ ಸಂಕೀರ್ತನೆ’ ಕಾರ್ಯಕ್ರಮವು ದಿನಾಂಕ 17.05.2026 ರಂದು ಸಂಜೆ 6.00 ರಿಂದ 7.30 ರವರೆಗೆ ಅತ್ಯಂತ ಶ್ರದ್ಧಾ-ಭಕ್ತಿಭಾವದಿಂದ ಜರಗಿತು. ಘಟಕದ ಮಾಜಿ ಅಧ್ಯಕ್ಷರಾದ ದೇವರಾಜ್ ಅಮೀನ್ ಹಾಗೂ ಕಾರ್ಯದರ್ಶಿ ಸುಚಿತ ದೇವರಾಜ್ ದಂಪತಿಗಳ ನಿವಾಸವಾದ ಬಜಪೆ-ಕಟೀಲ್ ರಸ್ತೆಯ “ಶಿವಗಿರಿ” ಯಲ್ಲಿ ಈ ಭಕ್ತಿಪೂರ್ವಕ ಭಜನಾ ಸೇವೆ ನೆರವೇರಿತು. ದೇವರಾಜ್ ಅಮೀನ್ ಅವರ ತಂದೆ-ತಾಯಿಯವರ 45ನೇ ವಿವಾಹ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಈ ವಿಶೇಷ ಭಜನಾ […]

Read More

ಪದಗ್ರಹಣ ಸಮಾರಂಭ

ಕೆಂಜಾರು : ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಮೇ 17ರಂದು ಕೆಂಜಾರು ಶ್ರೀದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ಜರುಗಿತು.ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಅಧ್ಯಕ್ಷರಾದ ಮಹಾಬಲ ಪೂಜಾರಿ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ ತಂಡದ ಸಮಾಜಮುಖಿ ಚಿಂತನೆಗಳಿಗೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಸಂದೀಪ್ ಕೋರೆಮನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು […]

Read More

ಅಧ್ಯಕ್ಷರಾಗಿ ಪ್ರಿತೇಶ್ ಕುಮಾರ್ ಅರ್ಬಿ

ಕೆಂಜಾರು : ಯುವವಾಹಿನಿ (ರಿ) ಕೆಂಜಾರು -ಕರಂಬಾರು ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಪ್ರಿತೇಶ್ ಕುಮಾರ್ ಅರ್ಬಿ ಆಯ್ಕೆಯಾಗಿದ್ದಾರೆ 2026-27ನೇ ಸಾಲಿನ ಕಾರ್ಯಕಾರಿ ಸಮಿತಿಅಧ್ಯಕ್ಷರು :- ಪ್ರಿತೇಶ್ ಕುಮಾರ್ ಅರ್ಬಿಒಂದನೇ ಉಪಾಧ್ಯಕ್ಷರು :- ಮಿಥುನ್ ಕುಮಾರ್ ಕರಂಬಾರುಎರಡನೇ ಉಪಾಧ್ಯಕ್ಷರು :- ನವ್ಯ ಜಯಂತ್ಕಾರ್ಯದರ್ಶಿ :- ರಾಜೇಶ್ ಎಸ್ ಪೂಜಾರಿ ಕೆಂಜಾರುಜತೆ ಕಾರ್ಯದರ್ಶಿ :- ರೇಷ್ಮ ಲೋಕೇಶ್ಕೋಶಾಧಿಕಾರಿ :- ಉಷಾ ಶಂಕರ್ವಿದ್ಯಾನಿಧಿ ನಿರ್ದೇಶಕರು : ಮಾಯ ಸಂದೀಪ್ಮಹಿಳಾ ಸಂಘಟನಾ ನಿರ್ದೇಶಕರು :-ಗೀತ ಲಿಂಗಪ್ಪ, ಪ್ರಜ್ಞಾ, ಹೇಮಲತಾ ಹೇಮಂತ್ಪ್ರಚಾರ ನಿರ್ದೇಶಕರು […]

Read More

ತಣ್ಣೀರುಬಾವಿ ಟ್ರೀ ಪಾರ್ಕ್‌ನಲ್ಲಿ ‘ಸ್ನೇಹ ಮಿಲನ’

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಮೇ 17, 2026ರಂದು ಮಂಗಳೂರಿನ ತಣ್ಣೀರುಬಾವಿ ಟ್ರೀ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವವಾಹಿನಿ ಕುಟುಂಬದ ‘ಸ್ನೇಹ ಮಿಲನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅವರು ಆಗಮಿಸಿದ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಯುವವಾಹಿನಿ ಕುಟುಂಬದ ಒಟ್ಟು 94 ಸದಸ್ಯರು ಈ ಪ್ರಕೃತಿಯ ಮಡಿಲಲ್ಲಿ ನಡೆದ ಸ್ನೇಹಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಸಂಭ್ರಮದ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳುಬೆಳಗಿನ […]

Read More

ಗುರುಸ್ಫೂರ್ತಿ’ ಕಾರ್ಯಕ್ರಮ

ಸುಳ್ಯ: ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ನಾಲ್ಕನೇ ತಿಂಗಳ ‘ಗುರುಸ್ಫೂರ್ತಿ’ ಕಾರ್ಯಕ್ರಮವು ಮೇ 17 ರಂದು ಬೆಳಿಗ್ಗೆ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ರಮೇಶ್ ಪೂಜಾರಿ ಜಯನಗರ ಇವರ ಗೃಹದಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಭಜನೆ:ಕಾರ್ಯಕ್ರಮದ ಆತಿಥ್ಯ ವಹಿಸಿದ್ದ ರಮೇಶ್ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಉದ್ಘಾಟನೆಯ ಬಳಿಕ ನೆರೆದಿದ್ದ ಸದಸ್ಯರಿಂದ ಭಕ್ತಿಪೂರ್ವಕ ಭಜನಾ ಕಾರ್ಯಕ್ರಮ ನಡೆಯಿತು. ನಾರಾಯಣ ಗುರುಗಳ ತತ್ವ […]

Read More

ಅನಾರೋಗ್ಯ ಪೀಡಿತರಿಗೆ ಧನಸಹಾಯ

ಕೊಲ್ಯ : ಮಾನವ ಸೇವೆಯೇ ಮಾಧವ ಸೇವೆ ಎಂಬ ಧ್ಯೇಯದೊಂದಿಗೆ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಜಂಟಿ ಆಶ್ರಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ “ಸಹಾಯ ಹಸ್ತ” ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ದಿನಾಂಕ 17-05-2026 ರಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ತಾಯಂದಿರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಧನಸಹಾಯ ಹಸ್ತಾಂತರಿಸಲಾಯಿತು: ಸೋಮೇಶ್ವರ ನಿವಾಸಿ ದಾಮೋದರ ಪೂಜಾರಿ ಇವರ ಧರ್ಮಪತ್ನಿಯವರ ಚಿಕಿತ್ಸಾ ವೆಚ್ಚಕ್ಕಾಗಿ. […]

Read More

ಮಲ್ಲಿಗೆ ಕೃಷಿಯ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯ: ಲತಾ ಹೆಗ್ಡೆ

ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ ಹಾಗೂ ವೀಚೀಸ್ ತರಬೇತಿ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ “ಉಚಿತ ಮಲ್ಲಿಗೆ ಕೃಷಿ ಮಾಹಿತಿ ಶಿಬಿರವು ದಿನಾಂಕ 17/05/2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಲಿಗೆ ಕೃಷಿ ಮಾಹಿತಿ ಮತ್ತು ಪ್ರೇರಣೆ : ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ […]

Read More

ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಸಮಾರಂಭ

ಯುವವಾಹಿನಿ ಉಡುಪಿ ಘಟಕದ ವತಿಯಿಂದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಮೇ 17/5/2026ರ ಭಾನುವಾರ ನಡೆಯಿತು. ಬದುಕಿನ ಅನುಭವ ಸಾಧನೆಗೆ ಪ್ರೇರಕ: ಡಾ| ಅಭಯ ಕುಮಾರ್ : ಬದುಕಿನ ಅನುಭವ ಮನುಷ್ಯನ ಸಾಧನೆಗೆ ಪ್ರೇರಕ. ಶಿಕ್ಷಣ ಮತ್ತು ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳುವುದರಿಂದ ವೃದ್ಧಿಯಾಗುತ್ತದೆ ವ್ಯಕ್ತಿತ್ವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಡಾ ಅಭಯ ಕುಮಾ‌ರ್ ಹೇಳಿದರು. ಯುವವಾಹಿನಿ ಉಡುಪಿ ಘಟಕದ ವತಿಯಿಂದ ರವಿವಾರ ಚಿಟ್ಟಾಡಿ ಲಕ್ಷ್ಮೀ ಟ್ರೇಡ್ ಸೆಂಟರ್ […]

Read More

ಸೌರಶಕ್ತಿ ಹಾಗೂ ಬ್ಯಾಂಕ್ ಸಾಲ ಸೌಲಭ್ಯ ಮಾಹಿತಿ ಕಾರ್ಯಕ್ರಮ

ಮೂಡುಬಿದಿರೆ : ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ (ಬಿ.ವಿ.ಟಿ.) ಮಣಿಪಾಲ (ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ) ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಸೌರಶಕ್ತಿ ಯೋಜನೆ ಹಾಗೂ ಬ್ಯಾಂಕ್ ಸಾಲ ಸೌಲಭ್ಯಗಳ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಸಮಾಜ ಮಂದಿರದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಅವರು, “ಪ್ರಸ್ತುತ ದಿನಗಳಲ್ಲಿ ಸೌರಶಕ್ತಿ ಆಧಾರಿತ ತಂತ್ರಜ್ಞಾನಗಳ ಬಳಕೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!