31-05-2026, 1:00 PM
ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]
Read More
31-05-2026, 1:00 PM
ಅಳಕೆ : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಶ್ರೀ ನಾರಾಯಣಗುರುಗಳ ” ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ” ಎಂಬ ಸಂದೇಶವು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು. ಜ್ಞಾನ ಮತ್ತು ಸಂಸ್ಕಾರಗಳೊಂದಿಗೆ ಪಡೆದ ಶಿಕ್ಷಣವು ವ್ಯಕ್ತಿಯನ್ನು ಉತ್ತಮ ನಾಗರಿಕನನ್ನಾಗಿ ರೂಪಿಸಿ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದರು. ಶಿಕ್ಷಣದ ಮೂಲಕ ಸಮಾನತೆ, ಸಹೋದರತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಬೆಳೆಸಿಕೊಂಡು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಂತೆ […]
Read More
30-05-2026, 9:00 PM
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ‘ಮನೆ ಮನೆ ಭಜನೆ’ ಸರಣಿಯ ಅಂಗವಾಗಿ ಘಟಕದ ಸಕ್ರಿಯ ಸದಸ್ಯರಾದ ರಾಘವೇಂದ್ರ ಪೂಜಾರಿ ಹಾಗೂ ತಾರಾವತಿ ದಂಪತಿಗಳ ರಜತ ಮಹೋತ್ಸವದ (25ನೇ ವರ್ಷದ) ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಅವರ ನಿವಾಸದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ನೆರವೇರಿತು. ಇದೇ ಸುಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಅವರ ಪೌರೋಹಿತ್ಯದಲ್ಲಿ ಭಕ್ತಿಪೂರ್ವಕ “ದುರ್ಗಾ ನಮಸ್ಕಾರ ಪೂಜೆ”ಯು ಸಂಪನ್ನಗೊಂಡಿತು. ಧಾರ್ಮಿಕ ವಿಧಿವಿಧಾನಗಳ ನಂತರ ಯುವವಾಹಿನಿ ಘಟಕದ […]
Read More
30-05-2026, 4:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ದಿನಾಂಕ 30.05.2026ರಂದುಕಕ್ವ ಕೊಕ್ರಾಣಿ ಡಾನ್ ಬಾಸ್ಕೋ ರೆಸಾರ್ಟ್ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಘಟಕದ 35 ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರು ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಘಟಕದ ಅಧ್ಯಕ್ಷರಾದ ವಿನಯಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ರೆಸಾರ್ಟ್ನ ಮಾಲಕರಾದ ಕ್ಯಾನಿ ಡಿ’ಸೋಜಾ […]
Read More
28-05-2026, 9:00 PM
ಮಂಗಳೂರು, ಮೇ 28: ಯುವವಾಹಿನಿ (ರಿ.) ಕಂಕನಾಡಿ ಘಟಕವು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಅಂಗವಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಉಜ್ಜೋಡಿ ನಿವಾಸಿ ರಾಜೇಶ್ ಅವರಿಗೆ ಆರ್ಥಿಕ ನೆರವು ನೀಡಿದೆ. ರಾಜೇಶ್ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರಿಯಾಗುವ ಉದ್ದೇಶದಿಂದ ಘಟಕದ ಸದಸ್ಯರು ಮತ್ತು ಹಿತೈಷಿಗಳ ಸಹಯೋಗದೊಂದಿಗೆ ಸಂಗ್ರಹಿಸಲಾದ Rs. 30,000/- ಮೊತ್ತದ ಧನಸಹಾಯವನ್ನು 28-05-2026 ರಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ರಾಜೇಶ್ ಅವರು ಶೀಘ್ರವಾಗಿ ಸಂಪೂರ್ಣ ಆರೋಗ್ಯವನ್ನು […]
Read More
28-05-2026, 8:00 PM
ಕಲ್ಲಡ್ಕ: “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶದ ಮೂಲಕ ಸಂಸ್ಕಾರಯುತ ಶಿಕ್ಷಣ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಇಂದಿಗೂ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು ಕಲ್ಲಡ್ಕ ಪೂರ್ಲಿಪಾಡಿಯ ಚಂದ್ರಶೇಖರ್ ಸಾಲಿಯಾನ್ ಅವರ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ–69’ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು.ಬ್ರಹ್ಮಶ್ರೀ ನಾರಾಯಣ ಗುರುಗಳು ಆಧ್ಯಾತ್ಮಿಕ […]
Read More
28-05-2026, 6:00 PM
ಸುರತ್ಕಲ್, ಮೇ 28: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಸದಸ್ಯರ ನಡುವಿನ ಒಡನಾಟ ಹಾಗೂ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ 2026ರ ಮೇ 28ರಂದು ಒಂದು ದಿನದ ಕಿರು ಪ್ರವಾಸವನ್ನು ಮುರುಡೇಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ದೇವಸ್ಥಾನ ಹಾಗೂ ಹೊನ್ನಾವರದ ಜೋಯ್ ಎಂಜಾಯ್ ವಾಟರ್ ಪಾರ್ಕ್ಗೆ ಆಯೋಜಿಸಲಾಗಿತ್ತು. ಈ ಪ್ರವಾಸದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯರ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 50 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 6.00 […]
Read More
28-05-2026, 1:00 PM
ಮೂಡುಬಿದಿರೆ, ಮೇ 28: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ನೆಟ್ವರ್ಕ್ ಪ್ರಾಯೋಜಕತ್ವದಲ್ಲಿ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಸಹಯೋಗದೊಂದಿಗೆ ಆಯೋಜಿಸಲಾದ 15 ದಿನಗಳ ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು 28-05-2026 ರಂದು ವಿಚೀಸ್ ಕೌಶಲ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಅವರು, ಮಹಿಳೆಯರು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು […]
Read More
27-05-2026, 9:00 PM
ಮಂಗಳೂರು, ಮೇ 27: ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ತುಳುನಾಡಿನ ಅಪ್ರತಿಮ ಕ್ರಾಂತಿವೀರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ಮೇ 27, 2026 ರಂದು ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಯೋಜಿಸಲಾಯಿತು. ಬ್ರಿಟಿಷರ ದಾಸ್ಯದಿಂದ ಜನರನ್ನು ಮುಕ್ತಗೊಳಿಸುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಂಜ ಬೈದ್ಯರು, ತಮ್ಮ ಧೈರ್ಯಶಾಲಿ ಹೋರಾಟದ ಪರಿಣಾಮವಾಗಿ 1837 ರ ಮೇ 27 ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟು ವೀರಮರಣವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರ […]
Read More
27-05-2026, 8:00 PM
ಕೂಳೂರು : ಸಮಾಜಮುಖಿ ಮತ್ತು ಜನಪರ ಕಾರ್ಯಕ್ರಮಗಳ ಮೂಲಕ ಸದಾ ಮುಂಚೂಣಿಯಲ್ಲಿರುವ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮತ್ತೊಂದು ಶ್ಲಾಘನೀಯ ಸೇವಾ ಕಾರ್ಯ ನಡೆದಿದೆ. ಘಟಕದ 26ನೇ ಸೇವಾನಿಧಿ ಯೋಜನೆಯಾದ ಸಹಾಯಹಸ್ತ ಕಾರ್ಯಕ್ರಮದಡಿ, ಇತ್ತೀಚೆಗೆ ಸಂಭವಿಸಿದ ಭೀಕರ ವಾಹನ ಅಪಘಾತದಿಂದ ತೀವ್ರ ತೊಂದರೆಗೆ ಒಳಗಾಗಿದ್ದ ಕಾರ್ಕಳದ ಈದು ನಿವಾಸಿ ದಯಾನಂದ ಪೂಜಾರಿ (26) ಅವರ ಕುಟುಂಬಕ್ಕೆ ತುರ್ತು ಚಿಕಿತ್ಸಾ ವೆಚ್ಚಕ್ಕಾಗಿ ರೂ.16,000/-ಧನಸಹಾಯವನ್ನು ನೀಡಲಾಯಿತು.ದಿನಾಂಕ 27-05-2026ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಘಟಕದ ಅಧ್ಯಕ್ಷೆ ಗೀತಾ ವಸಂತ್ […]
Read More