Yuvavahini

ಘಟಕಗಳು

ಕ್ರೀಡಾಂಗಣದಲ್ಲಿ ಮಹಿಳಾ ಶಕ್ತಿ : ಯುವವಾಹಿನಿಯ ಸಾಧನೆಗೆ ಸಮಾಜದ ಮೆಚ್ಚುಗೆ

ಪಡುಬಿದ್ರೆ/ಮಂಗಳೂರು : ಮಹಿಳಾ ಸಬಲೀಕರಣಕ್ಕೆ ಕ್ರೀಡೆಯನ್ನೇ ವೇದಿಕೆಯಾಗಿಸಿಕೊಂಡು, ಮಹಿಳಾ ಶಕ್ತಿಯನ್ನು ಸಮಾಜದ ಮುಂದಿಡುವ ಶ್ಲಾಘನೀಯ ಕಾರ್ಯವನ್ನು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಯಶಸ್ವಿಯಾಗಿ ನೆರವೇರಿಸಿದೆ. ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸ್ಥಳೀಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ “ಬಿಲ್ಲವ ಪ್ರೀಮಿಯರ್ ಲೀಗ್ (BPL) – 2026” ಮಹಿಳಾ ಕ್ರಿಕೆಟ್ ಪಂದ್ಯಾಟವು ಕೇವಲ ಕ್ರೀಡಾಕೂಟವಲ್ಲದೆ, ಸಂಘಟನೆ, ಏಕತೆ ಹಾಗೂ ಸಬಲೀಕರಣದ ಜೀವಂತ ಸಂದೇಶವಾಗಿ ಮೂಡಿಬಂದಿತು. ಪ್ರಮುಖವಾಗಿ ಯುವವಾಹಿನಿಯ ಮಹಿಳಾ ಸದಸ್ಯರಿಂದಲೇ ಆಯೋಜಿಸಲ್ಪಟ್ಟ ಈ […]

Read More

ಭಕ್ತಿಭಾವ, ಸಂಘಟನೆ ಮತ್ತು ಆತ್ಮೀಯತೆಯೊಂದಿಗೆ ಸ್ಮರಣೀಯ ಪ್ರವಾಸ

ಪಣಂಬೂರು : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 01-02-2026, ರವಿವಾರ ಒಂದು ದಿನದ ದೇವಸ್ಥಾನ ಯಾತ್ರೆ ಮತ್ತು ಪ್ರವಾಸ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಆತ್ಮೀಯತೆಯೊಂದಿಗೆ ಆಯೋಜಿಸಲಾಗಿತ್ತು.ಈ ಯಾತ್ರೆಯ ಅಂಗವಾಗಿ ಕಣಿಪುರ ಗೋಪಾಲ ಕೃಷ್ಣ ದೇವಸ್ಥಾನ, ಅನಂತಪುರ ಪದ್ಮನಾಭ ಸ್ವಾಮಿ ದೇವಸ್ಥಾನ, ಮಲ್ಲ ದುರ್ಗಾ ಪರಮೇಶ್ವರಿ ದೇವಸ್ಥಾನ, ಮಧೂರು ಮದನಂತೇಶ್ವರ ವಿನಾಯಕ ದೇವಸ್ಥಾನ, ಪರಶಿನ ಕಡವು ಮುತ್ತಪ್ಪ ದೇವಸ್ಥಾನ ಹಾಗೂ ಬೇಕಲ್ ಬೀಚ್ ಪ್ರವಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಯಾತ್ರಿಗಳು ಮೊದಲಾಗಿ ಕಣಿಪುರ ಗೋಪಾಲ ಕೃಷ್ಣ ದರ್ಶನ […]

Read More

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕಕ್ಕೆ ಸ್ಮರಣೀಯ ಗೌರವ

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಆಯೋಜಿಸಲಾದ 100ನೇ ಉಚಿತ ಆರೋಗ್ಯ ಶಿಬಿರದ ಸಂದರ್ಭದಲ್ಲಿ ಸಮಾಜಸೇವೆಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕವನ್ನು ಗೌರವಿಸಲಾಯಿತು, ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರು ಗೌರವ ಸ್ವೀಕರಿಸಿದರು. ಸಾರ್ವಜನಿಕ ಆರೋಗ್ಯ ಜಾಗೃತಿ, ಸೇವಾಭಾವನೆ ಮತ್ತು ಮಹಿಳಾ ಸಬಲೀಕರಣದ ದಿಸೆಯಲ್ಲಿ ಯುವವಾಹಿನಿ ಮಹಿಳಾ ಘಟಕದ ಕೊಡುಗೆಯನ್ನು ಗುರುತಿಸಿ ನೀಡಲಾದ ಈ ಗೌರವವು ಸಂಘಟನೆಯ ಸೇವಾ ಪಯಣಕ್ಕೆ ಮತ್ತಷ್ಟು ಪ್ರೇರಣೆಯಾಯಿತು.

Read More

ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಕೊಡುಗೆಗೆ ಗೌರವ

ಪಡೀಲು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇವರ ಆಶ್ರಯದಲ್ಲಿ “ಆರೋಗ್ಯ ಸೇವಾ ಸಂಗಮ” ಎಂಬ ಶೀರ್ಷಿಕೆಯಡಿ 100ನೇ ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ, ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ ಸಂಘದ ಹದಿನಾಲ್ಕನೇ ವಾರ್ಷಿಕೋತ್ಸವವು ದಿನಾಂಕ 01.02.2026ರ ಆದಿತ್ಯವಾರ ಪಡೀಲಿನ ಬೈರಾಡಿ ಕೆರೆಯ ಸಮೀಪದಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಮಾರಂಭದ ಅಂಗವಾಗಿ ಶಿಬಿರಕ್ಕೆ ಸಹಯೋಗ ನೀಡಿದ ವಿವಿಧ ಸಂಘ–ಸಂಸ್ಥೆಗಳ ಗುರುತಿಸುವಿಕೆ ಮತ್ತು ಗೌರವ ಕಾರ್ಯಕ್ರಮವನ್ನು […]

Read More

ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಕೊಲ್ಯ ಘಟಕದ ತಂಡದ ಶ್ಲಾಘನೀಯ ಪ್ರದರ್ಶನ

ಕೊಲ್ಯ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲಾದ ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್ – 2026 ಕ್ರಿಕೆಟ್ ಪಂದ್ಯಾಟದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ತಂಡವು ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡಿತು. ಪಂದ್ಯಾಟದ ಅವಧಿಯಲ್ಲಿ ಕೊಲ್ಯ ಘಟಕದ ಮಹಿಳಾ ಆಟಗಾರ್ತಿಯರು ತಮ್ಮ ಆಟದ ಮೂಲಕ ಕೌಶಲ್ಯ, ಆತ್ಮವಿಶ್ವಾಸ ಮತ್ತು ತಂಡಾತ್ಮಕ ಮನೋಭಾವವನ್ನು ಪ್ರದರ್ಶಿಸಿ, ಪ್ರೇಕ್ಷಕರ ಹಾಗೂ ಸಂಘಟಕರ ಮೆಚ್ಚುಗೆಗೆ ಪಾತ್ರರಾದರು.

Read More

ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 31.01.2026 ಶನಿವಾರ ಸಂಭ್ರಮ–2 ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಪಣಕಜೆಯ ನವಸುಮ ನಿವಾಸದಲ್ಲಿ ಆತ್ಮೀಯವಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ “ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆ ಬೆನಕ ಹೆಲ್ತ್ ಸೆಂಟರ್‌ನ ತುರ್ತು ಚಿಕಿತ್ಸಾ ತಜ್ಞರಾದ ಡಾ. […]

Read More

ಕ್ರೀಡೆ ಸಂಘಟನೆಯ ಬಲವರ್ಧನೆಗೆ ಪೂರಕ : ಸೂರ್ಯಕಾಂತ್ ಜೆ. ಸುವರ್ಣ

ಪಡುಬಿದ್ರಿ: ಕ್ರೀಡೆ ಸಂಘಟನೆಗೆ ಏಕತೆಗೆ ಅತ್ಯುತ್ತಮ ಆಯ್ಕೆ. ಕ್ರೀಡೆ ಮೂಲಕ ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಟ್ಟ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ ಎಂದು ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ತಿಳಿಸಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲ್ಪಟ್ಟ ಬಿಲ್ಲವಾಸ್ ವುಮನ್ಸ್ ಪ್ರೀಮಿಯರ್ ಲೀಗ್- 2026 ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದ ಅಂತಾರಾಷ್ಟ್ರೀಯ ಕ್ರೀಡಾಪಟು ಕು| ರಕ್ಷಾ ರೆಂಜಾಳ ಮಾತನಾಡಿ, ಇಂತಹ ವಿನೂತನ […]

Read More

ಕೋಟೆ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಕಟಪಾಡಿ : ಯುವವಾಹಿನಿ (ರಿ.) ಕಟಪಾಡಿ ಘಟಕದ ಆಶ್ರಯದಲ್ಲಿ ದಿನಾಂಕ 29/01/2026ರಂದು ಕೋಟೆ ಅಂಗನವಾಡಿ ಕೇಂದ್ರದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಸ್ಮರಣೆಯೊಂದಿಗೆ, ಘಟಕದ ಪೂರ್ವ ಅಧ್ಯಕ್ಷರಾದ ವಾಮನ್ ಪೂಜಾರಿ ಅವರು ಪ್ರಾರ್ಥನೆಯ ಮೂಲಕ ಸಮಾರಂಭಕ್ಕೆ ಭಕ್ತಿಭಾವದ ಮುನ್ನುಡಿ ನೀಡಿದರು. ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಮೀಳಾ ಜತ್ತನ್ ಹಾಗೂ ಕೋಟೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ದಯಾನಂದ ಬಂಗೇರ ಅವರು ಉದ್ಘಾಟಿಸಿದರು.ಯುವವಾಹಿನಿ (ರಿ.) ಕಟಪಾಡಿ ಘಟಕದ […]

Read More

ಮನೆ ಮನದಲ್ಲಿ ಭಜನೆ

ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಮನೆ ಮನದಲ್ಲಿ ಭಜನೆ” ಯೋಜನೆಯ ಅಂಗವಾಗಿ, ದಿನಾಂಕ 28-01-2026 ಬುಧವಾರ ಘಟಕದ ಗೌರವ ಸದಸ್ಯರಾದ ಪ್ರಕಾಶ್ ಪೂಜಾರಿ ಅವರ ಮನೆಯಲ್ಲಿ ಸಂಜೆ 6:00 ಗಂಟೆಗೆ ಗುರುಪೂಜೆ ಹಾಗೂ ಘಟಕದ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಭಕ್ತಿ–ಭಾವಪೂರ್ಣ ಭಜನಾ ಕೀರ್ತನೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರಾದ ಸದಾನಂದ ಪೂಜಾರಿ ಅವರು ಗುರುಪೂಜಾ ಕಾರ್ಯವನ್ನು ನೆರವೇರಿಸಿದರು. ಭಜನಾ ಸೇವೆಗೆ ಆತಿಥ್ಯ ವಹಿಸಿದ ಪ್ರಕಾಶ್ ಪೂಜಾರಿ ದಂಪತಿಗಳನ್ನು ಘಟಕದ ವತಿಯಿಂದ […]

Read More

ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಹರೀಶ್ ಕೆ ಸುವರ್ಣ ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರೀಶ್ ಕೆ ಸುವರ್ಣ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ಹರೀಶ್ ಕೆ.ಸುವರ್ಣಪ್ರಥಮ ಉಪಾಧ್ಯಕ್ಷರು : ಯತೀಶ್ ಬಳಂಜದ್ವಿತೀಯ ಉಪಾಧ್ಯಕ್ಷರು : ಮಹೇಶ್ ಅಮೀನ್ಕಾರ್ಯದರ್ಶಿ : ಉಷಾ.ಕೆ ಪೂಜಾರಿಜೊತೆ ಕಾರ್ಯದರ್ಶಿ : ತಿಲಕ್ ರಾಜ್ ಸುವರ್ಣಕೋಶಾಧಿಕಾರಿ : ಚಂದ್ರಶೇಖರ್ ಕಿನ್ನಿಗೋಳಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಶ್ರೀಕಾಂತ್ ಅಂಚನ್ಕ್ರೀಡಾ ನಿರ್ದೇಶಕರು : ಸುಜೀತ್ ಕೋಟಾನ್ಆರೋಗ್ಯ ನಿರ್ದೇಶಕರು : ಶಶೀಂದ್ರ ಪೂಜಾರಿಸಮಾಜ ಸೇವಾ ನಿರ್ದೇಶಕರು :ದಿನೇಶ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!