Yuvavahini

ಘಟಕಗಳು

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ವೈದ್ಯಕೀಯ ಶಿಬಿರ

ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ದಿನಾಂಕ 10.02.2019 ರಂದು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಮುಕ್ಕ ಶ್ರೀನಿವಾಸ ದಂತ ವೈದ್ಯಕೀಯ ಕಾಲೇಜಿನ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಯುವವಾಹಿನಿ (ರಿ)ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುಪ್ಪೆಪದವು ಘಟಕದ ಕೃಷಿ ಚಟುವಟಿಕೆಯ ಬಗ್ಗೆ ಶ್ಲಾಘಿಸಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೊಟ್ಟು ಸಭೆಯ ಅಧ್ಯಕ್ಷತೆ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27

ಅಡ್ವೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಅಡ್ವೆ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27 ನಡೆಯಿತು. ಯುವವಾಹಿನಿ (ರಿ‌.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಮಾಜಿ ಸಂಚಾಲಕರಾದ  ಟಿ.ಶಂಕರ್ ಸುವರ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಂಸ್ಕ್ರತಿಕ […]

Read More

ಕಿಡ್ನಿ ವೈಫಲ್ಯ ಚಿಕಿತ್ಸೆಗೆ ನೆರವು

ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ […]

Read More

ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ -ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮವು ಪೆಬ್ರವರಿ 9ರಂದು ಯುವವಾಹಿನಿ ಸುರತ್ಕಲ್ ಘಟಕದ ವಾರದ ಸಭೆಯಲ್ಲಿ ನಡೆಯಿತು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಟಿ.ಶಂಕರ್ ಸುವರ್ಣ ಮತ್ತು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕರಾದ ಪ್ರದೀಪ್.ಎಸ್ .ಆರ್ ಸಸಿಹಿತ್ಲು ಭಾಗವಹಿಸಿದರು. ಟಿ. ಶಂಕರ್ ಸುವರ್ಣರವರು ,ವಿಶುಕುಮಾರವರ ಬರಹ, ಚಲನಚಿತ್ರ, ನಿರ್ದೇಶನ ಮತ್ತು ಅವರ ಜೀವನದ ಸಮಗ್ರ ಮಾಹಿತಿಯನ್ನುಸಭೆಗಿತ್ತರು. […]

Read More

ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]

Read More

ಯುವವಾಹಿನಿ(ರಿ.) ಬಜ್ಪೆ ಘಟಕದ ವತಿಯಿಂದ ಬಜ್ಪೆ ವಲಯದ ವಿಶುಕುಮಾರ್ ಭಾಷಣ ಸ್ಪರ್ಧೆ

ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು‌ ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]

Read More

ಯುವವಾಹಿನಿ ಯುವಕರ ಪ್ರೇರಕ ಶಕ್ತಿ: ವಸಂತ ಬಂಗೇರ

ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]

Read More

ಪದಗ್ರಹಣ – ಸಾರಥ್ಯ 2019

ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!