14-06-2026, 6:00 PM
ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2026-27 ನೇ ಸಾಲಿನ ಅಧ್ಯಕ್ಷರಾಗಿ ವಿಜೇತ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ 2026-27 ನೇ ಸಾಲಿನ ಕಾರ್ಯಕಾರಿ ಸಮಿತಿ ಅಧ್ಯಕ್ಷರು : ವಿಜೇತ್ ವಿ ಪೂಜಾರಿಪ್ರಥಮ ಉಪಾಧ್ಯಕ್ಷರು : ಕಿಶೋರ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ಸಚಿಂದ್ರ ಕೋಟ್ಯಾನ್ಕಾರ್ಯದರ್ಶಿ : ಮನೋಜ್ ಕುಮಾರ್ ಟಿಜೊತೆ ಕಾರ್ಯದರ್ಶಿ : ಪ್ರಜ್ವಲ್ ಕೋಟ್ಯಾನ್ಕೋಶಾಧಿಕಾರಿ : ಶ್ರುತಿ ಸಾಲ್ಯಾನ್ಆಂತರಿಕ ಲೆಕ್ಕಪರಿಶೋಧಕರು : ಅಶ್ವಿನಿ ಅಮೀನ್ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರು : ದೇವಿಪ್ರಸಾದ್ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ ಪದಗ್ರಹಣ ಸಮಾರಂಭವು ಸಂಘಟನಾ ಬದ್ಧತೆ, ಏಕತೆ ಹಾಗೂ ಪರಸ್ಪರ ಸಹಕಾರದ ಭಾವನೆಯನ್ನು ಅನಾವರಣಗೊಳಿಸಿದ ಸ್ಮರಣೀಯ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಒಟ್ಟು 60ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು. ಈ ಸಂಖ್ಯೆಯು ಕೇವಲ ಹಾಜರಾತಿಯನ್ನು ಮಾತ್ರ ಸೂಚಿಸುವುದಲ್ಲ; ಸಂಘಟನೆಯ ಮೇಲಿನ ಸದಸ್ಯರ ಬದ್ಧತೆ, ಪ್ರೀತಿ ಹಾಗೂ ಅಚಲ ನಂಬಿಕೆಯ […]
Read More
14-06-2026, 2:00 PM
ಬೆಂಗಳೂರು : ಯುವವಾಹಿನಿ (ರಿ.) ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 14 ಜೂನ್ 2026 ರಂದು ಬೆಂಗಳೂರಿನ ವಿಧಾನಸೌಧದ ಬಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಅತ್ಯಂತ ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಘಿಕ ಮನೋಭಾವದಿಂದ ನೆರವೇರಿತು. . ಸಂಘಟನಾ ಸಾಮರ್ಥ್ಯ ಶ್ಲಾಘನೀಯ : ಜೆ.ಪಿ.ಸುಧಾಕರ್ಬೆಂಗಳೂರು ಘಟಕದ ಸಂಘಟನಾ ಸಾಮರ್ಥ್ಯ, ಸಮಯಪಾಲನೆ, ಶಿಸ್ತು ಮತ್ತು ಸದಸ್ಯರ ನಡುವಿನ ಐಕ್ಯತೆಯು ಶ್ಲಾಘನೀಯ ಎಂದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಖ್ಯಾತ […]
Read More
14-06-2026, 1:00 PM
ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 14-06-2026ರಂದು ಶಕ್ತಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವೃಕ್ಷೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಸದಸ್ಯರೆಲ್ಲರೂ ಒಟ್ಟಾಗಿ ಹಣ್ಣುಗಳ ಸಸಿಗಳನ್ನು ನೆಟ್ಟು ವೃಕ್ಷಾರೋಪಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ರುದ್ರಭೂಮಿಯ ವ್ಯವಸ್ಥಾಪಕರಾದ ಪದ್ಮನಾಭ ಅಂಚನ್ ಕಕ್ಕೆಬೆಟ್ಟು ಅವರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಸಂಸ್ಥೆಯು […]
Read More
14-06-2026, 1:00 PM
ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಹರೀಶ್ ದೋಳ ಅವರ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ವಿವಿಧ ಮೋಜಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟುಂಬ ಸದಸ್ಯರ ಪರಸ್ಪರ ಒಡನಾಟ ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ […]
Read More
14-06-2026, 1:00 PM
ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]
Read More
14-06-2026, 10:00 AM
ಬೆಂಗಳೂರು : ಬಿ ಕೆ ಹರಿಪ್ರಸಾದ್ ಅವರು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ದಿನಾಂಕ 14.06.2026 ಯುವವಾಹಿನಿ ಕೇಂದ್ರ ಸಮಿತಿಯ ಸುಮಾರು 50 ಸದಸ್ಯರ ತಂಡವು ಬೆಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಸದಸ್ಯರು ಬಿ ಕೆ ಹರಿಪ್ರಸಾದ್ ಅವರಿಗೆ ಶುಭ ಹಾರೈಸಿ, ಅವರ ಮುಂದಿನ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಗಳಿಗೆ ಯಶಸ್ಸನ್ನು ಕೋರಿದರು. ಹರಿಪ್ರಸಾದ್ ಅವರು ಯುವವಾಹಿನಿಯ ಸಮಾಜಮುಖಿ ಚಟುವಟಿಕೆಗಳನ್ನು ಶ್ಲಾಘಿಸಿ, ಸಂಸ್ಥೆಯ ಕಾರ್ಯಗಳಿಗೆ ತಮ್ಮ […]
Read More
13-06-2026, 9:00 PM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜೂನ್ 13, 2026ರಂದು ಸಂಜೆ 6 ಗಂಟೆಗೆ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರು ದೇವರ ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಘಟಕದ ಸದಸ್ಯೆ ರಾಜೇಶ್ವರಿ ನಿತ್ಯಾನಂದ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ನಗರ ಪಂಚಾಯತ್ನ ಮಾಜಿ ಅಧ್ಯಕ್ಷ ಸತೀಶ್ ಅಂಚನ್ ಮಾತನಾಡಿ, ಯುವ ಸಮಾಜವು ಶೈಕ್ಷಣಿಕ, […]
Read More
13-06-2026, 8:00 PM
ಮುಲ್ಕಿ : ಯುವವಾಹಿನಿ (ರಿ) ಮುಲ್ಕಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಚರಿಷ್ಮಾ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ ಕಾರ್ಯಕಾರಿ ಸಮಿತಿಅಧ್ಯಕ್ಷರು : ಚರಿಷ್ಮಾ ಶ್ರೀನಿವಾಸ್ಪ್ರಥಮ ಉಪಾಧ್ಯಕ್ಷರು : ಲತೀಶ್ ಸಾಲ್ಯಾನ್, ಕಾರ್ನಾಡುದ್ವಿತೀಯ ಉಪಾಧ್ಯಕ್ಷರು : ವರುಣ್, ಚಿತ್ರಾಪುಕಾರ್ಯದರ್ಶಿ : ವೇದಾ ಜಯ ಕುಬೇರ್ಜೊತೆ ಕಾರ್ಯದರ್ಶಿ : ಮಹೇಶ್ ಕುಮಾರ್ಕೋಶಾಧಿಕಾರಿ : ಭವಿಷ್ ಬಿ. ಸಾಲ್ಯಾನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಕವನ್ರಾಜ್, ಕುಬೆವೂರುಕ್ರೀಡಾ ನಿರ್ದೇಶಕರು : ವಂಶಿ ಟಿ. ಸಾಲ್ಯಾನ್ಆರೋಗ್ಯ ನಿರ್ದೇಶಕರು : ಕೃತಿಕಾಸಮಾಜ ಸೇವಾ ನಿರ್ದೇಶಕರು : […]
Read More
13-06-2026, 1:00 PM
ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]
Read More