Yuvavahini

ಘಟಕಗಳು

ಮುಗ್ಧ ಮನಸ್ಸಿನ ಸಮ್ಮಿಲನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ಮಕ್ಕಳ ದಿನಾಚರಣೆ -ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 14/11/2018 ಬುಧವಾರ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು.ಮೂರು ಅಂಗನವಾಡಿ ಕೇಂದ್ರದ ಸುಮಾರು 60 ಮಂದಿ ಪುಟ್ಟ ಮಕ್ಕಳು ಹಾಗೂ ಅವರ ಪೋಷಕರು ಇಲ್ಲಿ ಭಾಗಿಯಾಗಿದ್ದು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ನಂತರ ಮನರಂಜನೆಗಾಗಿ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ಮಕ್ಕಳ ಪೋಷಕರಿಗೂ ಕೂಡ ಮಕ್ಕಳ ಜತೆ ನೃತ್ಯ […]

Read More

ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ : ಅಶೋಕ್ ಕುಮಾರ್ ಅಭಿಮತ

ಕೊಲ್ಯ : ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ, ಕಾರ್ಯಕ್ರಮದ ಆಯೋಜನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುದ್ದುಮಕ್ಕಳ ಮಾಯಾ ಲೋಕವನ್ನೆ ಸೃಷ್ಟಿಸಿದ ಈ ಕಾರ್ಯಕ್ರಮ ಅರ್ಥಪೂರ್ಣ ಆಚರಣೆ ಎಂದು ಯುವವಾಹಿನಿ (ರಿ)ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರು ಮತ್ತು ಕೊಲ್ಯ ಘಟಕದ ಸಲಹೆಗಾರರೂ ಆಗಿರುವ ಅಶೋಕ್ ಕುಮಾರ್ ತಿಳಿಸಿದರು. ಅವರು ದಿನಾಂಕ 14/11/2018 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ಕೊಂಡಾಟದ ಬಾಲೆ -2018 […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಗೂಡುದೀಪ ಸ್ಪರ್ಧೆ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ದಿನಾಂಕ 19.11.2018 ರಂದು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದೀಪಾವಳಿ ಮತ್ತು ಕ್ಷೇತ್ರದ ಭಜನಾ ಸಪ್ತಾಹದ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಿತೇಶ್ ಬಿ. ಕೋಟ್ಯಾನ್ ವಹಿಸಿದರು. ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ರತ್ನಾಕರ್ ಆಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಅಶೋಕ್ ಎಮ್. ಸುವರ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್, ಹಾಗೂ ಸದಸ್ಯರು, […]

Read More

ಯುವಾಹಿನಿ (ರಿ) ಕುಪ್ಪೆಪದವು ಘಟಕದ ವತಿಯಿಂದ ಅಶಕ್ತರಿಗೆ ನೆರವು

ಕುಪ್ಪೆಪದವು : ಕುಪ್ಪೆಪದವು ಗ್ರಾಮದ ದೊಡ್ಡಳಿಕೆ ಎಂಬ ಜನವಸತಿ ಪ್ರದೇಶದಲ್ಲಿ ವಾಸಿಸುತ್ತಿರುವ ತಮ್ಮೆರಡು ಕಣ್ಣುಗಳನ್ನು ಕಳೆದುಕೊಂಡು ದುಡಿಯಲು ಅಶಕ್ತರಾಗಿರುವ ಅಲ್ಲದೆ ಆರ್ಥಿಕವಾಗಿ ದುರ್ಬಲ ಪರಿಸ್ಥಿತಿಯಲ್ಲಿರುವ ಸೀತಾರಾಮ ಪೂಜಾರಿಯವರ ಮಗಳ ಮದುವೆಗಾಗಿ ಕುಪ್ಪೆಪದವು ಘಟಕದ ಮಹಿಳೆಯರ ವತಿಯಿಂದ ದಿನಾಂಕ 08-11-2018 ರಂದು 50 ಕೆ ಜಿ ಅಕ್ಕಿ, ಉಪಾದ್ಯಕ್ಯರು ಅಜಯ್ ಅಮೀನ್ ರವರು ವೈಯಕ್ತಿಕವಾಗಿ 50 ತೆಂಗಿನಕಾಯಿ ಹಾಗೂ ಇತರ ಪದಾಧಿಕಾರಿಗಳು ಸದಸ್ಯರ ವತಿಯಿಂದ ರೂಪಾಯಿ ಐದು ಸಾವಿರ ನಗದನ್ನು ಅಧ್ಯಕ್ಷರು, ಉಪಾದ್ಯಕ್ಯರು, ಕಾರ್ಯದರ್ಶಿ, ಎಲ್ಲಾ ಸದಸ್ಯರು ಪದಾಧಿಕಾರಿಗಳ […]

Read More

ಬೆಳಕಿನ ಹಬ್ಬದಲ್ಲಿ ನಮ್ಮ ನಡೆ ಬೇಸಾಯದ ಕಡೆ

ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ದಿನಾಂಕ 08-11-2018 ರಂದು ಬೆಳಿಗ್ಗೆ 9.00 ಗಂಟೆಗೆ ದೀಪಾವಳಿ ಹಬ್ಬದ ಪ್ರಯುಕ್ತ, ನಮ್ಮ ನಡೆ ಬೇಸಾಯದ ಕಡೆ ಎಂಬ ಚಿಂತನೆಯಲ್ಲಿ ಪ್ರಾರಂಭವಾಗಿ ನಾಗಂಡದಿಯ ಗದ್ದೆಯಲ್ಲಿ ನಿರೀಕ್ಷಿತ ಸಮೃದ್ಧ ಬತ್ತದ ಫಸಲನ್ನು ಪಡೆದು, ದಾನ್ಯಲಕ್ಮಿ ಮತ್ತು ಗೋ ಮಾತೆಯ ಪೂಜೆಯನ್ನು ಷೋಡೋಪಚಾರಿ ವಿದಿ ವಿಧಾನಗಳಿಂದ ಮಹಿಳೆಯರ ನೇತೃತ್ವದಲ್ಲಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡು ಈ ಧಾರ್ಮಿಕ ಸಂಪ್ರದಾಯದ ಮೂಲಕ ಯಶಸ್ವಿಯಾಗಿ ನಡೆಸಿಕೊಟ್ಟರು. ಅಲ್ಲದೆ ಕೃಷಿ […]

Read More

ಯುವ ತುಡರ್ – 2018

ಉಪ್ಪಿನಂಗಡಿ : ಯುವವಾಹಿನಿ ಉಪ್ಪಿನಂಗಡಿ ಘಟಕದ ಆಶ್ರಯದಲ್ಲಿ ಯುವತುಡರ್ -2018 ಕಾರ್ಯಕ್ರಮವು ಘಟಕದ ಉಪಾಧ್ಯಕ್ಷರಾದ ಚಂದ್ರಶೇಖರ ಕೆ. ಸನಿಲ್  ಇವರ ಮನೆ “ಯಮುನಾ” ಇಲ್ಲಿ ದಿನಾಂಕ ೦೭. ೧೧. ೨೦೧೮ ರಂದು ನಡೆಯಿತು. ಘಟಕದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಭಾಗವಹಿಸಿ ಮಾತನಾಡಿ ದೀಪಾವಳಿಯು ತುಳುನಾಡಿನ ವಿಶಿಷ್ಟ ಹಬ್ಬವಾಗಿದ್ದು, ಕತ್ತಲೆಯನ್ನು ಹೋಗಲಾಡಿಸಿ ಬೆಳಕನ್ನು ಪಸರಿಸುವ ಸಂಸ್ಕೃತಿಗಳ ಪ್ರತೀಕವಾದ ದೀಪಾವಳಿಯು ಎಲ್ಲರ ಬದುಕಿನಲ್ಲಿ ದೀಪದಂತೆ ಬೆಳಗಲಿ ಎಂದು ಶುಭ […]

Read More

ನಾರಾಯಣಗುರುಗಳ ತತ್ವ ಜೀವನದಲ್ಲಿ ಅಳವಡಿಸಿಕೊಳ್ಳಿರಿ : ಮುಮ್ತಾಜ್

ಮೂಲ್ಕಿ: ನಾರಾಯಣಗುರುಗಳ ತತ್ವ ಆದರ್ಶದಂತೆ ಇಂದು ಬಿಲ್ಲವ ಸಮಾಜವು ಸಂಘಟನತ್ಮಕವಾಗಿ ಬೆಳೆಯುವುದರೊಂದಿಗೆ ಸಮಾಜದಲ್ಲಿ ಕರಾವಳಿಯ ಸಂಪ್ರದಾಯವನ್ನು ಸಂಸ್ಥೆಯ ಮೂಲಕ ಉಳಿಸುವ ಪ್ರಯತ್ನ ಶ್ಲಾಘನೀಯವಾಗಿದೆ. ಯುವ ಸಮಾಜವನ್ನು ಕಟ್ಟಿ ಬೆಳೆಸುವ ಜವಬ್ದಾರಿಯನ್ನು ನಾರಾಯಣಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಉಡುಪಿಯ ಕಿರಿಯ ಕಾನೂನು ಅಧಿಕಾರಿ ಮುಮ್ತಾಜ್ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ವತಿಯಿಂದ ದಿನಾಂಕ 06.11.2018 ರಂದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ 16ನೇ ವರ್ಷದ ತುಳುವೆರೆ ತುಡಾರ ಪರ್ಬವನ್ನು ಉದ್ಘಾಟಿಸಿ ಮಾತನಾಡಿದರು. ಮೂಲ್ಕಿ ಕೊಸೆಸಾಂ […]

Read More

ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ

ಕೂಳೂರು : ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ‘ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ’ ಯನ್ನು ದಿನಾಂಕ 06/11/2018 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಘಟಕದ ಕುಟುಂಬ ಸಂಪರ್ಕ ನಿರ್ದೇಶಕರಾದ ರೇಣುಕಾ ತಾರನಾಥ್ ಅವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ 90 ಮಂದಿ ಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೇಂದ್ರ […]

Read More

ಬಡವರ ಮನೆಗೆ ಬೆಳಕು ಮೂಡಿಸಿದ ಕೂಳೂರು ಘಟಕ

ಕೂಳೂರು : ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು .ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು,ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀ ಗುರುವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇರುವುದನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲ ಸಾಮಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]

Read More

ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆ

ಪೆರ್ಮುದೆ ಎಕ್ಕಾರು : ಯುವವಾಹಿನಿ (ರಿ) ಎಕ್ಕಾರು ಪೆರ್ಮುದೆ  ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಸಂದೇಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಸಂದೇಶ್ ಪೂಜಾರಿ ಪೆರ್ಮುದೆ ಉಪಾಧ್ಯಕ್ಷರು : ಚಂದ್ರಹಾಸ್ ಪೂಜಾರಿ ಎಕ್ಕಾರು ಕಾರ್ಯದರ್ಶಿ : ಸಂದೇಶ್ ಕೋಟ್ಯಾನ್ ಪೆರ್ಮುದೆ ಜತೆ ಕಾರ್ಯದರ್ಶಿ : ರೋಹಿತ್ ಎಕ್ಕಾರು ಕೋಶಾಧಿಕಾರಿ : ಜಯಲಕ್ಷ್ಮಿ ಕೆ.ಪೂಜಾರಿ ಪೆರ್ಮುದೆ ಸಂಘಟನಾ ಕಾರ್ಯದರ್ಶಿ : ಶಿವರಾಮ್ ಕೋಟ್ಯಾನ್ ಪೆರ್ಮುದೆ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ದೀಪಕ್ ಪೂಜಾರಿ ಪೆರ್ಮುದೆ ಉದ್ಯೋಗ ಮತ್ತು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!