Yuvavahini

ಘಟಕಗಳು

ಶಿಕ್ಷಕರ ದಿನಾಚರಣೆ

ಉಪ್ಪಿನಂಗಡಿ : ಯುವವಾಹಿನಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಿವೃತ ಶಿಕ್ಷಕರಿಗೆ ಗೌರವಾರ್ಪಣೆ ಸಲ್ಲಿಸುವ ಗುರು ವಂದನಾ ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷರಾದ ಸೋಮಸುಂದರ್ ರವರ ಅಧ್ಯಕ್ಷತೆಯಲ್ಲಿ, ದಿನಾಂಕ 05-09-2024ರಂದು ಅಪರಾಹ್ನ ನಡೆಸಲಾಯಿತು. ಬೆಳ್ತಂಗಡಿ ತಾಲೂಕು ಪುತ್ತಿಲ ಗ್ರಾಮದ ಪೀಲ್ಯ ಮನೆ ಅಣ್ಣು ಪೂಜಾರಿಯವರನ್ನು ಅವರ ಪೀಲ್ಯ ಮನೆಯಲ್ಲಿ ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು. ಅವಿಭಜಿತ ಪುತ್ತೂರು ತಾಲೂಕಿನ ಆಲಂತಾಯ ಗ್ರಾಮದ ಬಟ್ಲಡ್ಕ ಮನೆಯಲ್ಲಿ ನಿವೃತ್ತ ಶಿಕ್ಷಕ ದಂಪತಿಗಳಾದ ಸಂಜೀವ […]

Read More

ಪುರಸಭೆಯ ಅಧ್ಯಕ್ಷ ವಾಸು ಪೂಜಾರಿಗೆ ಅಭಿನಂದನೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿ ಇವರನ್ನು ಅಭಿನಂದಿಸಲಾಯಿತು. ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆ ಎಂದು ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಾಸು ಪೂಜಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಕಾರ್ಯದರ್ಶಿ ಚೇತನ್ ಮುಂಡಾಜೆ, ಉಪಾಧ್ಯಕ್ಷ ನಾರಾಯಣ ಪೂಜಾರಿ ಪಲ್ಲಿಕಂಡ, ನಾಗೇಶ್ ಪೂಜಾರಿ ನೈಬೇಲು, ನಿಕಟಪೂರ್ವ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಮಾಜಿ ಅಧ್ಯಕ್ಷರಾದ ಟಿ.ರಾಮಚಂದ್ರ […]

Read More

ಗುರುಗಳ ತತ್ವಸಂದೇಶವನ್ನು ಮೈಗೂಡಿಸಿಕೊಂಡು ಮುನ್ನಡೆಯುವುದೆ ನಿಜಾರ್ಥದ ಗುರುಪೂಜೆ : ಪ್ರೇಮನಾಥ್ ಬಂಟ್ವಾಳ.

ಬಂಟ್ವಾಳ : ಗುರುಗಳ ಸಂದೇಶದ ತತ್ವಾದರ್ಶಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಆದರ್ಶ ಬದುಕಿನಲ್ಲಿ ಹೆಜ್ಜೆಹಾಕಿದಾಗ ಅದಕ್ಕಿಂತ ದೊಡ್ಡದಾದ ಗುರುಪೂಜೆ ಮತ್ತೊಂದಿಲ್ಲ . ಆರಾಧನೆಯ ಜೊತೆಗೆ ಗುರುಗಳ ಆದರ್ಶಗಳನ್ನು ಅಪ್ಪಿಕೊಳ್ಳುವ ಮನಸ್ಸು ನಮ್ಮದಾಗಬೇಕು ಎಂದು ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ ಕೆ ಅಭಿಪ್ರಾಯಪಟ್ಟರು. ಅವರು 170ನೇ ನಾರಾಯಣ ಗುರುಜಯಂತಿ ಆಚರಣೆಯ ಸಲುವಾಗಿ ಬಿ.ಸಿ.ರೋಡ್ ಯುವವಾಹಿನಿ ಕಛೇರಿಯಲ್ಲಿ ದಿನಾಂಕ 31-08-2024 ರಂದು ನಡೆದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದರು. ಮಾಜಿ ಅಧ್ಯಕ್ಷರು ರಾಮಚಂದ್ರ ಸುವರ್ಣ ದೀಪ ಬೆಳಗಿ ಉದ್ಘಾಟಿಸಿದರು. […]

Read More

ತರಬೇತಿ ಕಾರ್ಯಗಾರ

ಉಪ್ಪಿನಂಗಡಿ: ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ವತಿಯಿಂದ, ಘಟಕದ ಸದಸ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದಿನಾಂಕ 18-08-2024 ರಂದು ರೋಟರಿ ಸಭಾಭವನ ಉಪ್ಪಿನಂಗಡಿಯಲ್ಲಿ ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಸುಂದರ್ ಕೊಡಿಪ್ಪಾನ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಉಪ್ಪಿನಂಗಡಿ ಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ) ಅಧ್ಯಕ್ಷರು ಹಾಗೂ ಘಟಕದ ಗೌರವ ಸಲಹೆಗಾರರೂ ಆಗಿರುವ ಶ್ರೀ ವರದಾರಾಜ್ ಎಂ. ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು, ಖ್ಯಾತ ದಂತ […]

Read More

ಭಜನೆಯ ಪೂರ್ಣ ಫಲ ಪಡೆಯಬೇಕಾದರೆ ಪ್ರತಿಯೊಂದು ಪದದ ಅರ್ಥ ಅರಿತು ಸ್ತುತಿಸಿದಾಗ ಭಗವಂತನಿಗೆ ತಲುಪಲು ಸಾಧ್ಯ. ಪರಮಾತ್ಮನ ಮೇಲೆ ನಮಗಿರುವ ಪ್ರೀತಿ, ಭಕ್ತಿ ವ್ಯಕ್ತಪಡಿಸುವುದೇ ಸಂಕೀರ್ತನೆಯ ಸಾರ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 51ನೇ ಭಜನಾ ಕಾರ್ಯಕ್ರಮವು ಘಟಕದ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಇವರ ಮನೆಯಲ್ಲಿ ದಿನಾಂಕ 30-08-2024 ಶುಕ್ರವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು […]

Read More

ನಾರಾಯಣಗುರುಗಳು ಮನುಕುಲದ ಪರಿವರ್ತನಾ ಚಿಂತಕರು : ಡಾ.ಮೋಹನ್ ಆಳ್ವ

ಮೂಡುಬಿದಿರೆ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ನಾರಾಯಣಗುರುಗಳು ಅಸ್ಪ್ರಶ್ಯತೆಯ ವಿರುದ್ಧ ಮೌನ ಕ್ರಾಂತಿಯ ಮೂಲಕ ಸಾಮಾಜಿಕ ಸುಧಾರಣೆಯನ್ನು ತನ್ನ ಜೀವಿತಾವಧಿಯಲ್ಲೇ ಸಾಧಿಸಿ ತೋರಿಸಿದ ಮನುಕುಲದ ಪರಿವರ್ತನಾ ಚಿಂತನೆಯ ವಿಶ್ವಗುರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯ ಪಟ್ಟರು. ಅವರು ದಿನಾಂಕ 28-08-2024ನೇ ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ […]

Read More

ನಾರಾಯಣ ಗುರುಗಳು ಸಕಲ‌ ಶೋಷಿತ ಸಮಾಜದ ಆಶಾಕಿರಣ : ರಾಜೇಶ್ ಸುವರ್ಣ

ಬಂಟ್ವಾಳ: ಮೇಲು ಕೀಳೆಂದು ಬೀಗುವ, ಬಿಗು ನೀತಿಯ ಖಂಡಿಸಿ ಪಾಮರಪರ ಶಕ್ತಿಯಾಗಿ, ಏಕ ದೇವತಾರಾಧನೆಯ ಬೋಧಿಸಿ, ಸರ್ವರಿಗೂ ಸಮಾನ ಅವಕಾಶದ ಏರು ದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಮೂಲಕ ಪಂಡಿತ – ಪಾಮರರೆಂಬ ಬೇಧವಿಲ್ಲದೆ ಕೃತಕ ಗೋಡೆಯನ್ನೊಡೆದು ಸಕಲರೊಳಗೊಂದಾದ ಅಗೋಚರ ಶಕ್ತಿಯ ಅರಿವು ಮೂಡಿಸಿದ ಮಹಾಶಕ್ತಿ ನಾರಾಯಣ ಗುರುವರ್ಯರು ಸಕಲ ಶೋಷಿತ ಸಮಾಜದ ಆಶಾಕಿರಣ ಎಂದು ಯುವವಾಹಿನಿ (ರಿ) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ತಿಳಿಸಿದರು. ಅವರು ಹರೀಶ್ ಸಾಲ್ಯಾನ್ ಅಜೆಕಲ ಇವರ ಮನೆಯಲ್ಲಿ […]

Read More

ನಾರಾಯಣ ಗುರುಗಳ ಆದರ್ಶಗಳು ಮುಂದಿನ ಭವಿಷ್ಯದ ದಾರಿದೀಪ: ರಾಜೇಶ್ ನಾಯ್ಕ್.

ಬಂಟ್ವಾಳ : ನಾರಾಯಣ ಗುರುಗಳ ತತ್ವ ಸಂದೇಶದ ಆದರ್ಶಗಳನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು, ಈ ಆದರ್ಶಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದಾರಿ ದೀಪವಾಗಿದೆ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ತಿಳಿಸಿದರು. ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶ್ರೀನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆ ಇವರ ಸಹಯೋಗದೊಂದಿಗೆ ಶ್ರೀ ನಾರಾಯಣ ಗುರು ವಸತಿ ಶಾಲೆ ಪೂಂಜಾಲಕಟ್ಟೆಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ […]

Read More

ಯುವಶಕ್ತಿ ದೇಶದ ಅಮೂಲ್ಯ ಸಂಪತ್ತು- ಮಂಜುನಾಥನ್ ಎಂ.ಜಿ

ಬಂಟ್ವಾಳ: ದೇಶದ ಭವಿಷ್ಯವು ಯುವಶಕ್ತಿಯ ಕೈಯಲ್ಲಿದೆ. ನಾವು ನಿತ್ಯ ಬಳಸುವ ಬೆಲೆಬಾಳುವ ವಸ್ತುಗಳಿಗಿಂತಲೂ ಅಮೂಲ್ಯವಾದದು ಯುವಶಕ್ತಿ. ಯುವ ಮನಸ್ಸುಗಳಿಗೆ ಸರಿಯಾದ ದಾರಿ ಮತ್ತು ಮಾರ್ಗದರ್ಶನವನ್ನು ನೀಡಿದರೆ ಅವರೇ ಆಸ್ಥಿಯಾಗುತ್ತಾರೆ. ಎಲ್ಲಾ ಧರ್ಮಗಳಿಗಿಂತಲೂ ಮಾನವ ಧರ್ಮವೇ ಶ್ರೇಷ್ಠವಾದದ್ದು. ವ್ಯಕ್ತಿ ಗೌರವ, ಸ್ನೇಹ,ವಿಶ್ವಾಸದ ಒಳ್ಳೆಯ ನಡೆನುಡಿಯ ಮೂಲಕ ಶ್ರೇಷ್ಠ ವ್ಯಕ್ತಿತ್ವವನ್ನು ನಿರ್ಮಾಣ ಮಾಡಬಹುದು. ನಾರಾಯಗುರುಗಳ ಚಿಂತನೆ ಯುವಸಮುದಾಯಕ್ಕೆ ಚೈತನ್ಯವನ್ನು ತುಂಬುವ ಕೆಲಸವನ್ನು ಮಾಡುತ್ತದೆ. ಎಲ್ಲರೊಳಗೊಂದಾಗಿ, ಒಳ್ಳೆಯ ಮನುಷ್ಯರಾಗಿ ಬದುಕುವುದು ನಾರಾಯಣ ಗುರು ಚಿಂತನೆಯ ಆಶಯವಾಗಿದೆ. ಯುವ ಪೀಳಿಗೆಗೆ ನಮ್ಮ ದೇಶದ […]

Read More

ಕೃಷ್ಣ ವೇಷ ಸ್ಪರ್ಧೆ

ಕೆಂಜಾರು: ಯುವವಾಹಿನಿ (ರಿ ) ಕೆಂಜಾರು – ಕರಂಬಾರು ಘಟಕದ ವತಿಯಿಂದ 6 ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ (ಮುದ್ದು ಕೃಷ್ಣ, ತುಂಟ ಕೃಷ್ಣ, ಬಾಲಕೃಷ್ಣ, ರಾಧಾ-ಕೃಷ್ಣ ಹಾಗೂ ಯಶೋಧ ಕೃಷ್ಣ) ಒಟ್ಟು 5 ವಿಭಾಗಗಳಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು- ಕರಂಬಾರು ಇದರ ಹೊರಾಂಗಣದ ಮುಕ್ತ ವೇದಿಕೆಯಲ್ಲಿ 25-08-2024 ರಂದು ಜರಗಿತು. ಬೆಳಿಗ್ಗೆ 9.30 ಕ್ಕೆ ಶ್ರೀ ದೇವಿಗೆ ಪೂಜೆ ಸಲ್ಲಿಸಿ, ಉದ್ಘಾಟನಾ ಸಭಾ ಕಾರ್ಯಕ್ರಮ ಜರಗಿತು. ಘಟಕದ ಅಧ್ಯಕ್ಷ ವಿನೋದ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!