Yuvavahini

ಘಟಕಗಳು

ಸಾಧನೆಗೆ ಕಲಿಕೆಯ ಅಂಕವೊಂದೇ ಮಾನದಂಡವಲ್ಲ

ಯಡ್ತಾಡಿ : ಯುವವಾಹಿನಿ(ರಿ) ಯಡ್ತಾಡಿ ಘಟಕದ ಆಶ್ರಯದಲ್ಲಿ ಐದು ದಿನಗಳ ಕಾಲ ನಡೆಸಿದ ಬೇಸಿಗೆ ಶಿಬಿರ, ವಿಕಸನ 2019 (ಅರಿವಿನ ತಂಗಾಳಿ) ರ ಅಂಗವಾಗಿ, ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಮಾಡಿಸಿ ಸನ್ಮಾನಿಸುವ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕ ಸಫಲತೆಯೊಂದೇ ಸಾಧನೆಯ ಮಾನದಂಡವಾಗಿ ರೂಪುಗೊಳ್ಳುತ್ತಿದ್ದು, ಇದು ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವುದು ಕಳವಳಕಾರಿಯಾದ ಅಂಶವಾಗಿದೆ. ಶೈಕ್ಷಣಿಕ ಸಾಧನೆಗೆ ಹೊರತಾಗಿಯೂ ಶ್ರಮವಹಿಸಿ ದುಡಿದರೆ ಸಮಾಜದಲ್ಲಿ ಶ್ರೇಷ್ಠ ಸಾಧನೆ ಮಾಡಬಹುದೆಂಬ ವಿಷಯ ಮನವರಿಕೆ ಮಾಡಲು ಪ್ರತಿ […]

Read More

ಪಠ್ಯದೊಂದಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಮಕ್ಕಳಿಗೆ ಸಹಕಾರಿ : ಜಯಂತ್ ನಡುಬೈಲು

ಯಡ್ತಾಡಿ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇತರ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಾಗ ಮಾತ್ರ ಅವರ ಜೀವನಕ್ಕೆ ನಿಜವಾದ ಅಡಿಪಾಯ ಸಿಗುತ್ತದೆ. ಯುವವಾಹಿನಿ (ರಿ) ಯಡ್ತಾಡಿ ಘಟಕ ಸಾಮಾಜಿಕ ಚಟುವಟಿಕೆಗಳ ಜೊತೆಗೆ ಮಕ್ಕಳ ಬೌದ್ಧಿಕ ಚಿಂತನೆ ಹೆಚ್ಚಿಸುವ ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಯೋಜಿಸಿರುವುದು ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಜಯಂತ್ ನಡುಬೈಲು ತಿಳಿಸಿದರು. ಅವರು 25.04.2019 ರಂದು ಸಂಜೆ ೬:೦೦ ಘಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡ್ತಾಡಿಯಲ್ಲಿ ಜರುಗಿದ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆರೋಗ್ಯ ನಿಧಿ

ಕೂಳೂರು : ದಿನಾಂಕ 22/04/2019 ಸೋಮವಾರ ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ(ರಿ) ಮೂಡಬಿದ್ರಿ ಘಟಕದ ಸದಸ್ಯರಾದ ಅಶ್ವಿನಿ ಇವರ ಪತಿ ರಾಜೇಶ್ ಪೂಜಾರಿ ಇವರ 2 ಕಿಡ್ನಿಗಳು ವಿಫಲವಾಗಿ ಚಿಕಿತ್ಸೆಗಾಗಿ ನೆರವು ಕೋರಿದ್ದ ಸಲುವಾಗಿ ಯುವವಾಹಿನಿ(ರಿ) ಕೂಳೂರು ಘಟಕದ ಸದಸ್ಯರು ವೈಯಕ್ತಿವಾಗಿ 15 ಸಾವಿರ ರೂಪಾಯಿ ಮೊತ್ತ ಹಾಗೂ ಕೂಳೂರು ನಾರಾಯಣ ಗುರು ಮoದಿರದ ಸದಸ್ಯರೆಲ್ಲರು ಸೇರಿ ಒಟ್ಟಾಗಿ 40 ಸಾವಿರ ರೂಪಾಯಿಯನ್ನು ಅವರ ತಾಯಿ ಉಮಾವತಿ ಇವರಿಗೆ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಕೂಳೂರು ಘಟಕದ […]

Read More

ರಾಜಕೀಯದಿಂದಲೇ ಉದ್ಧಾರ ಎಂಬುದು ಭ್ರಮೆ : ಡಾ. ಮಂಜುನಾಥ ಕೋಟ್ಯಾನ್

ಮೂಡುಬಿದಿರೆ : ಸಾಧನೆ ಮತ್ತು ತೃಪ್ತ ಜೀವನಕ್ಕೆ ರಾಜಕೀಯವೊಂದೆ ದಾರಿಯಲ್ಲ. ಶಿಕ್ಷಣ, ಉದ್ಯಮ, ಕಲೆ, ಕ್ರೀಡೆ, ಕೃಷಿ ಮೊದಲಾದ ನೂರು ದಾರಿಗಳಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬೀದಿಯಲ್ಲಿ ಹಾಲು-ಜೇನು ಹರಿಯುವುದು ಸಾಧ್ಯವಿಲ್ಲ. ರಾಜಕೀಯದಿಂದಲೆ ಉದ್ಧಾರ ಎಂಬುದು ಭ್ರಮೆ ಬೇಡ’’ ಎಂದು ಕಾರ್ಕಳದ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಕೋಟ್ಯಾನ್ ನುಡಿದರು. ಅವರು ಮೂಡುಬಿದಿರೆಯ ಯುವವಾಹಿನಿ ಘಟಕದ ಪದಗ್ರಹಣ ಸಮಾರಂಭದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಸಮಾಜಕ್ಕೆ ಘೋರ ಸಿಟ್ಟಿಗಿಂತ ಸಾತ್ವಿಕ ಸಿಟ್ಟಿನ ಅಗತ್ಯವಿದೆ. ಬದಲಾವಣೆಗಿಂತ […]

Read More

ಮನೆ ಬೆಳಗುವ ಮಾತೆ, ಜಗಕೆ ದಾರಿ ತೋರುವ ದಾತೆ

ಮಾಣಿ : ಹೆಣ್ಣು ಜಗದ ಕಣ್ಣು,ಮಹಿಳೆ ತನ್ನ ಮೌಲ್ಯಯುತ ಸಮಯವನ್ನು ತನ್ನ ಮನೆಗಾಗಿ ಮಾತ್ರ ಮೀಸಲಿರಿಸಿದೆ ಹೊರಜಗತ್ತಿಗೆ ತೆರೆದುಕೊಳ್ಳಬೇಕು.ತನ್ನವರ ಒಳಿತಿನೊಂದಿಗೆ ಸಂಸ್ಕಾರಯುತ ಜೀವನದ ಮಾದರಿಯಾಗಿ ಇತರರ ಬದುಕಿಗೂ ದಾರಿದೀಪವಾಗಬೇಕೆಂದು ವಿಶ್ವ ಮಹಿಳಾ ದಿನಾಚರಣೆಯ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ(ರಿ) ಮಾಣಿ ಇದರ ಮಹಿಳಾ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ರಮೇಶ್ ಮುಜಲ ತಿಳಿಸಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ನಿರ್ದೇಶಕರಾದ ಪಾರ್ವತಿ ಅಮಿನ್ ಅವರು ಯುವವಾಹಿನಿ ಸಮಾಜಿಕ ಕಳಕಳಿ ಬಗ್ಗೆ ಪ್ರಾಸ್ತಾವಿಕ […]

Read More

ವಿಕಸನ 2019 – ಅರಿವಿನ ತಂಗಾಳಿ

  ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಸಾರಥ್ಯದಲ್ಲಿ ವಿದ್ಯಾರ್ಥಿಗಳಿಗಾಗಿ ಸತತವಾಗಿ 7ನೇ ವರ್ಷದ ಐದು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರ, ವಿಕಸನ – 2019, ಅರಿವಿನ ತಂಗಾಳಿ ಕಾರ್ಯಕ್ರಮ ದಿನಾಂಕ 21-04-2019 ರಿಂದ 25-04-2019 ರವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು. ನರೇಂದ್ರ ಕುಮಾರ್ ಕೋಟಾ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ ಏಳು ಜನ ಸಂಪನ್ಮೂಲ ವ್ಯಕ್ತಿಗಳು 83 ಜನ ವಿದ್ಯಾರ್ಥಿಗಳನ್ನು ವಿವಿಧ ರೀತಿಯ ಚಟುವಟಿಕೆಗಳಿಂದ ರಂಜಿಸುವ ಜೊತೆ ಅವರ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿಯಾದ […]

Read More

ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಹಾಗೂ ಕಾರ್ಯದರ್ಶಿಯಾಗಿ ನೈನಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.

Read More

ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ

ಉಡುಪಿ : ಯುವವಾಹಿನಿ ಉಡುಪಿ ಘಟಕದಲ್ಲಿ ದಿನಾಂಕ 21/04/2019 ರಂದು ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ. ಕಾರ್ಯಕ್ರಮ ನಡೆಯಿತು. ಕೇಂದ್ರಸಮಿತಿಯ ಮಾಜಿ ಅಧ್ಯಕ್ಷ ರಾದ ರವಿರಾಜ್ ರವರು ಬಿರು ಚಲಾಯಿಸಿ ಕಾರ್ಯಕ್ರಮ ವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಿದರು . ಕಾರ್ಯಕ್ರಮವು MCF ಮಂಗಳೂರು ನೊಡನೆ ಸಹಭಾಗಿತ್ವದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ನಡೆಯಿತು. ಸುಮಾರು 90 ಸದಸ್ಯರು ಭಾಗವಹಿಸಿದ್ದರು. ಹಿರಿಯರು ಕಿರಿಯರೆನ್ನದೆ. ಗಂಡು ಹೆಣ್ಣೆಂಬ ಭೇದವಿಲ್ಲದೆ, ಏಕಮನಸ್ಕರಾಗಿ ಕುಣಿದು ಕುಪ್ಪಳಿಸಿ ಎಲ್ಲರೂ ವಿಜ್ರಂಭಿಸಿದರು. ಲಗೋರಿ, ಪಿಲಿಚಂಡಿ, ಸೊಪ್ಪಿನ ಆಟ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!