Yuvavahini

ಘಟಕಗಳು

ಆರೋಗ್ಯ ಮಾಹಿತಿ ಶಿಬಿರ

ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]

Read More

ಪಡುಬಿದ್ರಿ ಘಟಕದ ವತಿಯಿಂದ ವಿಚಾರಗೋಷ್ಠಿ ಕಾರ್ಯಕ್ರಮ

ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು […]

Read More

ಗುರುಜಯಂತಿ ಆಚರಣೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ದಿನಾಂಕ 25-9-2016 ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿಯ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 162 ನೇ ಜಯಂತಿ ಆಚರಣೆ ಹಾಗೂ ಗುರುಗಳ ಬಗ್ಗೆ ಶಾಲಾ ಮಕ್ಕಳಿಗೆ ಏರ್ಪಡಿಸಿದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಜರಗಿತು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಸಿಂಚನ ಲೈಟಿಂಗ್ ಕಂಟ್ರೋಲ್‌ನ CEO ರತ್ನಾಕರ ಸುವರ್ಣ, ಮಾಜಿ […]

Read More

ಸುರತ್ಕಲ್ ಘಟಕದ ವತಿಯಿಂದ ಶ್ರೀ ಗುರುಸ್ಮರಣೆ ಕಾರ್ಯಕ್ರಮ

ದಿ. 18-09-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮ ಜರಗಿತು. ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸುರತ್ಕಲ್ ಪರಿಸರದ ಆಮಂತ್ರಿತ ಭಕ್ತಿಗೀತೆ ಸಂಗೀತ ಬಳಗದವರಿಂದ ಭಕ್ತಿಗೀತೆ ಹಾಡುಗಾರಿಕೆ ಸಮೂಹ ಸ್ಪರ್ಧೆಯನ್ನು ಘಟಕದ ಮಾಜಿ ಅಧ್ಯಕ್ಷ ವಿಜಯ ಎಸ್. ಕುಕ್ಯಾನ್‌ರವರ ಸಂಚಾಲಕತ್ವದಲ್ಲಿ ಆಯೋಜಿಸಲಾಗಿತ್ತು. ಭಕ್ತಿಗೀತೆ ಸ್ಪರ್ಧಾ ಕಾರ್ಯಕ್ರಮವನ್ನು ಸುರತ್ಕಲ್ ಅಕ್ಷಯ ಡೆವಲಪರ್‍ಸ್‌ನ ಮಾಲಕ ಅಕ್ಷಯ ಎನ್. ಬಂಗೇರರವರು ಉದ್ಘಾಟಿಸಿದರು. ಈ ಸ್ಪರ್ಧಾ […]

Read More

ಮಂಗಳೂರು ಮಹಿಳಾ ಘಟಕದ ವಿವಿಧ ಕಾರ್ಯಕ್ರಮಗಳು

ತಾ. 3-9-2016 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಸದಸ್ಯರಿಗೆ ಫಿನಾಯಿಲ್ ಹಾಗೂ ಲಿಕ್ವಿಡ್ ಸೋಪ್ ತಯಾರಿಸುವುದರ ಬಗ್ಗೆ ಜರಗಿದ ಮಾಹಿತಿ ಶಿಬಿರ. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ಲೇಡಿಹಿಲ್ ವೃತ್ತದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದವರೆಗೆ ಜರಗಿದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು. ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ವೆನ್‌ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಹಾಯಕರಿಗೆ (ಮನೆಯವರಿಗೆ) ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕದಿಂದ ಏರ್ಪಡಿಸಲಾಗಿತ್ತು. […]

Read More

ಬೆಳುವಾಯಿ ಘಟಕದ ಪದಗ್ರಹಣ ಕಾರ್ಯಕ್ರಮ

ಬೆಳುವಾಯಿ ಘಟಕದ 2016-17 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ತಾ. 18-9-2016 ರಂದು ಬೆಳುವಾಯಿಯ ಷಣ್ಮುಖಾನಂದ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಮೂಡಬಿದ್ರೆಯ ಮಹಾವೀರ ಕಾಲೇಜಿನ ಉಪನ್ಯಾಸಕ ಹರೀಶ್ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಬೆಳುವಾಯಿ ಇವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ವಿಠಲ್ ಎಂ. ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ […]

Read More

ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣ ಗುರು ನಾಮಫಲಕ ಅನಾವರಣ

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ನಗರದ ನಾಮಫಲಕ ಅನಾವರಣ ಕಾರ್ಯಕ್ರಮವು ಸೆ. 16 ರಂದು ಶಾಸಕ ಕೆ. ವಸಂತ ಬಂಗೇರ ಮಾರ್ಗದರ್ಶನದಲ್ಲಿ ಜರಗಿತು. ಪಟ್ಟಣ ಪಂಚಾಯತ್ ಬೆಳ್ತಂಗಡಿ, ಯುವವಾಹಿನಿ ಸಂಚಾಲನಾ ಸಮಿತಿ ಬೆಳ್ತಂಗಡಿ ನಗರ ಇವರ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನದ ಸಂದರ್ಭದಲ್ಲಿ ಬೆಳ್ತಂಗಡಿ ಹಳೆಕೋಟೆ ಸಾಯಿ ಮಂದಿರದ ಎದುರುಗಡೆ ಶ್ರೀ ನಾರಾಯಣಗುರು ನಗರದ ನಾಮಫಲಕವನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಅನಾವರಣಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣರಾವ್ […]

Read More

ಹಳೆಯಂಗಡಿ-ಕೊಪ್ಪಳ ರಸ್ತೆಗೆ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ನಾಮಕರಣ

ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್‌ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.

Read More

ಹೆಜಮಾಡಿ ಘಟಕದ ವಿವಿಧ ಕಾರ್ಯಕ್ರಮಗಳು

ದಿನಾಂಕ 11-9-2016 ರಂದು ಹೆಜಮಾಡಿ ಘಟಕದ ವತಿಯಿಂದ ಗುರುಜಯಂತಿಯ ಪ್ರಯುಕ್ತ ಹೆಜಮಾಡಿ ನಾಲ್ಕು ಕರೆಯ ಗ್ರಾಮಸ್ಥರಿಗೆ ಜರಗಿದ ಕ್ರೀಡಾಕೂಟ ’ಹಗ್ಗಜಗ್ಗಾಟ’ ಕಾರ್ಯಕ್ರಮ. ಹೆಜಮಾಡಿ ಘಟಕದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. ತಾ. 6-9-2016 ರಂದು ಸುರತ್ಕಲ್ ಘಟಕದ ವತಿಯಿಂದ ಸುರತ್ಕಲ್ ಲಯನ್ಸ್ ಕ್ಲಬ್‌ನ ಸ್ಪೆಷಲ್ ಚಿಲ್ಡ್ರನ್ಸ್ ಸ್ಕೂಲ್(ವಿಶೇಷ ಮಕ್ಕಳ ಶಾಲೆ)ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರಗಿತು. ಅಲ್ಲಿದ್ದ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಹೆಜಮಾಡಿ ಘಟಕದ ವತಿಯಿಂದ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ರೂ. 10,000/- ವೈದ್ಯಕೀಯ ನೆರವು ವಿತರಣೆ

Read More

ಬೆಳ್ತಂಗಡಿ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!