Yuvavahini

ಘಟಕಗಳು

ಗುರುಗಳ ತತ್ವಾದರ್ಶವೇ ಯುವ ಸಮುದಾಯಕ್ಕೆ ಪ್ರೇರಣೆ:- ರಕ್ಷಿತ್ ಶಿವರಾಮ್

ಉಪ್ಪಿನಂಗಡಿ :- ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಕಳೆದ 35 ವರ್ಷಗಳಿಂದ ಸಮಾಜಮುಖಿ ಚಿಂತನೆಗಳೊಂದಿಗೆ ಸಾಗುತ್ತಿರುವ ಯುವವಾಹಿನಿಯ ಯುವಸಮುದಾಯಕ್ಕೆ ಗುರುಗಳ ಪ್ರೇರಣೆಯೇ ದಾರಿದೀಪ ಎಂದು ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ತಿಳಿಸಿದರು. ಅವರು ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಇವರ ಮನೆಯಲ್ಲಿ ದಿನಾಂಕ 19 ನವೆಂಬರ್2022 ರಂದು ಜರಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]

Read More

ಪದಪ್ರದಾನ ಸಮಾರಂಭ

ಕಡಬ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕಡಬ ಘಟಕದ 2022-23ನೇ ಸಾಲಿನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ದಿನಾಂಕ 19 ನವೆಂಬರ್ 2022 ನೇ ಶನಿವಾರದಂದು ಶ್ರೀ ದುರ್ಗಂಬಿಕಾ ಅಮ್ಮನವರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ. ಟಿ ಮಹೇಶ್ಚಂದ್ರ ಸಾಲ್ಯಾನ್ ಇವರು ಈ ವರ್ಷದ ಕೆಲಸ ಕಾರ್ಯಗಳನ್ನು ಗಮನಿಸಿ ಅಭಿನಂದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ […]

Read More

ಚಿನ್ನರೊಂದಿಗೆ ಸುಸಮಯ

ಕಂಕನಾಡಿ :- ದಿನಾಂಕ 14 ನವೆಂಬರ್ 2022ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಘಟಕದ ವತಿಯಿಂದ ನೆಕ್ಕರೆಮಾರ್ ಅಂಗನವಾಡಿಯಲ್ಲಿ ಚಿಣ್ಣರೊಂದಿಗೆ ಸುಸಮಯ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಸ್ಥಳೀಯ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ನಮ್ಮ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ರವರಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಪೃಥ್ವಿರಾಜ್ ವಹಿಸಿದ್ದರು. ಅಂಗನವಾಡಿ ಶಿಕ್ಷಕಿ ಪುಷ್ಪರವರು ಪ್ರಾರ್ಥಿಸಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿಯ ನೂತನ ಶಿಕ್ಷಕಿ ಕುಮಾರಿ ಪ್ರತೀಕ್ಷಾರವರು ಧನ್ಯವಾದ ಸಮರ್ಪಿಸಿದರು. ವೇದಿಕೆಯಲ್ಲಿ ಘಟಕದ […]

Read More

ಅಂಗನವಾಡಿ ಪುಟಾಣಿ ಮಕ್ಕಳ ಜೊತೆ ಮಕ್ಕಳ ದಿನಾಚರಣೆ ಆಚರಣೆ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ಮಂಜೊಟ್ಟಿ ಅಂಗನವಾಡಿ ಕೇಂದ್ರ ಪಂಜಿಮೋಗರು ನಲ್ಲಿ ದಿನಾಂಕ 14 ನವೆಂಬರ್ 2022ರ ಸೋಮವಾರದಂದು ಬೆಳಗ್ಗೆ ಶಾಲಾ ಶಿಕ್ಷಕಿಯಾದ ಪ್ರಮೀಳರವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಯಂತ್ ಸುವರ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜವಹಾರ ಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ನೆಹರೂರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂತರ ಅಂಗನವಾಡಿ […]

Read More

ಯುವವಾಹಿನಿ ಸೇವಾ ಮನೋಭಾವ ಹೊಂದಿರುವ ವಿಭಿನ್ನ ಸಂಸ್ಥೆ : ಡಾ. ಭರತ್ ವೈ ಶೆಟ್ಟಿ

ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ […]

Read More

ಪದಾಧಿಕಾರಿಗಳ ಪದಪ್ರದಾನ ಮತ್ತು ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಪರಿಕಲ್ಪನೆಯೊಂದಿಗೆ ಸಮಾಜ ಸೇವೆ ಮಾಡುತ್ತಿರುವ ಯುವವಾಹಿನಿ ಬೆಳ್ತಂಗಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ, ಸಾಧಕರಿಗೆ ಸನ್ಮಾನ ಸಾಂತ್ವನನಿಧಿ ಹಸ್ತಾಂತರ ಕಾರ್ಯಕ್ರಮ ನ.13 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಂಗಣದಲ್ಲಿ ನಡೆಯಿತು. ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿ೦ಜ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು , ಬೆಳ್ತಂಗಡಿ ಘಟಕ ಅಧ್ಯಕ್ಷೆ ಸುಜಾತ […]

Read More

ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕು ಅಗತ್ಯ :- ಅಮೃತರಾಜ್

ಉಡುಪಿ :- ವಿದ್ಯಾರ್ಥಿಗಳು ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕನ್ನು ರೂಢಿಸಿಕೊಳ್ಳಬೇಕು. ಗುರು ಹಿರಿಯರ ಆದರ್ಶದಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು. ವಿಶೇಷವಾಗಿ ನಮ್ಮ ಸಮಾಜದ ಹೆಮ್ಮೆಯ ಸಂಸ್ಥೆಯಾದ ಯುವವಾಹಿನಿಯ ವಿದ್ಯೆ, ಉದ್ಯೋಗ, ಸಂಪರ್ಕ ತತ್ವಗಳಿಗೆ ಬದ್ದವಾಗಿದ್ದರೆ ಖಂಡಿತಾ ಒಳಿತು ಸಾಧ್ಯ ಎಂದು ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಅಮೃತ್‌ರಾಜ್ ತಿಳಿಸಿದರು. ಅವರು ದಿನಾಂಕ 13 ನವೆಂಬರ್ 2022ರಂದು ಯುವವಾಹಿನಿ ಉಡುಪಿ ಘಟಕದ ವತಿಯಿಂದ ಜರಗಿದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಾರಂಭದಲ್ಲಿ ಬ್ರಹ್ಮಶ್ರೀ […]

Read More

ತೀರ್ಥ ಕ್ಷೇತ್ರ ಯಾತ್ರೆ

ಪಣಂಬೂರು ಕುಳಾಯಿ :- ದಿನಾಂಕ 06 ನವೆಂಬರ್ 2022 ರವಿವಾರದಂದು ಘಟಕದ ವತಿಯಿಂದ ಯುವವಾಹಿನಿಯ ಮುಖ್ಯ ಧ್ಯೇಯಗಳಲ್ಲಿ ಒಂದಾದ “ಸಂಪರ್ಕ” ಎಂಬ ಪದಕ್ಕೆ ಅರ್ಥ ಬರುವಂತೆ ಘಟಕದ ಸದಸ್ಯರು ಸೇರಿ ಒಂದು ದಿನದ ಯಾತ್ರೆಯ ಕಾರ್ಯಕ್ರಮವನ್ನು ಘಟಕದ ಪ್ರಚಾರ ನಿರ್ದೇಶಕರಾದ ನಿತಿನ್ ರವರ ನೇತೃತ್ವದಲ್ಲಿ ವಿವಿಧ ದೇವಸ್ಥಾನಗಳ ಯಾತ್ರೆಯನ್ನು ಕೈ ಗೊಳ್ಳಲಾಯಿತು. ಗೆಜ್ಜೆಗಿರಿ-ನಂದನ ಬಿತ್ತಲ್, ಹನುಮ ಗಿರಿ, ಪಂಚ ಮುಖಿ ಹನುಮಂತ ದರ್ಶನ, ಸೌತಡ್ಕ ಶಿಶಿಲ ಶಿಶಿಲೇಶ್ವರ ದೇವಸ್ಥಾನ (ಮತ್ಸ್ಯ ತೀರ್ಥ), ಕನ್ಯಾಡಿ ರಾಮ ಮಂದಿರ, ಸೂರ್ಯ […]

Read More

ಸಮಾಜ ಸೇವೆಯೊಂದಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಭಿವೃದ್ಧಿಯನ್ನು ಹೊಂದಬೇಕು – ಹರೀಶ್ ಕೆ. ಪೂಜಾರಿ

ಮಂಗಳೂರು:- ಸ್ವಾತಂತ್ರ್ಯ ಅಮೃತ ಮಹೋತ್ಸವ 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮಂಗಳೂರು ಘಟಕವು, ಘಟಕದ ಸದಸ್ಯರಿಗೆ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ದಿನಾಂಕ 06 ನವೆಂಬರ್ 2022ರ ಭಾನುವಾರದಂದು ಯುವವಾಹಿನಿ ಸಭಾಂಗಣದಲ್ಲಿ ಸಂಗೀತ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸಂಗೀತ ಸ್ಪರ್ಧೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ. ಪೂಜಾರಿಯವರು ಮಾತನಾಡುತ್ತಾ ಸದಸ್ಯರಲ್ಲಿರುವ ಸೂಕ್ತ ಪ್ರತಿಭೆಗಳ ಅನಾವರಣಕ್ಕೆ ಇಂಥ ಕಾರ್ಯಕ್ರಮಗಳು ಮಾದರಿ ಎಂದು ಅಭಿಪ್ರಾಯಪಟ್ಟರು. ಸಂಗೀತ ಸ್ಪರ್ಧೆಯಲ್ಲಿ 9 […]

Read More

ಪದಗ್ರಹಣ ಸಮಾರಂಭ – 2022

ಮಾಣಿ :- ಯುವವಾಹಿನಿ(ರಿ.) ಮಾಣಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 06ನವೆಂಬರ್ 2022 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನ,ಮಾಣಿ ಇಲ್ಲಿ ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ ರವರು ಉದ್ಘಾಟಿಸಿದರು. ತದನಂತರ ಅವರು ನೂತನ ತಂಡಕ್ಕೆ ಶುಭ ಹಾರೈಸಿದರು. ಕಾರ್ಯದರ್ಶಿ ರೇಣುಕಾ ಕಣಿಯೂರುರವರು ವಾರ್ಷಿಕ ವರದಿಯನ್ನು ದೃಶ್ಯ – ಶ್ರವ್ಯ ಪರದೆಯ ಮೂಲಕ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!