24-03-2019, 4:22 PM
ಮೂಡಬಿದಿರೆ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]
Read More
24-03-2019, 2:36 PM
ಉಪ್ಪಿನಂಗಡಿ : ತಾ.24-3-2019 ನೇ ಆದಿತ್ಯವಾರದಂದು ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ಯುವವಾಹಿನಿ ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಟಿ. ಶಂಕರ ಸುವರ್ಣರವರು ದೀಪ ಬೆಳಗುವುದರ ಮೂಲಕ ನೂತನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಶುಭ ಹಾರೈಸಿದರು. ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದಅಧ್ಯಕ್ಷರಾದ ಅಜಿತ್ ಕುಮಾರ್ ಪಲೇರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಸಂಘ ಉದ್ಘಾಟನೆಯ ಬಳಿಕ ಯುವವಾಹಿನಿ ವಿದ್ಯಾರ್ಥಿ ಸಂಘಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಯುವವಾಹಿನಿ ಘಟಕದ […]
Read More
23-03-2019, 3:42 PM
ಮಂಗಳೂರು : ಹದಿಹರೆಯದ ಅವಧಿಯು ಏರಿಳಿತದಿಂದ ಕೂಡಿರುತ್ತದೆ. ವ್ಯಕ್ತಿಯ ಬಾಲ್ಯದ ಸುರಕ್ಷಿತ ಹಿಡಿತದಿಂದ ಪ್ರೌಡಿಮೆಯ ಕಡೆಗೆ ಹೆಜ್ಜೆಯಿಡುತ್ತಾನೆ. ಈ ಹಂತದಲ್ಲಿ ಮಕ್ಜಳೆಡೆಗೆ ಗಮನ ನೀಡಿ ಅವರ ಮನೋವಿಕಾಸದ ಬಗ್ಗೆ ಕಾಳಜಿ ವಹಿಸಬೇಕು ಎಂದು ಖ್ಯಾತ ಮನೋವೈದ್ಯರಾದ ಡಾ.ಅರುಣಾ ಯಡಿಯಾಳ್ ತಿಳಿಸಿದರು. ಅವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರಿನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 23.03.2019ರಂದು ನಡೆದ ಮನೆ, ಮನಸ್ಸು, ಜೀವನ ಕನಸುಗಳ ಜೊತೆ ಮಾತುಕತೆ ಮನದ ಮಾತು […]
Read More
23-03-2019, 12:40 PM
ಕೆಂಜಾರು ಕರಂಬಾರು : ಕರಂಬಾರು ಮುಖ್ಯ ರಸ್ತೆಯಲ್ಲಿರುವ ಯುವವಾಹಿನಿ (ರಿ) ಕೆಂಜಾರು ಕರಂಬಾರು ಘಟಕದ ನೂತನ ಕಾರ್ಯಾಲಯವನ್ನು ದಿನಾಂಕ 23.03.2019 ರಂದು ವೈದಿಕ ವಿಧಿವಿಧಾನಗಳ ಮೂಲಕ ಉದ್ಘಾಟಿಸಲಾಯಿತು. ಬಜಪೆ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅರ್ಚಕರಾದ ಶಿವರಾಮ ಪೂಜಾರಿಯವರು ಗಣ ಹೋಮ , ಗುರುಪೂಜೆಯ ಮೂಲಕ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಘಟಕದ ಅಧ್ಯಕ್ಷರಾದ ಯಶವಂತ ಬಿ ಹಾಗೂ ವಿನುತಾ ದಂಪತಿಗಳು ಪೂಜಾ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷರಾದ ಗಣೇಶ್ ಅರ್ಬಿ, ಕಟ್ಟಡದ ಮಾಲೀಕರಾದ ಜಗನ್ನಾಥ […]
Read More
20-03-2019, 2:23 PM
ಕೂಳೂರು : ಬೋಂದೆಲ್ ನಿವಾಸಿ ಅನುಪಮ ಇವರ ಪುತ್ರ ಧನರಾಜ್ ಬಂಗೇರ ಇವರ ಶಾಲಾ ಫೀಸ್ ಪಾವತಿಸಲು ಅಸಾಧ್ಯವಾದ ಕಾರಣ ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ 13,500/- ರೂಪಾಯಿಯನ್ನು ಎಲ್ಲರ ಒಪ್ಪಿಗೆಯ ಮೇರೆಗೆ ಅವರಿಗೆ ದಿನಾಂಕ 20/03/2019 ರ ವಾರದ ಸಭೆಯಲ್ಲಿ ಸಲಹೆಗಾರರಾದ ನೇಮಿರಾಜ್ ಹಸ್ತಾಂತರಿಸಿದರು. ಈ ಸoದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಕಾರ್ಯದರ್ಶಿ ಪವಿತ್ರ ಅಚನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಪಧಾದಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು .
Read More
18-03-2019, 4:33 PM
ಮೂಲ್ಕಿ: ಮಹಿಳೆಯರು ಸುಶಿಕ್ಷಿತರಾಗಿ ಸಂಘ ಜೀವಿಯಾಗಿ ಸ್ವಾಭಿಮಾನದಿಂದ ನಾಯಕತ್ವದ ಗುಣಗಳನ್ನು ಪಡೆದು ಬೆಳೆದರೆ ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿದೆ ಸ್ವಾಭಿಮಾನದ ನಡೆಗೆ ವೇದಿಕೆಯನ್ನು ಕಲ್ಪಿಸಿರಿ ಎಂದು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಪಾರ್ವತಿ ಎಸ್. ಅಮೀನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಯುವವಾಹಿನಿ ಮೂಲ್ಕಿ ಘಟಕದ ಆಶ್ರಯದಲ್ಲಿ ವಿವಿಧ ಮಹಿಳಾ ಸಂಘಗಳ ಸಹಕಾರದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಭೂಮಿಕಾ ೨೦೧೯ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಮೂಲ್ಕಿ ಘಟಕದ […]
Read More
17-03-2019, 3:54 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಇದರ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 17/03/2019 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯದಲ್ಲಿ ಜರಗಿತು. ಒಂದೇ ಜಾತಿ,ಒಂದೇ ಧರ್ಮ,ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪ್ರಾರ್ಥನೆ ಮತ್ತು ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಘಟಕದ ಅಧ್ಯಕ್ಷರಾದ ಕುಸುಮಾಕರ್ ಕುಂಪಲರವರು ಸಮಾರಂಭಕ್ಕೆ ಆಗಮಿಸಿದ ಮುಖ್ಯ ಅತಿಥಿಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.ದೀಪ ಪ್ರಜ್ವಲನೆಯ […]
Read More