Yuvavahini

ಘಟಕಗಳು

ಯುವವಾಹಿನಿ ನಾಯಕರನ್ನು ಸ್ರಷ್ಟಿಸುವ ಕಾರ್ಖಾನೆ : ಶಂಕರ್ ಸುವರ್ಣ

ಯುವವಾಹಿನಿ ನಾಯಕರನ್ನು ಸ್ರಷ್ಟಿಸುವ ಕಾರ್ಖಾನೆಯಾಗಿದೆ , ಕಳೆದ ಮೂವತ್ತ್ತು ವರ್ಷಗಳ ಸಾರ್ಥಕ್ಯ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಯುವವಾಹಿನಿ ಯುವ ಜನಾಂಗಕ್ಕೆ ವ್ಯಕ್ತಿತ್ವ ವಿಕಸನ , ಸಭಾ ನಡಾವಳಿ ಕಾರ್ಯಾಗಾರದ ಮೂಲಕ ವಿಕಸನದ ನಾಂದಿಯಾಗಿದೆ , ವಿದ್ಯಾರ್ಥಿಗಳಿಗೆ ಚತುರ್ಮುಖ, ಅನ್ವೇಷಣಾ ಕಾರ್ಯಾಗಾರದ ಮೂಲಕ ಸ್ರಜನಶೀಲತೆ ಸ್ರಷ್ಟಿಸಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕೆರ್ ಸುವರ್ಣ ತಿಳಿಸಿದರು . ಅವರು ದಿನಾಂಕ 17.12.2017 ರಂದು ಯುವವಾಹಿನಿ (ರಿ) ಬೆಳುವಾಯಿ ಘಟಕದ ಆಶ್ರಯದಲ್ಲಿ ಜರುಗಿದ ವ್ಯಕ್ತಿತ್ವ […]

Read More

ಯುವವಾಹಿನಿ ಸಮಾಜಕ್ಕೆ ಮಾರ್ಗದರ್ಶನ ನೀಡುವ ಕಾರ್ಯ ಮಾಡುತ್ತಿದೆ : ಪೀತಾಂಬರ ಹೆರಾಜೆ

ಮೂಡಬಿದಿರೆ: ಹಳ್ಳಿಯ ಅಭಿವೃಧ್ಧಿಯಲ್ಲಿ ಯುವಜನತೆಯ ಪಾತ್ರ ಬಲು ಮಹತ್ವಪೂರ್ಣವಾಗಿದೆ. ಹಳ್ಳಿಯ ಜನರಿಗೆ ಉದ್ಯೋಗ ಆರೋಗ್ಯ ವ್ಯವಸ್ಥೆಗಳ ಬಗ್ಗೆ ಹಾಗೂ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಕೆಲಸ ಯುವವಾಹಿನಿಯಂತಹ ಘಟಕಗಳಿಂದಾಗಬೇಕಾಗಿದೆ ಎಂದು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ನೂತನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ದಿನಾಂಕ 10.12.2017 ರಂದು ಮೂಡಬಿದಿರೆಯ […]

Read More

ಸ್ವಚ್ಛತಾ ಅಭಿಯಾನ

ಕೂಳೂರು: ಯುವವಾಹಿನಿ (ರಿ) ಕೂಳೂರು ಘಟಕ ಇದರ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ದಿನಾಂಕ 10-12-2017 ರಂದು ಕೂಳೂರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಮಂದಿರ ಮುಖ್ಯ ರಸ್ತೆಯಿಂದ ಆರಂಭಗೊಂಡು ಧೂಮಾವತಿ ಧೈವಸ್ಥಾನದಲ್ಲಿ ಮುಕ್ತಾಯಗೊಂಡಿತು. ಈ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇದರ ಅಧ್ಯಕ್ಷರಾದ ಶ್ರೀಯುತ ಜಯಾನಂದ್ ಅಮೀನ್ ಪುನ್ಕಮಾರ್ ಇವರು ಚಾಲನೆ ನೀಡಿದರು. ಸ್ಥಳೀಯ ಕಾರ್ಪೊರೇಟರ್ ದಯಾನಂದ ಶೆಟ್ಟಿ ಹಾಗೂ ಯುವವಾಹಿನಿ( ರಿ) ಕೂಳೂರು ಘಟಕದ ಅಧ್ಯಕ್ಷರಾದ […]

Read More

ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆ

ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]

Read More

ಆರೋಗ್ಯ ಮಾಹಿತಿ ಕಾರ್ಯಗಾರ

ದಿನಾಂಕ 03.12.2017  ರಂದು  ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಸಿಕ ಸಭೆಯು, ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹದಲ್ಲಿ ಏರ್ಪಡಿಸಲಾಯಿತು. ಸಭೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಕಾರ್ಯದರ್ಶಿಯಾದ ರಾಜೇಶ್ ಸುವರ್ಣ, ಸಲಹೆಗಾರರಾದ ಲಕ್ಷ್ಮಣ ಸಾಲ್ಯಾನ್ ಹಾಗೂ ಸುನೀಲ್ ಕೆ. ಅಂಚನ್ , ನವೀನ್ ಚಂದ್ರರವರು ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರು ಘಟಕಕ್ಕೆ ಸಲಹೆ ನೀಡಿದರು. ಸಭೆಯಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ ಬಂಗೇರ, ಯುವವಾಹಿನಿ ನಿಕಟ ಪೂರ್ವ ಅಧ್ಯಕ್ಷರಾದ ದೀಪಕ್ ನಾನಿಲ್ ಉಪಸ್ಥಿತರಿದ್ದರು. ಅಂದಿನ […]

Read More

ಸಂಖ್ಯೆಗಿಂತ ಶ್ರದ್ಧೆ ಮುಖ್ಯ, ಕಾರ್ಯದಕ್ಷತೆಯಿಂದ ಕಾರ್ಯಸಾಧನೆ : ಯಶವಂತ ಪೂಜಾರಿ

ಸಸಿಹಿತ್ಲು : ಸದಸ್ಯರ ಸಂಖ್ಯೆಯನ್ನು ಅವಲಂಭಿಸಿಕೊಂಡು ನಮ್ಮ ಕೆಲಸಗಳು ಯಶಸು ಕಾಣುವುದಿಲ್ಲ ಬದಲಾಗಿ ನಾವು ಮಾಡುವ ಕೆಲಸದಲ್ಲಿನ ಬದ್ಧತೆ, ಮತ್ತು ಕಾರ್ಯದಕ್ಷತೆಯಿಂದ ನಿಜವಾದ ಕಾರ್ಯಸಾಧನೆ ಸಾಧ್ಯವಾಗುತ್ತದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ತಂಡಕ್ಕೆ ಪ್ರಮಾಣವಚನ ಭೋಧಿಸಿ ಮಾತನಾಡಿದರು. ಯುವವಾಹಿನಿ ಸಸಿಹಿತ್ಲು ಘಟಕ ಒಂದು ಗ್ರಾಮ ವ್ಯಾಪ್ತಿಯನ್ನು ಹೊಂದಿದೆ, ಹೀಗಿದ್ದರೂ ಹತ್ತಾರು ಸಮಾಜಮುಖಿ ಕಾರ್ಯವನ್ನು ನಡೆಸಿದೆ, ಸಾಂಸ್ಕೃತಿಕವಾಗಿ ಉತ್ತಮ ಹೆಸರನ್ನು […]

Read More

ಯುವವಾಹಿನಿಯಿಂದ ಸಮಾಜದಲ್ಲಿ ವಿಶಿಷ್ಟ ಸಂಚಲನ : ಕೆ ವಸಂತ ಬಂಗೇರ

ವೇಣೂರು: ಯುವವಾಹಿನಿ ಯುವಕರ ಘಟಕ ಯುವಶಕ್ತಿಯನ್ನು ಬಳಸಿಕೊಳ್ಳುತ್ತಿರುವ ಯುವವಾಹಿನಿ ಘಟಕಗಳು ಸಮಾಜದಲ್ಲಿ ಉತ್ತಮ ಕಾರ್ಯಸಾಧನೆ ಮಾಡುತ್ತಿದೆ. ಶಿಕ್ಷಣ, ಆರೋಗ್ಯದ ಜತೆಗೆ ಬಡವರಿಗೆ ಸಹಾಯ ಹಸ್ತ ನೀಡುವ ಮೂಲಕ ಸಮಾಜದಲ್ಲಿ ಯುವವಾಹಿನಿ ವಿಶಿಷ್ಟ ಸಂಚಲನ ಮೂಡಿಸಿದೆ ಎಂದು ಬೆಳ್ತಂಗಡಿ ಶಾಸಕ ಕೆ ವಸಂತ ಬಂಗೇರ ಹೇಳಿದರು.ವೇಣೂರು ಗಾರ್ಡನ್ ವ್ಯೂ ಸಭಾಂಗಣದಲ್ಲಿ ದಿನಾಂಕ 01.12.2017 ರಂದು ಶುಕ್ರವಾರ ಜರಗಿದ ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ 25ನೇ ವೇಣೂರು ನೂತನ ಘಟಕದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಯುವವಾಹಿನಿ ಸಮಾಜ ಸೇವೆಯ ಜತೆಗೆ […]

Read More

ಪರಿಸರದ ಅಂತರ್ಜಲದ ವೃಧ್ಧಿಗಾಗಿ ಶ್ರಮದಾನ

ದಿನಾಂಕ 26.11.2017 ರಂದು ಅಡ್ವೆ ಬೈಲು ತೋಟ ಬಳಿಯ ಹೊಳೆಯ ಅಣೆಕಟ್ಟಿಗೆ ಪರಿಸರದ ಅಂತರ್ಜಲದ ವೃಧ್ಧಿಗಾಗಿ ಶ್ರಮದಾನದ ಮೂಲಕ ಹಲಗೆ ಅಳವಡಿಸುವ ಕಾರ್ಯವನ್ನು ಯುವವಾಹಿನಿ(ರಿ) ಅಡ್ವೆ ಘಟಕದ ಸದಸ್ಯರು ಮಾಡಿದರು ಈ ಮೂಲಕ ಅಡ್ವೆ ಪರಿಸರದ ಜನರ ನೀರಿನ ಅಗತ್ಯತೆಗೆ ಸಹಕಾರಿಯಾಗಿದೆ.

Read More

ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ : ಶಿವರಾಮ

 ಸುಳ್ಯ ; ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ .ಅಸಹಿಷ್ಣುತೆ ಜಾಸ್ತಿ ಯಾಗಿದೆ .ಉಡುಪಿಯಲ್ಲಿ ಧರ್ಮ ಸಂತರ ಸಂಸತ್ ನಡೆಯುತ್ತಿದೆ ಆದರೆ ಅದು ಧರ್ಮ ಸಂತೃಪ್ತರ ಸಭೆ ನಾವೆಲ್ಲ ಧರ್ಮಸಂತ್ರಸ್ತರು .ಪುರೋಹಿತಶಾಹಿ ವರ್ಗದಿಂದ ಧರ್ಮ ಉಳಿದುದಲ್ಲ ಶೋಷಿತ ವರ್ಗದಿಂದ ಉಳಿದುದು ಎಂದು ಬೆಂಗಳೂರಿನ ನಿವೃತ್ತ ಎ.ಸಿ.ಪಿ ಬಿ.ಕೆ .ಶಿವರಾಮ ಹೇಳಿದರು .ಅವರು ನ.25ರಂದುಯುವವಾಹಿನಿ (ರಿ) ಸುಳ್ಯ ಘಟಕ ಮತ್ತು ಸುಳ್ಯದ ಮಾನವ ಬಂಧುತ್ವ ವೇದಿಕೆ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸಂಭಾಂಗಣದಲ್ಲಿ ನಡೆದ ಸಮಾಜ ಸುಧಾರಕ ಶ್ರೀ […]

Read More

ಮಕ್ಕಳ ಹಬ್ಬ- 2017

ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಅವರ ಪ್ರತಿಭೆಗಳನ್ನು ಗುರುತಿಸಲು ಸಾಂಸ್ಕೃತಿಕ ವೇದಿಕೆಗಳು ಅನಿವಾರ್ಯ. ಇಂತಹ ವೇದಿಕೆಗಳ ಮೂಲಕ ಪ್ರತಿಭೆಯ ಜೊತೆಗೆ, ಆತ್ಮವಿಶ್ವಾಸ ಮೂಡಲು ಸಹಕಾರಿಯಾಗಿದೆ. ಇಂದು ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೆ ಹೆತ್ತವರು ಮತ್ತು ಶಿಕ್ಷಕರು ಗಮನಹರಿಸುತ್ತಿರುವುದು ಅನಿವಾರ್ಯವಾಗಿದೆ ಎಂದು ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿತೇಂದ್ರ ಪುರ್ಟಾಡೋ ಹೇಳಿದರು. ಅವರು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 19.11.2017 ರಂದು ನಂದಿಕೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!