Yuvavahini

ಘಟಕಗಳು

ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯಾತ್ರೆಯಲ್ಲಿ ಪಾನೀಯ ಸೇವೆ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಉತ್ಸವದ ಜಗದ್ವಿಖ್ಯಾತ ಮಂಗಳೂರು ದಸರಾ ಶೋಭಾ ಯತ್ರೆಯು ದಿನಾಂಕ 30.09.2017 ರಂದು ವೈಭವದಿಂದ ಸಂಪನ್ನಗೊಂಡಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಂಗಳೂರು ದಸರಾ ಶೋಭಾಯಾತ್ರೆಗೆ ವಿವಿಧ ಸಂಘ ಸಂಸ್ಥೆಗಳ ಪ್ರವರ್ತಿತ ಧಾರ್ಮಿಕ ,ಸಾಂಸ್ಕೃತಿಕ, ಹುಲಿವೇಷ ನೃತ್ಯ ರೂಪಕಗಳು, ದೇಶದ ಪರಂಪರೆಯ ಟ್ಯಾಬ್ಲೋಗಳು, ತೃಶ್ಯೂರಿನ ಬಣ್ಣದ ಕೊಡೆಗಳು, ಕೇರಳದ ಚೆಂಡೆ ವಾದ್ಯ, ಕಲ್ಲಡ್ಕದ ಶಿಲ್ಪಾ ಬೊಂಬೆ ಬಳಗ, ಬೆಂಗಳೂರಿನ ಬ್ಯಾಂಡ್ ಬಳಗ, ಸೋಮನ ಕುಣಿತ, ಪೂಜಾ ಕುಣಿತಗಳು, ರಾಜ್ಯದ ವಿವಿಧ ಸಾಂಸ್ಕೃತಿಕ ಕಲಾ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಪುತ್ತೂರು ಎಂಡೋ ಪಾಲನಾ ಕೇಂದ್ರಕ್ಕೆ ಕೊಡುಗೆ

ಯುವವಾಹಿನಿ (ರಿ) ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ಪುಣ್ಯ ತಿಥಿಯ ಪ್ರಯುಕ್ತ ದಿನಾಂಕ 27.09.2017 ರಂದು ಪುತ್ತೂರು ಕೊಯಿಲ ಎಂಡೋ ಪಾಲನಾ ಕೇಂದ್ರಕ್ಜೆ ಬೇಟಿ ನೀಡಿ ಎಂಡೋ ಸಂತ್ರಸ್ತರಿಗೆ ವಿಶೇಷ ರೀತಿಯ 10 ಜೊತೆ ಶೂ ಹಾಗೂ ಊಟೋಪಚಾರದ ಕೊಡುಗೆ ನೀಡಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜ, ಜತೆ ಕಾರ್ಯದರ್ಶಿ ರವೀಂದ್ರ ಸಂಪ್ಯ, ಉಪಾಧ್ಯಕ್ಷರಾದ ಹರೀಶ್ ಶಾಂತಿ, ಮಾಜಿ ಅಧ್ಯಕ್ಷರಾದ ಬಿ.ಟಿ.ಮಹೇಶ್ ಚಂದ್ರ ಸಾಲ್ಯಾನ್, ಪ್ರಭಾಕರ ಸಾಲ್ಯಾನ್, ನಿರ್ದೇಶಕರಾದ ಸುರೇಶ್ ಸಂಪ್ಯ, ಹರೀಶ್ […]

Read More

ಅಧ್ಯಕ್ಷರಾಗಿ ರವಿ ಬಂಗೇರ ಆಯ್ಕೆ

ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರವಿ ಬಂಗೇರ ಆಯ್ಕೆಯಾದರು. ದಿನಾಂಕ 24.09.2017 ರಂದು ಬೆಳುವಾಯಿ ಷನ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಅನುಷಾ ಎಸ್.ಪೂಜಾರಿ, ಉಪಾಧ್ಯಕ್ಷರಾಗಿ ಶರತ್ ಪೂಜಾರಿ, ಜತೆ ಕಾರ್ಯದರ್ಶಿಯಾಗಿ ಸುರೇಖಾ ಚಂದ್ರಶೇಖರ್, ಕೋಶಾಧಿಕಾರಿ ಯಾಗಿ ಅಶೋಕ್ ಕುಮಾರ್, ಸಂಘಟನಾ ಕಾರ್ಯದರ್ಶಿ ಯಾಗಿ ನಿತಿನ್ ಬೆಳುವಾಯಿ, ಸೂರಜ್ ಬೆಳುವಾಯಿ, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರಾಗಿ ಸಂತೋಷ್ ನಿಡ್ಡೋಡಿ, ಸಂಜಯ್ ಪೂಜಾರಿ, ಸಮಾಜ ಸೇವಾ ನಿರ್ದೇಶಕರಾಗಿ ಮನೋಹರ್ […]

Read More

ಪ್ರೀತಿ , ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಿಸೋಣ : ಪರಮಾನಂದ ಸಾಲ್ಯಾನ್

ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಾಣದ ನಮ್ಮ ಹಿರಿಯರ ಕನಸು ಮಾಡುವಲ್ಲಿ ಯುವವಾಹಿನಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಹಿರಿಯ ಪತ್ರಕರ್ತರು ಹಾಗೂ ರಂಗ ನಿರ್ದೇಶಕರಾದ ಪರಮಾನಂದ ಸಾಲ್ಯಾನ್ ತಿಳಿಸಿದರು. ದಿನಾಂಕ 24.09.2017 ರಂದು ಬೆಳುವಾಯಿ ಷಣ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹೊಸ ಚಿಂತನೆಗಳು, ಕ್ರಿಯಾಶೀಲ ಯೋಜನೆ, ಯೋಚನೆಯ ಮೂಲಕ ಯುವವಾಹಿನಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ‌ […]

Read More

ಆರೋಗ್ಯದ ಕಾಳಜಿ ವಹಿಸಿ: ರಮೇಶ್ ಬಂಗೇರ

ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಲ್ಲಿ ದೇಹದ ಸಮತೋಲನದಿಂದ ದಿನಪೂರ್ತಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯ. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಸೂಕ್ತ ವೈದ್ಯರಲ್ಲಿ ನಡೆಸಿಕೊಂಡು ರೋಗ ಬರುವ ಮೊದಲೇ ಆರೋಗ್ಯದ ಬಗ್ಗೆ ತಿಳಿದುಕೊಳ್ಳಿರಿ ಎಂದು ಲಯನ್ಸ್ ಕ್ಲಬ್‌ನ ಜಿಲ್ಲಾ ಸಮಿತಿಯ ಅಧಿಕಾರಿ ರಮೇಶ್ ಬಂಗೇರ ಹೇಳಿದರು. ಅವರು ದಿನಾಂಕ 24.09.2017 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಯುವವಾಹಿನಿ ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ,ಲಯನ್ಸ್, ಲಿಯೋ ಮತ್ತು ಪೂಜಾ ಫ಼್ರೆಂಡ್ಸ್‌ನ ಹಾಗೂ ಮುಕ್ಕದ […]

Read More

ತುಳುನಾಡ : ಆರಾಧನೆ-ಆಶಯ-ಸ್ವರೂಪ

ಆಧುನೀಕರಣ ಪ್ರಭಾವದಿಂದ ತಂತ್ರಜ್ಞಾನದ ಒಳಿತುಗಳಂತೆ ಕೆಡುಕುಗಳು ಉಂಟಾಗಿ ಯುವ ಸಮುದಾಯದ ಮೇಲೆ ಅದರ ಪರಿಣಾಮ ಪ್ರಖರವಾಗಿದೆ. ಹೆತ್ತವರು ಉತ್ತಮವಾಗಿ ಶಿಶು ಆರೈಕೆಯೊಂದಿಗೆ ಮಕ್ಕಳ ಮೇಲೆ ಯಾವುದೇ ಕೆಟ್ಟ ಪ್ರಭಾವ ಆಗದಂತೆ ನೋಡಬೇಕಾಗಿದೆ. ಈ ನಿಟ್ಟಿನಲ್ಲಿ ನಾರಾಯಣಗುರುವರ್ಯರಂತ ಮಹನೀಯರ ತತ್ವಾದರ್ಶಗಳನ್ನು ತಿಳಿಸಬೇಕಾದ ಅನಿವಾರ್ಯತೆ ಇದೆ ಎಂದು ಕೇಂಜ, ಕುತ್ಯಾರು ಬ್ರಹ್ಮಬೈದರ್ಕಳ ಗರಡಿಯ ಗಡಿ ಪ್ರಧಾನರಾದ ಬಗ್ಗ ಪೂಜಾರಿ ಉಮೇಶ್ ಕೋಟ್ಯಾನ್ ತಿಳಿಸಿದರು. ಅವರು ಪಡುಬಿದ್ರಿ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ […]

Read More

ಬಪ್ಪನಾಡು ದೇವಸ್ಥಾನದಲ್ಲಿ ಸೇವೆ

ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 21.09.2017ರಂದು ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಥಮ ದಿನ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಯೋಗೀಶ್ ಕೋಟ್ಯಾನ್, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ,ನಿಕಟ ಪೂರ್ವ ಅಧ್ಯಕ್ಷರಾದ ಚೇತನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Read More

ಪುಣ್ಯ ಕ್ಷೇತ್ರಗಳ ಪ್ರವಾಸ

ಯುವವಾಹಿನಿ (ರಿ) ಕೊಲ್ಯ ಘಟಕದ ಕುಟುಂಬ ಸದಸ್ಯರ ಪುಣ್ಯ ಕ್ಷೇತ್ರಗಳ ಒಂದು ದಿನದ ಪ್ರವಾಸ ದಿನಾಂಕ 17.09.2017 ರಂದು ಜರುಗಿತು. 58 ಸದಸ್ಯರ ಯುವವಾಹಿನಿ ಕೊಲ್ಯ ಘಟಕದ ಕುಟುಂಬ ಸದಸ್ಯರು ಬಪ್ಪನಾಡು ಕ್ಷೇತ್ರ, ಹಲವು ಮಕ್ಕಳ ತಾಯಿ ದೇವಸ್ಥಾನ, ಹಟ್ಟಿಯಂಡಿ ಗಣಪತಿ, ಕೊಲ್ಲೂರು ಮೂಕಾಂಬಿಕಾ, ಮುರುಡೇಶ್ವರ ಮುಂತಾದ ಪ್ರಸಿದ್ಧ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡರು. ಈ ಪ್ರವಾಸದ ಕ್ಷಣ ಕ್ಷಣದ ಸವಿನೆನಪು ಎಲ್ಲರಲ್ಲೂ ಮನದಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!