Yuvavahini

ಘಟಕಗಳು

ಅಧ್ಯಕ್ಷರಾಗಿ ಲೋಕೇಶ್ ಸುವರ್ಣ ಅಲೆತ್ತೂರು ಆಯ್ಕೆ

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಬಂಟ್ವಾಳ ಪುರಸಭೆಯ ನಾಮನಿರ್ದೇಶಕ ಸದಸ್ಯರಾದ ಲೋಕೇಶ್ ಸುವರ್ಣ ಅಲೆತ್ತೂರು ಇವರು ಆಯ್ಕೆಯಾಗಿದ್ದಾರೆ. ಉಳಿದ ಪದಾಧಿಕಾರಿಗಳಾಗಿ                     ಉಪಾಧ್ಯಕ್ಷರು : ಗಣೇಶ್ ಪೂಂಜೆರೆಕೋಡಿ ಕಾರ್ಯದರ್ಶಿ : ದಿನೇಶ್ ಕೆ. ಸುವರ್ಣ, ಕೋಶಾಧಿಕಾರಿ : ಲೋಕೇಶ್ ಪೂಜಾರಿ. ಜತೆ ಕಾರ್ಯದರ್ಶಿ : ಕಿರಣ್ ರಾಜ್ ನಿರ್ದೇಶಕರು:- ಸಾಂಸ್ಕøತಿಕ : ಹರೀಶ್ ಕೋಟ್ಯಾನ್ ಕುದನೆ ನಾರಾಯಣಗುರು ತತ್ವ […]

Read More

ಕಷ್ಟದ ದಿನಗಳ ನೆನಪು ನಮಗಿರಬೇಕು : ರೋಹಿಣಿ

ತುಳು ಸಂಸ್ಕೃತಿಯಲ್ಲಿ ಆಟಿ ತಿಂಗಳಿಗೆ ವಿಶೇಷವಾದ ಸ್ಥಾನಮಾನವಿದೆ. ಈ ತಿಂಗಳಿನಲ್ಲಿ ನಡೆಯುವ ಯಾವೆಲ್ಲ ಆಚರಣೆಗಳಿವೆಯೋ ಅವೆಲ್ಲದರ ಹಿಂದೆ ಪೂರ್ವಜರು ವೈಜ್ಞಾನಿಕತೆಯನ್ನು ಪರಿಚಯಿಸಿದ್ದನ್ನು ಈಗಲೂ ಕಾಣಬಹುದಾಗಿದೆ. ಬದಲಾವಣೆಯ ಗಾಳಿ ಬಲವಾಗಿ ಬೀಸಿದೆ. ಕೃಷಿ ಸಂಸ್ಕೃತಿಯಿಂದ ಹಿಮ್ಮುಖವಾದ ಕಾರಣ ನಾವೆಲ್ಲ ಆರೋಗ್ಯಪೂರ್ಣ ವಾತಾವರಣದಿಂದ ದೂರ ಸರಿಯುತ್ತಿದ್ದೇವೆ” ಎಂದು ಹಿರಿಯ ಸಾಹಿತಿ ಶ್ರೀಮತಿ ಕೆ.ಎ.ರೋಹಿಣಿ ತಿಳಿಸಿದರು. ಅವರು ದಿನಾಂಕ 23.07.2017ನೇ ಆದಿತ್ಯವಾರದಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಸಹಯೋಗದೊಂದಿಗೆ […]

Read More

ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು : ಯಶವಂತ ಪೂಜಾರಿ

ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು ಬರುತ್ತದೆ. ತಮಗೆ ಸಿಗುವ ಅವಕಾಶವನ್ನು ಯೋಗ್ಯ ರೀತಿಯಲ್ಲಿ ನಿರ್ವಹಿಸಿದಾಗ ಮಾತ್ರ ಸಂಘಟನೆಗೂ ಸಮಾಜಕ್ಕೂ ಕೀರ್ತಿ ಲಭ್ಯವಾಗುತ್ತದೆ. ನಾಯಕತ್ವ ವಹಿಸುವುದು ಜವಾಬ್ದಾರಿ ಯ ಕೆಲಸ. ನಾಯಕನಾದವನು ತನ್ನ ಬಳಗವನ್ನು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀ ಯಶವಂತ […]

Read More

ಯುವವಾಹಿನಿ ಪಣಂಬೂರು ಘಟಕದ ಪದಗ್ರಹಣ

ಯುವವಾಹಿನಿ (ರಿ) ಪಣಂಬೂರು ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 22.07.2017 ರಂದು ಪಣಂಬೂರು NMPT ಕ್ರೀಯೇಶನ್ ಕ್ಲಬ್ ನಲ್ಲಿ ಜರುಗಿತು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಕುಳಾಯಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮಹಾನಗರ ಪಾಲಿಕಾ ಕಾರ್ಪೊರೇಟರ್ ಶ್ರೀಮತಿ ಪ್ರತಿಭಾ ಕುಳಾಯಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಯುವವಾಹಿನಿ ಪಣಂಬೂರು ಘಟಕದ 2017-18 […]

Read More

ಮಾಹಿತಿ ಕಾರ್ಯಾಗಾರ

 ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 16.07.2017 ರಂದು ಸೋಪ್, ಸೋಪ್ ವಾಟರ್, ಬಾತ್ ಸೋಪ್ ತಯಾರಿಸುವ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಸುನೀತಾ ರವರು ಪ್ರಾತ್ಯಕ್ಷಿಕೆಯ ಮೂಲಕ ಈ ಕಾರ್ಯಾಗಾರ ನಡೆಸಿಕೊಟ್ಟರು. ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಹಾಗೂ ಸದಸ್ಯರು ಕಾರ್ಯಾಗಾರದ ಪ್ರಯೋಜನ ಪಡೆದರು.

Read More

ಬಡವರ ಸಂಕಷ್ಟಗಳಿಗೆ ಸ್ಪಂದಿಸುವ ಯುವವಾಹಿನಿ ಕಾರ್ಯ ಶ್ಲಾಘನೀಯ

ಸಮಾಜದ ಕಡು ಬಡವರ ಸಂಕಷ್ಟಗಳಿಗೆ ಯುವ ಜನಾಂಗ ಸ್ಪಂದಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ , ಈ ನಿಟ್ಟಿನಲ್ಲಿ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ಮಹಾನಗರ ಪಾಲಿಕಾ ಹಣಕಾಸು ಮತ್ತು ತೆರಿಗೆ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 16.07.2017 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವ ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರುಸಮಾರಂಭದ ಅಧ್ಯಕ್ಷತೆ […]

Read More

ಮೃತ ಯೋಗೀಶ್ ಪೂಜಾರಿ ಕುಟುಂಬಕ್ಕೆ ಸಾಂತ್ವನ

ಇತ್ತೀಚೆಗೆ ಬಡಗಬೆಳ್ಳೂರು ನಿವಾಸಿ ಯೋಗೀಶ್ ಪೂಜಾರಿ ವಿದ್ಯುತ್ ತಂತಿ ತಗುಲಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಈ ಸಾವಿನಿಂದಾಗಿ ಅವರ ಹೆಂಡತಿ ಹಾಗೂ ಸಣ್ಣ ನಾಲ್ಕು ಮಕ್ಕಳ ಬಡ ಸಂಸಾರ ಅನಾಥವಾಗಿದೆ.ಮೃತ ಯೋಗೀಶ್ ಪೂಜಾರಿಯವರ ಮನೆಗೆ ದಿನಾಂಕ 10.07/2017ರಂದು ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಬೇಟಿ ನೀಡಿ ರೂ 10,000/- ಸಾಂತ್ವನ ನಿಧಿ ನೀಡಲಾಯಿತು. ಹಾಗೂ ಮೂರು ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ನಿರ್ಧರಿಸಲಾಯಿತು ಈ ಸಂಧರ್ಭದಲ್ಲಿ ಯುವವಾಹಿನಿ ಅಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಅಧ್ಯಕ್ಷರಾದ […]

Read More

ಗುರುಗಳ ಸಂದೇಶ ಪಾಲಿಸುತ್ತಿರುವ ಯುವವಾಹಿನಿ ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದಿದೆ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 09.07.2017 ನೇ ಆದಿತ್ಯವಾರ ನಡ್ಪಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಗುರು ಸಂದೇಶವನ್ನು ಯುವವಾಹಿನಿ ಅಕ್ಷರಶಃ ಪಾಲಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ […]

Read More

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು. ಆಮಂತ್ರಣ ಪತ್ರ ಬಿಡುಗಡೆಯನ್ನು […]

Read More

ಮೂಲ್ಕಿ ಯುವವಾಹಿನಿಯಿಂದ ವನಮಹೋತ್ಸವ

ಯುವವಾಹಿನಿ (ರಿ) ಮೂಲ್ಕಿ ಘಟಕ ಆಶ್ರಯದಲ್ಲಿ ಮೂಲ್ಕಿ ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಹಾಗೂ ಈವಗ್ರೀನ್ ಇದರ ಜಂಟಿ ಸಹಯೋಗದಲ್ಲಿ ದಿನಾಂಕ 07-07-2017ರಂದು ಮೂಲ್ಕಿ ವಿಜಯ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.. ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಯಾದ ಡಾll ಹೆಚ್. ಶಾಂತರಾಮ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾll […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!