Yuvavahini

ಘಟಕಗಳು

ಸ್ಪಷ್ಟ ಗುರಿಯೊಂದಿಗೆ ನಾಯಕತ್ವದ ಗುಣ ನಮ್ಮಲ್ಲಿ ಬೆಳೆಯಬೇಕು: ಶ್ರೀ ನರೇಶ್ ಕುಮಾರ್ ಸಸಿಹಿತ್ಲು

  ಕೊಲ್ಯ: ಯುವವಾಹಿನಿಯಿಂದ ನಮಗೇನು ಸಿಗುತ್ತದೆ ಎನ್ನುವುದರ ಬದಲು ಯುವವಾಹಿನಿಗೆ ಸೇರಿ ನಾವು ಏನನ್ನು ಪಡೆಯಬಹುದು, ಹೇಗೆ ಬೆಳೆಯಬಹುದು, ಆ ಮೂಲಕ ಸಮಾಜಕ್ಕೆ ಯಾವ ರೀತಿಯ ಕೊಡುಗೆ ನೀಡಬಹುದು ಇಂತಹ ಮನೋಚಿಂತನೆಯನ್ನು ಸದಸ್ಯರಾಗಿ ಸೇರುವ ಯುವವಾಹಿನಿ ಬಂಧುಗಳು ಬೆಳೆಸಿಕೊಳ್ಳಬೇಕೆಂದು ಯುವವಾಹಿನಿ ( ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಶ್ರೀ ನರೇಶ್ ಸಸಿಹಿತ್ಲು ತಿಳಿಸಿದರು. 07-07-2024ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕಕ್ಕೆ ಹೊಸ ಸದಸ್ಯರಾಗಿ ಸೇರ್ಪಡೆಗೊಂಡವರಿಗೆ ಯುವವಾಹಿನಿ ಸಂಘಟನೆಯ ಬಗ್ಗೆ ಮಾಹಿತಿಯನ್ನು […]

Read More

ಕೆಸರ್ಡ್ ಒಂಜಿ ದಿನ

ಅಡ್ವೇ: ಯುವವಾಹಿನಿ (ರಿ) ಅಡ್ವೇ ಘಟಕದ ವತಿಯಿಂದ ದಿ 07-07-2024 ರವಿವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ದೇವರ ಗದ್ದೆಯಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೇಯ ಪ್ರಧಾನ ಅರ್ಚಕರು ಸದಾನಂದ ಪೂಜಾರಿ ಹಾಗೂ ರಾಮ ಪೂಜಾರಿ ಅಡ್ವೇ ಗರಡಿ ಮನೆರವರ ಅಮೃತ ಹಸ್ತದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಾದಗೈದರು. ಯುವವಾಹಿನಿ (ರಿ) ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಭಾರತಿ ಭಾಸ್ಕರ್ ಅತಿಥಿ ನುಡಿಗೈದರು. ದೇವರ ತೀರ್ಥ ಪ್ರಸಾದ ಎಳನೀರು, ಹಾಲನ್ನು ಭೂಮಿಗೆ ಅರ್ಪಿಸುವುದರ […]

Read More

ಉಚಿತ ವೈದ್ಯಕೀಯ ಶಿಬಿರವು ಹಳ್ಳಿಯ ಜನರ ಅತ್ಯುತ್ತಮ ಸಮಾಜ ಸೇವೆ : ಸುಚರಿತ ಶೆಟ್ಟಿ

ಮೂಡಬಿದ್ರೆ: ಹಳ್ಳಿ ಪ್ರದೇಶದಲ್ಲಿ ಬಡಜನರಿಗೆ ಆರೋಗ್ಯ ತಪಾಸಣಾ ಶಿಬಿರದಿಂದ ಬಹಳಷ್ಟು ಪ್ರಯೋಜನ ಸಿಗಲಿದ್ದು, ಯುವವಾಹಿನಿ ಹಾಗೂ ಇತರ ಸಂಸ್ಥೆಗಳು ಸೇರಿಕೊಂಡು ನಡೆಸುವ ಈ ಶಿಬಿರವು ಅತ್ಯುತ್ತಮ ಸಮಾಜಸೇವೆಯ ಭಾಗವಾಗಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆಯಂತಾಗಲಿ ಎಂದು ಯುವವಾಹಿನಿ(ರಿ.) ಮೂಡಬಿದ್ರೆ ಘಟಕದ ವತಿಯಿಂದ ಹಾಗೂ ಶ್ರೀಶಾ ಸೌಹಾರ್ದ ಸಹಕಾರಿ ಸೊಸೈಟಿ ಮಂಗಳೂರು, ಜೆಸಿಐ ಭಾರ್ಗವ ಮುಂಡ್ಕೂರು, ಬಿಲ್ಲವ ಸಂಘ ಕಡಂದಲೆ – ಪಾಲಡ್ಕ, ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಡಂದಲೆ – ಪಾಲಡ್ಕ, ಶ್ರೀ ಸತ್ಯಸಾಯಿ ಬಾಲ ವಿಕಾಸ ಕೇಂದ್ರ […]

Read More

ಅಂಚೆ ಇಲಾಖೆ – ಮಾಹಿತಿ ಕಾರ್ಯಕ್ರಮ

ಮಂಗಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 03-07-2024 ರಂದು ನಡೆದ ಅಂಚೆ ಇಲಾಖೆಯ ಸೇವೆ ಹಾಗೂ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಯಿತು. ಯತೀನ್ ಕುಮಾರ್ ಡೆವಲಪ್ಮೆಂಟ್ ಆಫೀಸರ್ ಅಂಚೆ ಇಲಾಖೆ ಮಂಗಳೂರು ಇವರು ಮಾಹಿತಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಅಂಚೆ ಇಲಾಖೆಯ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಅಂಚೆ ಇಲಾಖೆ ಈಗ ಹಿಂದಿನಂತಿಲ್ಲ. ಆಧುನಿಕ ಜಗತ್ತಿಗೆ ಸರಿಯಾಗಿ ಬ್ಯಾಂಕಿಂಗ್ ವ್ಯವಸ್ಥೆಗೆ ಪೈಪೋಟಿ ನೀಡುತ್ತಿದೆ. ಇವುಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ, ಪೋಸ್ಟ್ ಆಫೀಸ್ ಠೇವಣಿ […]

Read More

ಮಾಹಿತಿ ಕಾರ್ಯಾಗಾರ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ 01-07-2024 ರಿಂದ 02-07-2024 ರವರೆಗೆ ನಡೆದ ಎರಡು ದಿನದ ಆರ್ಟಿಸನ್ ಕಾರ್ಡ್ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಈ ಶುಭ ಸಂದರ್ಭದಲ್ಲಿ ಉಡುಪಿ ಘಟಕದ ನಿಕಟ ಪೂರ್ವ ಅಧ್ಯಕ್ಷರು ಮಹಾಬಲ ಅಮೀನ್ ದೀಪ ಬೆಳಗಿಸಿ ಚಾಲನೆ ನೀಡಿದರು. ಮಾಹಿತಿ ಕಾರ್ಯಾಗಾರದಲ್ಲಿ ಒಟ್ಟು 33 ಮಂದಿ ಮಹಿಳೆಯರು ಭಾಗವಹಿಸಿ, ಉಚಿತ ತರಬೇತಿ ಪಡೆದು, ಸಂಪನ್ಮೂಲ ವ್ಯಕ್ತಿಗಳ ಮೂಲಕ ಆರ್ಟಿಸನ್ ಕಾರ್ಡಿಗೆ ಅರ್ಜಿ ಸಲ್ಲಿಸಿದರು. 01-07-2024 ರಂದು ಆಕಾಂಕ್ಷಿಗಳಿಗೆ ಕಾರ್ಡು ಕುರಿತು ಹರಿಣ ಜೆ ರಾವ್ […]

Read More

ಗುರುತತ್ವವಾಹಿನಿ ಯಶಸ್ಸಿನ ಮೆಟ್ಟಿಲಾಗಲಿ: ಹರೀಶ್ ಕೆ. ಪೂಜಾರಿ

ಮಂಗಳೂರು: ಗುರುತತ್ವವಾಹಿನಿ ಎಂಬ ಪರಿಕಲ್ಪನೆಯ ಮೂಲಕ ಮನೆ ಮನೆ ಭಜನೆ ಹಾಗೂ ಗುರುಸಂದೇಶದ ಗುರುತತ್ವವಾಹಿನಿ ಕಾರ್ಯಕ್ರಮವು ಬಂಟ್ವಾಳ ಘಟಕದ ನೂತನ ತಂಡದ ಯಶಸ್ಸಿನ‌ ಮೆಟ್ಟಿಲಾಗಲಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ತಿಳಿಸಿದರು. ಅವರು ದಿನಾಂಕ 01-07-2024ನೇ ಸೋಮವಾರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರ ಮನೆ ಭಜನೆಯ ಪರಿಕಲ್ಪನೆಯ ಗುರುತತ್ವವಾಹಿನಿ ಎಂಬ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುಪೀಠದ ಸಮ್ಮುಖದಲ್ಲಿ ಯುವವಾಹಿನಿ ಸದಸ್ಯರಿಂದ […]

Read More

ಕೆಸರ್ದ ಕಂಡೊಡು ಗೊಬ್ಬು

ಕೊಲ್ಯ: ಅಂದು ರವಿವಾರ, ಮೂಡಣದ ಆಗಸದ ತುಂಬಾ ಕರಿಮುಗಿಲು ಮುಸುಕಿತ್ತು. ಬಾನ ಭಾಸ್ಕರ ಮೋಡಗಳ ಮರೆಯಲ್ಲಿ ಎಲ್ಲೋ ಮರೆಯಾಗಿದ್ದ. ಧೋ….ಎಂದು ಸುರಿಯುತ್ತ ವರುಣ ದೇವ ವಸುಂಧರೆಯ ಮಡಿಲಿನಲ್ಲಿ ಜೋರಾಗಿ ಆರ್ಭಟಿಸುತ್ತಿದ್ದ. ಕೆಸರುಗದ್ದೆಯಲ್ಲಿ ಆಡಲು ಅಣಿಯಾಗಿದ್ದ ಯುವವಾಹಿನಿ ಸದಸ್ಯರು ಹಾಗೂ ಸದಸ್ಯರ ಮಕ್ಕಳಲ್ಲಿ ವರ್ಷಧಾರೆ ನಿಲ್ಲಬಹುದೆ ಎನ್ನುವ ಒಂದು ರೀತಿಯ ಆತಂಕ ಮನೆಮಾಡಿತ್ತು. ಕೊನೆಗೂ ಹತ್ತು ಗಂಟೆಯ ನಂತರ ವರುಣದೇವ ಶಾಂತನಾಗಿ ನಮ್ಮೆಲ್ಲರಲ್ಲೂ ಭರವಸೆಯ ಆಶಾಕಿರಣ ಮೂಡಿಸಿದ. ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ದಿನಾಂಕ 30/06/2024 ಭಾನುವಾರದಂದು […]

Read More

ಮನೆ‌ಮನೆ‌ ಭಜನೆ

ಕಡಬ: ಕಡಬ ಘಟಕ ಇದರ ಭಜನಾ ತಂಡದ ವತಿಯಿಂದ ದಿನಾಂಕ 29-06-2024 ನೇ ಶನಿವಾರ ಸಂಜೆ 6.30 ರಿಂದ ಮನೆ‌ಮನೆ‌ ಭಜನೆ ಎಂಬ ಕಾರ್ಯಕ್ರಮವನ್ನು ಬೇರಿಕೆ-ಬಲ್ಯ ಸಮಾಜ ಬಾಂಧವರ 6 ಮನೆಗಳಲ್ಲಿ ಆರಂಭಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 6 ಜನ ಭಜಕರು ಭಾಗಿಯಾಗಿ, ಬಿಲ್ಲವ ಗ್ರಾಮ ಸಮಿತಿ ಬಲ್ಯ ಇದರ ಅಧ್ಯಕ್ಷರಾದ ಹರೀಶ್ ಡಿ. ಎಚ್ ಹಾಗೂ ಬೇರಿಕೆ-ಬಲ್ಯದ ಸಮಾಜ ಬಾಂಧವರ ಸಂಪೂರ್ಣ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿದೆ, ಇವರಿಗೆ ಯುವವಾಹಿನಿ ಭಜನಾ ತಂಡದ ವತಿಯಿಂದ ತುಂಬು ಹೃದಯದ ಧನ್ಯವಾದಗಳು, […]

Read More

ಕೃಷಿ ಮಾಹಿತಿ ಕಾರ್ಯಾಗಾರ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 29-06-2024 ರಂದು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಮಹಿಳಾ ಸಂಚಾಲಕಿ, ಸಮಾಜ ಸೇವಕಿ ಹಾಗೂ ಮಂಗಳೂರು ಮಹಿಳಾ ಘಟಕದ ಮಾಜಿ ಅಧ್ಯಕ್ಷೆಯಾದ ವಿದ್ಯಾ ರಾಕೇಶ್ ಹಾಗೂ ತಂಡದವರಾದ ಡಾ. ರಾಕೇಶ್ ಕುಮಾರ್, ಹರೀಶ್ ಅಡ್ಕ ಹಾಗೂ ಶ್ರೀ ಶ್ರೀಧರ್ ಕುಂಬಳೆ ಇವರು ತಾರಸಿ ತೋಟ ಹಾಗೂ ಅಣಬೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಯಾವುದೇ ಔಪಚಾರಿಕ ಸಭಾ […]

Read More

ವನಮಹೋತ್ಸವ

ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಮತ್ತು ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಜಂಟಿ ಆಶ್ರಯದಲ್ಲಿ ದಿನಾಂಕ 24-06-2024 ಸೋಮವಾರದಂದು ಅರಮನೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ಮತ್ತು ಶಾಲಾ ನಾಯಕಿ ಸಾನ್ವಿ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಕರು ಮಾರ್ಕ್ ಮೆಂಡೊನ್ಸಾ, ಕಾರ್ಯಕ್ರಮದ ಉದ್ದೇಶ ಮತ್ತು ಅವಶ್ಯಕತೆಯನ್ನು ತಿಳಿ ಹೇಳಿದರು. ನಮ್ಮ ಮತ್ತು ಪರಿಸರ ಸಂಬಂಧ ಗಟ್ಟಿಗೊಳಿಸಿದಾಗ ಪ್ರಕೃತಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!