Yuvavahini

ಘಟಕಗಳು

ಆಟಿದ ಪೊರ್ಲು ಕಾರ್ಯಕ್ರಮ -ಯುವವಾಹಿನಿ( ರಿ.) ಕೂಳೂರು ಘಟಕ

10/08/2025 ಘಟಕದ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ ತುಳುನಾಡಿನ ಸಂಪ್ರದಾಯದ ಪ್ರಕಾರ ಭತ್ತ ಕುಟ್ಟುವುದರ ಮೂಲಕ ವಿಶೇಷವಾಗಿ ಆಟಿದ ಪೊರ್ಲು 2025 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧನ ಲಕ್ಷ್ಮಿ ಗಟ್ಟಿ .(ಸದಸ್ಯರು ರಾಣಿ ಅಬ್ಬಕ್ಕ ಅಧ್ಯಯನ ಪೀಠ ವಿಶ್ವ ವಿದ್ಯಾನಿಲಯ.ಮಂಗಳ ಗಂಗೋತ್ರಿ) ಆಟಿ ತಿಂಗಳ ವಿಶೇಷ ಆಚರಣೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು. ‘ಪರನೀರ್ ನೆಗೆಪೆರೆ ಬಲ್ಲಿ, ಪೊಸ ನೀರ್ ಉರ್ಕರ್ರೆ ಬಲ್ಲಿ’ ಎಂದರೆ ಹಳೇ ನೀರು ಬತ್ತಬಾರದು, ಹೊಸ ನೀರು ಹೆಚ್ಚಾಗಬಾರದು. ಹಿರಿಯರು, ಕಿರಿಯರು ಸಮಾನ […]

Read More

ಸಂಪರ್ಕ ನಿರ್ದೇಶಕರಾದ ಸುಜಾತ ರವರ ಸಂಚಾಲಕತ್ವದಲ್ಲಿ ಸು ಪ್ರಮ್ ಸೋ ಚಲನಚಿತ್ರ ವೀಕ್ಷಣೆ – ಯುವವಾಹಿನಿ(ರಿ.) ಕೂಳೂರು ಘಟಕ

ಸಂಪರ್ಕದ ನಿಟ್ಟಿನಲ್ಲಿ ಕುಟುಂಬ ಸಂಪರ್ಕ ನಿರ್ದೇಶಕರಾದ ಸುಜಾತ ರವರ ಸಂಚಾಲಕತ್ವದಲ್ಲಿ ದಿನಾಂಕ 11-08-2025 ರಂದು ಸು ಪ್ರಮ್ ಸೋ ಚಲನಚಿತ್ರ ವೀಕ್ಷಣೆಗೆ ಹೋಗಲಾಗಿತ್ತು. 51 ಜನ ಸದಸ್ಯರ ತಂಡ ಚಲನಚಿತ್ರ ವೀಕ್ಷಣೆ ಮಾಡಿದೆವು.

Read More

ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ-ಯುವವಾಹಿನಿ( ರಿ.) ಮುಲ್ಕಿ ಘಟಕ

ತಾರೀಕು 27/08/2025 ರಿಂದ 31/08/2025ರ ವರೆಗೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ ವು ಯಶಸ್ವಿಯಾಗಿ ವಿಜೃಂಭಣೆಯಿಂದ ಜರಗಿತು. ಸಮಾರಂಭದ ಐದು ದಿವಸದ ಸಭಾ ವೇದಿಕೆಯ ನಿರ್ವಹಣೆ ಯನ್ನು ನಮ್ಮ ಘಟಕವು ಅಚ್ಚುಕಟ್ಟಾಗಿ  ನಿರ್ವಹಿಸಿತು.

Read More

ಶಿಕ್ಷಕ ದಿನಾಚರಣೆ-ಯುವ ವಾಹಿನಿ(ರಿ )ಗ್ರಾಮಚಾವಡಿ ಕೊಣಾಜೆ ಘಟಕ

ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ (ರಿ ) ಸಂಘದ ಸಹಯೋಗದಲ್ಲಿ 05/09/25 ರಂದು ಶಿಕ್ಷಕ ದಿನಾಚರಣೆ ..ಸಮಾಜ ಸೇವಾ ನಿರ್ದೇಶಕರಾದ ಸೌಮ್ಯ ಮನೋಜ್ ಸ್ವಾಗತಿಸಿದರು,ಮಾತೃ ಸಂಘದ ಅಧ್ಯಕ್ಷರಾದ ಶ್ರೀ ವಿಜೇತ್ ಪಜೀರು ಕಾರ್ಯಕ್ರಮ ಉದ್ಘಾಟನೆ ಮಾಡಿದರು ನಿವೃತ್ತ ಶಿಕ್ಷಕ ದಂಪತಿಗಳಾದ ಶ್ರೀಮತಿ ಚಂದ್ರಾವತಿ ಗಂಗಾಧರ್ ಮತ್ತು ಶ್ರೀ ಗಂಗಾಧರ್ ಮಾಸ್ಟರ್ ಅನ್ನು ಸನ್ಮಾನಿಸಲಾಯಿತು..ನಿವೃತ್ತ ಶಿಕ್ಕಕರಾದ ಶ್ರೀ ವಸಂತ್ ಕೋಡಿ ಮುಖ್ಯ ಅಥಿತಿ ಆಗಿ ಆಗಮಿಸಿದ್ದರು..ಯುವವಾಹಿನಿ ಸದಸ್ಯರಾದ 7 ಜನ ಶಿಕ್ಷಕರನ್ನು ಅಭಿನಂದಿಸಲಾಯಿತು..ಜೊತೆ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ -ಯುವವಾಹಿನಿ( ರಿ.)ಕಂಕನಾಡಿ ಘಟಕ

ದಿನಾಂಕ 7-9-2025 ಆದಿತ್ಯವಾರ ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ಸ್ವೀಕರಿಸಲಾಯಿತು.

Read More

ಸಾಪ್ತಾಹಿಕ ಸಭೆಯಲ್ಲಿ ಇಂಜಿನಿಯರ್ ದಿನ-ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 16-09-2025: ಘಟಕದ ಸಾಪ್ತಾಹಿಕ ಸಭೆಯಲ್ಲಿ ಇಂಜಿನಿಯರ್ ದಿನ ಆಚರಿಸಲಾಯಿತು. ಘಟಕದ ಇಂಜಿನಿಯರ್ ಸದಸ್ಯರುಗಳಾದ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ಹಾಗೂ ಗಣೇಶ್ ವಿ ಕೋಡಿಕಲ್ ರನ್ನು ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಇಂಜಿನಿಯರ್ ದಿನದ ಪ್ರಯುಕ್ತ ಗೌರವಿಸಿ ಶುಭಾಶಯ ತಿಳಿಸಿದರು. ಈ ಸಂದರ್ಭ ಘಟಕದ ಪ್ರಥಮ ಉಪಾಧ್ಯಕ್ಷರಾದ ಹರೀಶ್ ಕೆ ಸುವರ್ಣ, ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು, ಕೋಶಾಧಿಕಾರಿ ಮಹೇಶ್ ಅಮೀನ್ ಹಾಗೂ ಘಟಕದ ಮಾಜಿ ಅಧ್ಯಕ್ಷರು , ಸದಸ್ಯರು ಉಪಸ್ಥಿತರಿದ್ದರು.

Read More

ತಾಲೂಕು ಮಟ್ಟದ ನಾರಾಯಣಗುರು ಜನ್ಮದಿನಾಚನೆ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಡು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಗುರುಜಯಂತಿ ಆಚರಣೆ ದಿನಾಂಕ 07/09/2025 ನೇ ಆದಿತ್ಯವಾರ ಬಿ.ಸಿ.ರೋಡಿನ ಗಾಣದಪಡ್ಡುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ವಹಿಸಿ ಮಾತನಾಡಿ, ಸಂಘರ್ಷ […]

Read More

ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ -ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಮಹಾ ಪೂಜೆಯನ್ನು ಸಲ್ಲಿಸಲಾಯಿತು.

Read More

ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ-ಯುವವಾಹಿನಿ( ರಿ.) ಪಣಂಬೂರು ಕುಳಾಯಿ

07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!