Yuvavahini

ಘಟಕಗಳು

ಯುವವಾಹಿನಿ ಕಂಕನಾಡಿ ಘಟಕದಿಂದ ಕಿರು ಪ್ರವಾಸ

ಕಂಕನಾಡಿ : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಮಂಗಳೂರು ಮೋರ್ಗನ್ಸ್ ಗೇಟ್‌ನಲ್ಲಿರುವ ಕ್ರೂಸ್ ಆ್ಯಂಡ್ ಡೈನ್ ಕೇಂದ್ರಕ್ಕೆ ಒಂದು ದಿನದ ಕಿರು ಪ್ರವಾಸವನ್ನು ದಿನಾಂಕ 11-01-2026 ರಂದು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು ಹಾಗೂ ಅವರ ಬಂಧು–ಮಿತ್ರರು ಉತ್ಸಾಹಭರಿತವಾಗಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಕಳೆಯಿದರು. ಬೆಳಿಗ್ಗೆ ಚಹಾ–ತಿಂಡಿಯೊಂದಿಗೆ ಆರಂಭವಾದ ಪ್ರವಾಸ, ಬೋಟಿನಲ್ಲಿ ಸಾಗುವ ಮೂಲಕ ಸುತ್ತಮುತ್ತಲಿನ ಮನೋಹರ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುವ ಅನುಭವವನ್ನು ನೀಡಿತು. […]

Read More

ಜಾಗೃತಿ, ಜವಾಬ್ದಾರಿ ಮತ್ತು ಸಹಕಾರವೇ ಸುರಕ್ಷಿತ ಮಂಗಳೂರಿನ ಮೂಲ ಮಂತ್ರ : ತಿಪ್ಪಾ ರೆಡ್ಡಿ

ಮಂಗಳೂರು : ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳು, ಸೈಬರ್ ಅಪರಾಧಗಳ ವಿಧಗಳು ಮತ್ತು ಅವುಗಳಿಂದ ರಕ್ಷಿಸಿಕೊಳ್ಳುವ ಮಾರ್ಗಗಳ ಬಗ್ಗೆ ನಾವು ಜಾಗ್ರತರಾಗಬೇಕಿದೆ. ನಶೆಯ ದುಷ್ಪರಿಣಾಮಗಳು ಹಾಗೂ ನಶಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರದ ಮಹತ್ವವನ್ನು ತಿಳಿಯಬೇಕಿದೆ. ಜಾಗೃತಿ, ಜವಾಬ್ದಾರಿ ಮತ್ತು ಸಹಕಾರವೇ ಸುರಕ್ಷಿತ ಹಾಗೂ ಆರೋಗ್ಯಕರ ಸಮಾಜದ ಮೂಲಮಂತ್ರವೆಂದು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿ ತಿಪ್ಪಾ ರೆಡ್ಡಿ ಇವರು ತಿಳಿಸಿದರು. ಅವರು ದಿನಾಂಕ 10.01.2026 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ […]

Read More

ಶಿರೂರು ಮಠದ ವೇದವರ್ಧನ ಶ್ರೀಪಾದರಿಗೆ ಪೌರ ಸನ್ಮಾನದಲ್ಲಿ ಯುವವಾಹಿನಿಯಿಂದ ಗೌರವ

ಪುತ್ತೂರು:ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ, ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಶಿರೂರು ಮಠದ ವೇದವರ್ಧನ ಶ್ರೀಪಾದರು ಅವರಿಗೆ ಆಯೋಜಿಸಲಾದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ, ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಭಕ್ತಿಪೂರ್ವಕವಾಗಿ ಗೌರವ ಸಲ್ಲಿಸಲಾಯಿತು. ಗಣ್ಯರ ಸಮ್ಮುಖದಲ್ಲಿ ನಡೆದ ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷ ಕೆ.ಟಿ. ಆನಂದ ಹಾಗೂ ಘಟಕದ ಪದಾಧಿಕಾರಿಗಳು ಭಾಗವಹಿಸಿ, ಶ್ರೀಪಾದರಿಗೆ ಗೌರವ ಸಮರ್ಪಿಸಿ ಆಶೀರ್ವಾದವನ್ನು ಪಡೆದುಕೊಂಡರು. ಈ ಗೌರವ ಸಮರ್ಪಣೆ ಕಾರ್ಯಕ್ರಮವು […]

Read More

ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವರ್ಷಾವಧಿ ಉತ್ಸವದಲ್ಲಿ ಯುವವಾಹಿನಿ ಕಂಕನಾಡಿ ಘಟಕದ ಸ್ವಯಂಸೇವೆ

ಮಂಗಳೂರು: ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ನಡೆದ ವರ್ಷಾವಧಿ ಉತ್ಸವದ ಅಂಗವಾಗಿ ದಿನಾಂಕ 02-01-2026 ಹಾಗೂ 05-01-2026ರಂದು ಸ್ವಯಂಸೇವಾ ಕಾರ್ಯಗಳನ್ನು ನಡೆಸಲಾಯಿತು.ಉತ್ಸವದ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಸ್ವಯಂಸೇವೆಯಲ್ಲಿ ತೊಡಗಿ ವಿವಿಧ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಅಲ್ಲದೆ, ಘಟಕದ ಸದಸ್ಯರಿಂದ ಸಂಗ್ರಹಿಸಲಾದ ರೂ.12,500 ಮೊತ್ತದ ದೇಣಿಗೆಯನ್ನು ಅನ್ನದಾನ ಸೇವೆಗೆ ಸಮರ್ಪಿಸಲಾಯಿತು.ಈ ಸ್ವಯಂಸೇವಾ ಕಾರ್ಯವು ಯುವವಾಹಿನಿ ಕಂಕನಾಡಿ ಘಟಕದ ಸೇವಾ ಮನೋಭಾವ, ಸಂಘಟನಾ ಶಕ್ತಿ ಹಾಗೂ […]

Read More

ಉಳ್ಳಾಲ್ತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಜನವರಿ 10, 2026ರ ಶನಿವಾರ ವಿಟ್ಲ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಯುವವಾಹಿನಿ ವಿಟ್ಲ ಘಟಕದ ಅಧ್ಯಕ್ಷರಾದ ಕೆ.ಟಿ. ಆನಂದ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಈ ಸೇವಾ ಕಾರ್ಯದಲ್ಲಿ, ದೇವಸ್ಥಾನ ಪರಿಸರದ ಸ್ವಚ್ಛತೆ, ಆವರಣ ಶುದ್ಧೀಕರಣ ಸೇರಿದಂತೆ ವಿವಿಧ ಸ್ವಚ್ಛತಾ ಕಾರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸೇವೆ ಎಂಬುದನ್ನೇ ಧ್ಯೇಯವಾಗಿಸಿಕೊಂಡು ಧಾರ್ಮಿಕ […]

Read More

ಸಾಮಾಜಿಕ ಬಂಧನಗಳಿಂದ ಮುಕ್ತಿಗೆ ಗುರುತತ್ವವೇ ಮಾರ್ಗ – ವಿದ್ದು ಉಚ್ಚಿಲ್

ಉಡುಪಿ: ವಿವಿಧ ರೂಪದ ಸಾಮಾಜಿಕ ಕಟ್ಟುಪಾಡುಗಳ ಕಾರಣದಿಂದ ಗಂಭೀರ ಶೋಷಣೆಗೆ ಗುರಿಯಾಗಿದ್ದ ಸಮಾಜಕ್ಕೆ ಬೆಳಕು ತೋರಿದ ಮಹಾನ್ ಚಿಂತಕ ನಾರಾಯಣ ಗುರು ಆಗಿದ್ದಾರೆ. ಸಮಾನ ಮನಸ್ಕ ಅನುಯಾಯಿಗಳ ಮೂಲಕ ತ್ಯಾಗ ಹಾಗೂ ಸೇವೆಯ ಮೌನ ಕ್ರಾಂತಿಯನ್ನು ಸಂಘಟಿಸಿದ ಗುರುಗಳಲ್ಲಿ ಬದ್ದತೆಯ ಅನನ್ಯ ಆದರ್ಶಗಳು ಅಡಗಿವೆ ಎಂದು ರಂಗನಿರ್ದೇಶಕ ವಿದ್ದು ಉಚ್ಚಿಲ್ ತಿಳಿಸಿದರು. ಪ್ರಸ್ತುತ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಡಿ ಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿರುವ ಎಲ್ಲಾ ತರದ ಸಾಮಾಜಿಕ ಬಂಧನಗಳಿಂದ ಬಿಡುಗಡೆಯು ಗುರುತತ್ವಗಳ ಪಾಲನೆಯಿಂದ ಮಾತ್ರ ಸಾಧ್ಯವಿದೆ ಎಂದು ಅವರು […]

Read More

ಆರ್ಯ ಈಡಿಗ ಮಹಿಳಾ ಸಂಘದ ರಾಷ್ಟ್ರೀಯ ಸಮ್ಮೇಳನ: ಯುವವಾಹಿನಿ ಬೆಂಗಳೂರು ಘಟಕದ ಸಾಧನೆ

ಬೆಂಗಳೂರು: ಆರ್ಯ ಈಡಿಗ ಮಹಿಳಾ ಸಂಘ ಬೆಂಗಳೂರು ಇದರ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ, ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರು ವಿವಿಧ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಶ್ರಮ ಮತ್ತು ಪರಿಶ್ರಮದಿಂದ ಸಾಧನೆಯ ಶಿಖರವೇರಬಹುದು ಎಂಬುದಕ್ಕೆ ಯುವವಾಹಿನಿ ಬೆಂಗಳೂರು ಘಟಕ ಕಣ್ಣಿಗೆ ಕಾಣುವ ಜೀವಂತ ಉದಾಹರಣೆಯಾಗಿ ಹೊರಹೊಮ್ಮಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ನಿರ್ಧಾರ ಕೈಗೊಂಡ ಬಳಿಕ, ಸದಸ್ಯರು ಸಿಕ್ಕ ಬಿಡುವಿನ ಸಮಯವನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು, ಹಗಲು-ರಾತ್ರಿ ಎನ್ನದೇ ನಿರಂತರ ಅಭ್ಯಾಸ ನಡೆಸಿದ ಫಲವಾಗಿ ಈ ಯಶಸ್ಸು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!