Yuvavahini

ಘಟಕಗಳು

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ‌ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]

Read More

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಶಕ್ತಿನಗರ : ದಿನಾಂಕ : 22-08-2024 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು. ಪೂಜೆಯ ಮುಂದಾಳತ್ವವನ್ನು ಯುವ ವಾಹಿನಿ (ರಿ) ಶಕ್ತಿನಗರ ಘಟಕದ ನಾರಾಯಣ ಗುರುತತ್ವ ಪ್ರಚಾರಕರಾದ ಶ್ರೀ ಯೋಗೀಶ್ ಸುವರ್ಣ ಇವರು ವಹಿಸಿಕೊಂಡಿದ್ದರು. ಮೊದಲಿಗೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕುಂಟಾಲ್ಪಾಡಿ ಇಲ್ಲಿ ಮುಂಜಾನೆ ಗಣಹೋಮವನ್ನು ನಡೆಸಿ ಮಂದಿರವನ್ನು ಶುದ್ಧೀಕರಿಸಲಾಯಿತು. ನಂತರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿಯನ್ನು ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಇವರ ಮನೆಯಲ್ಲಿ ಪ್ರತಿಷ್ಠಾಪಿಸಲಾಯಿತು. […]

Read More

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬೆಳ್ತಂಗಡಿ: ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಗುರು ಜಯಂತಿ ಕಾರ್ಯಕ್ರಮ ಗುರು ನಮನವನ್ನ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದಲ್ಲಿ ಆಚರಿಸಲಾಯಿತು. ಗುರುಗಳಿಗೆ ಪುಷ್ಪನಮನವನ್ನ ಅರ್ಪಿಸಿ, ಗುರು ಶ್ಲೋಕ ಪಠಿಸಿ ಸರಳವಾಗಿ ಗುರುಗಳ ಜೀವನ ಸಾಧನೆಯ ವಿನಿಮಯ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ನಿಕಟ ಪೂರ್ವಾಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್ .ಕೆ, ಪ್ರಶಾಂತ್ ಮಚ್ಚಿನ, ಸುಜಾತ ಅಣ್ಣಿ […]

Read More

ಗುರು ಜಯಂತಿ

ಕೂಳೂರು : ಬ್ರಹ್ಮಶ್ರೀ ನಾರಾಯಣ ಗುರು ವರ್ಯರ 170 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಸಮಾಜ ಸೇವಾ ನಿರ್ದೇಶಕರು ಜಯಲಕ್ಷ್ಮಿ ಇವರ ಸಂಚಾಲಕತ್ವದಲ್ಲಿ ದಿನಾಂಕ 20-08-2024 ರಂದು ಸಂಜೆ ಚಿರಂತನ ಚಾರಿಟೇಬಲ್ ಟ್ರಸ್ಟ್ ಇಡ್ಯಾ ಸುರತ್ಕಲ್ ಇಲ್ಲಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಇಂದಿರಾ ಸುರೇಶ್ ವಹಿಸಿದ್ದರು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಆಶ್ರಮದ ಹಿರಿಯರು ದಯಾನಂದ ಮೆಂಡನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ […]

Read More

ಗುರುಸ್ಮರಣೆ

ಬೆಂಗಳೂರು : ದಿನಾಂಕ 20/8/2024 ರಂದು ಬ್ರಹ್ಮಶ್ರೀ ನಾರಾಯಣ ಗುರುವರ್ಯರ 170 ನೇ ಜನ್ಮದಿನೋತ್ಸವದ ಅಂಗವಾಗಿ ಗುರುಸ್ಮರಣ ಭಜನೆ ಕಾರ್ಯಕ್ರಮವು ಘಟಕದ ಎರಡನೇ ಉಪಾಧ್ಯಕ್ಷರಾದ ಪ್ರಸಾದ್ ಕುಮಾರ್ ಇವರ ವಿಜಯನಗರದ ಸ್ವಗೃಹದಲ್ಲಿ ರಾತ್ರಿ ಜರುಗಿತು. ಈ ಪುಣ್ಯ ಸುಸಂದರ್ಭದಲ್ಲಿ ಅಧ್ಯಕ್ಷರು, ಕಾರ್ಯದರ್ಶಿ, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿಗಳು, ಗೌರವ ಸಲಹೆಗಾರರು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರ ಪಾಲ್ಗೊಳ್ಳುವಿಕೆಯಲ್ಲಿ ಗುರುಸ್ಮರಣೆ ನಡೆಯಿತು. ಬಡವರ, ಶೋಷಿತ ಜನರ ಏಳಿಗೆಗಾಗಿ ಸಂಗ್ರಾಮದ ಹೋರಾಟಗಳನ್ನು ಮಾಡದೆ ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಸಮಾಜದ […]

Read More

ಗುರು ಜಯಂತಿ ಆಚರಣೆ

ಕೊಲ್ಯ: ಯುವವಾಹಿನಿ(ರಿ.) ಕೊಲ್ಯ ಘಟಕದ ನೇತೃತ್ವದಲ್ಲಿ, ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ದಿ. 20-08-2024 ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜಯಂತಿಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಯದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಅಭಯ ಆಶ್ರಯದ ಹಿರಿಯರ ಸಮ್ಮುಖದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿಯಾದ ಜಗಜೀವನ್ ಕೊಲ್ಯ ಸರ್ವರನ್ನೂ ಸ್ವಾಗತಿಸಿದರು. ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ

ಕಡಬ: ದಿನಾಂಕ 20-08-2024ನೇ ಮಂಗಳವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಸರಕಾರದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ ಮಾತನಾಡಿ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಾರ್ವಜನಿಕವಾಗಿ ಗುರು ಜಯಂತಿ ಆಚರಣೆ ನಡೆಯಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಷರು ಸುಂದರ ಪೂಜಾರಿ ಅಂಗಣ, ಯುವವಾಹಿನಿ (ರಿ) ಕೇಂದ್ರ ಸಮಿತಿ […]

Read More

ಪ್ರತಿಭಾ ಪುರಸ್ಕಾರ

ಪುತ್ತೂರು: ಕರ್ನಾಟಕ ರಾಜ್ಯ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ 2023-24 ನೇ ಸಾಲಿನಲ್ಲಿ 625ಕ್ಕೆ 600 ಹಾಗೂ ಪಿಯುಸಿಯಲ್ಲಿ 600 ಕ್ಕೆ 570ಕ್ಕಿಂತ ಅಧಿಕ ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪುತ್ತೂರು ತಾಲೂಕಿನ ಬಿಲ್ಲವ ಗ್ರಾಮ ಸಮಿತಿಗಳ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ದಿನಾಂಕ 18-08-2024 ರಂದು ಆಯಾಯ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲುಸುವ ಮೂಲಕ ವಿಶಿಷ್ಟವಾಗಿ ನಡೆಯಿತು. ಕೊಡಿಪ್ಪಾಡಿ ಗ್ರಾಮ ಸಮಿತಿಯ ಶ್ರೀ ಹರಿಶ್ಚಂದ್ರ ಪೂಜಾರಿ ಹಾಗೂ ಶ್ರೀಮತಿ ತೇಜಾಕ್ಷಿ ದಂಪತಿಗಳ […]

Read More

ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ ಕ್ರೀಯಾಶೀಲತೆಯನ್ನು ಜೀವಂತಿಕೆಯಾನ್ನಾಗಿಸುವುದು ಯುವವಾಹಿನಿ : ಲೋಕೇಶ್ ಕೋಟ್ಯಾನ್

ಬಂಟ್ವಾಳ : ತುಳುವ ಶೈಲಿಯ ವೇದಿಕೆ ನೋಡಿ ಬಹಳ ಸಂತೋಷವಾಯಿತು‌. ಈ ಮೂಲಕ ತುಳು ಸಂಪ್ರದಾಯವನ್ನೇ ಮೈಗೂಡಿಸಿ ಕೊಂಡಿರುವ ತುಳುವರ ಕೂಟದಲ್ಲಿ ಭಾಗವಹಿಸುವ ಸುಯೋಗ ದೊರಕಿದೆ. ಜೊತೆಗೆ ಯುವವಾಹಿನಿಯ ಪ್ರತಿಭೆಗಳಿಗೆ ಸುಂದರ ವೇದಿಕೆ ದೊರಕಿರುವುದು ಸಂತೋಷವೆನಿಸಿದೆ. ಸಮಾಜಮುಖಿ ಸೇವೆ ಸಲ್ಲಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಪಡೆದೆರುವ ಸಂಸ್ಥೆ ಯುವವಾಹಿನಿಯ ಕಾರ್ಯಗಳು ಶ್ಲಾಘನೀಯ ಎಂದು ಮುಖ್ಯ ಅತಿಥಿಯಾದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್ ಅವರು ಅಭಿಪ್ರಾಯ ಪಟ್ಟರು. ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ ವತಿಯಿಂದ […]

Read More

ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: 15-08-2024 ಗುರುವಾರದಂದು 78ನೇ ಸ್ವಾತಂತ್ರೋತ್ಸವ ಆಚರಣೆಯ ಪ್ರಯುಕ್ತ ಬೆಳಿಗ್ಗೆ 10.00 ಘಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿಯಲ್ಲಿ ನಡೆಯಿತು. ನಾರಾಯಣ ಗುರುವರ್ಯರನ್ನು ಪ್ರಾರ್ಥಿಸಿ, ಘಟಕದ ಅಧ್ಯಕ್ಷರಾದ ಗಣೇಶ್ ಕೆ ಮಹಾಕಾಳಿ ಇವರು ಬಂದಂತಹ ಎಲ್ಲರನ್ನು ಸ್ವಾಗತಿಸಿದರು. ಘಟಕದ ಹಿರಿಯ ಸದಸ್ಯರೆಲ್ಲ ಸೇರಿ ಧ್ವಜಾರೋಹಣವನ್ನು ಮಾಡಿದರು. ಎಲ್ಲರೂ ಒಟ್ಟಿಗೆ ಧ್ವಜ ಗೀತೆಯನ್ನು ಹಾಡಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ಕುಮಾರಿ ಧೃತಿಯವರು ದೇಶಾಭಿಮಾನದ ಬಗ್ಗೆ ದೇಶಭಕ್ತಿ ಗೀತೆಯನ್ನು ಹಾಡಿದರು. ನಂತರ ಘಟಕದ ಹಿರಿಯ ಸದಸ್ಯರು ಹಾಗೂ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!