Yuvavahini

ಘಟಕಗಳು

ಗುರು ಮಂದಿರ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ: ಕುಮಾರ್ ಪೂಜಾರಿ ಇರುವೈಲ್

ಮಂಗಳೂರು: ಊರಿನ 10 ಜನ ಸೇರಿ, ಸಮಾನ ಸ್ವಇಚ್ಛೆ ಇದ್ದರೆ ಗುರು ಮಂದಿರ ಅತೀ ಶೀಘ್ರದಲ್ಲಿ ಪ್ರತಿಷ್ಠಾಪನೆ ಸಾಧ್ಯ ಎಂದು ದಿನಾಂಕ 23-03-2024 ರಂದು ಯುವವಾಹಿನಿ(ರಿ.) ಶಕ್ತಿನಗರ ಘಟಕದ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆ ಮಾಡಿರುವ ಕುಮಾರ್ ಪೂಜಾರಿ ಇರುವೈಲ್ ನುಡಿದರು. ಕಾರ್ಯಕ್ರಮವು ಕುಂಟಲ್ಪಾಡಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ನಡೆಯಿತು. 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಕೆ. ಮಹಾಕಾಳಿ ಒಂದನೇ ಉಪಾಧ್ಯಕ್ಷರಾಗಿ ತುಕಾರಾಂ, ಎರಡನೆಯ ಉಪಾಧ್ಯಕ್ಷರಾಗಿ ಸುಜಾತ, ಕಾರ್ಯದರ್ಶಿಯಾಗಿ […]

Read More

ವಿಶೇಷ ಗುರು ಪೂಜೆ

ಮೂಲ್ಕಿ: ಯುವವಾಹಿನಿ ಸದಸ್ಯ ರೊಳಗೆ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬ ದೊಂದಿಗೆ ಬೆರೆಯಲು ದಿನಾಂಕ 19/08/2023 ರಿಂದ 09/03/2024 ರವರೆಗೆ ಮನೆ ಮನೆ ಭಜನೆ ಭಜನಾ ಸಂಕೀರ್ತನೆ ಜರಗಿತು.ಒಟ್ಟು 24 ಸದಸ್ಯರುಗಳ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಸಿ ಸಮಾರೋಪವಾಗಿ ದಿನಾಂಕ 14/03/2024 ರಂದು ಮೂಲ್ಕಿ ಬಿಲ್ಲವ ಸಂಘದ ಗುರು ಮಂದಿರದಲ್ಲಿ ಭಜನೆ ಹಾಗೂ ವಿಶೇಷ ಗುರುಪೂಜೆ ನಡೆಯಿತು. ಅರ್ಚಕರಾದ ಕೃಷ್ಣ ಶಾಂತಿರವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಅನ್ನಪ್ರಸಾದ ವಿತರಿಸಲಾಯ್ತು.ಈ ಸಂದರ್ಭದಲ್ಲಿ ಮೂಲ್ಕಿ ಬಿಲ್ಲವ […]

Read More

ಭಜನಾ ಸಂಕೀರ್ತನೆ

ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಘಟಕದ ವತಿಯಿಂದ ಪ್ರತಿ ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿಯಲ್ಲಿ ನಡೆಸಿಕೊಂಡು ಬರುತ್ತಿರುವ ಭಜನಾ ಸಂಕೀರ್ತನೆಯ ಅಂಗವಾಗಿ ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 18-03-2024 ಸೋಮವಾರದಂದು ಯುವವಾಹಿನಿ(ರಿ.) ಕೂಳೂರು ಘಟಕದ ಸದಸ್ಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ಒಂದನೇ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಎರಡನೇ ಉಪಾಧ್ಯಕ್ಷರಾದ ಗೀತಾ, ಮಾಜಿ ಅಧ್ಯಕ್ಷರಾದ ದೀಕ್ಷಿತ್ ಸಿ. ಎಸ್., ಮಾರ್ಗದರ್ಶಕರಾದ ಜಯಾನಂದ ಅಮೀನ್, ಚಂದಪ್ಪ ಸನಿಲ್, ನಾರಾಯಣ ಗುರು ತತ್ವ […]

Read More

ಸ್ತ್ರೀ.. ಸಹನೆ, ತಾಳ್ಮೆ, ಸಂಯಮದ ರಾಯಭಾರಿ: ಕುಸುಮಾ ಅಜಯ್

ಮಂಗಳೂರು: ಸ್ತ್ರೀ.. ಸಹನೆ, ತಾಳ್ಮೆ, ಸಂಯಮದಿಂದ ಜೀವನದುದ್ದಕ್ಕೂ ಅದೆಷ್ಟೋ ಪಾತ್ರ ನಿರ್ವಹಿಸುವ ಯಶಸ್ವಿ ರಾಯಭಾರಿ. ಹೆಣ್ಣು ಅಗತ್ಯವಾಗಿ ಸ್ವಾವಲಂಬಿ.. ಶಿಕ್ಷಿತ.. ಉದ್ಯೋಗಸ್ಥ.. ಸಬಲೆ.. ಸಂಘಟಿತಳಾಗಿ ಸಂಸಾರದಲ್ಲಿ, ಸಮಾಜದಲ್ಲಿ ನಾನಾ ರೀತಿಯ ಸಂಬಂಧ ನಿಭಾಯಿಸಿಕೊಂಡು.. ಹೇಗೆ.. ಏಕೆ.. ಹೊಂದಾಣಿಕೆಯಿಂದ ಸಂಸಾರದ ಗುಟ್ಟು ಕಾಪಾಡಬೇಕು. ಪುರುಷ ಸಮಾಜವ ಜರಿಯದೆ.. ಅವರೊಟ್ಟಿಗೆ ಹೇಗೆ ಒಗ್ಗೂಡಬೇಕು.. ಪ್ರಸ್ತುತ ಸಮಾಜಕ್ಕೆ ಇದರ.. ಅಗತ್ಯತೆ ಏನು? ಕೂಡು ಕುಟುಂಬ, ಅವಿಭಕ್ತ ಕುಟುಂಬ ಎರಡಕ್ಕೂ ಸಮಾನತೆಯ ಅಗತ್ಯವಿದೆ.. ಮಹಿಳೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಬಗ್ಗೆಲ್ಲ ಒತ್ತು […]

Read More

ಸ್ತ್ರೀ ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 16-03-2024 ಶನಿವಾರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರಿ,ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಶ್ರೀ ಗುರು ‌ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಲ್ಲಿ ಜರುಗಿತು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜಾನಕಿ ಪಣಕಜೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ನಿರೂಪಕಿ ಹಾಗೂ ಬರಹಗಾರರಾದ ರೇಣುಕಾ ಕಣಿಯೂರು ಮಹಿಳೆ ಮತ್ತು ಆಕೆಯ ವಿವಿಧ ರೀತಿಯ ಶಕ್ತಿಯ ಬಗ್ಗೆ ಸವಿವರವಾಗಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಳಿಯ […]

Read More

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ನೊಂದವರ ಬದುಕಿಗೊಂದು ಆಶಾ ಕಿರಣ

ಕೂಳೂರು: ವಾಮಾಂಜೂರು ಕೆತ್ತಿಕಲ್ ನಿವಾಸಿ ಲಕ್ಷ್ಮೀ, 85 ವರ್ಷ ಇವರು ತುಂಬಾ ಅನಾರೋಗ್ಯದಿಂದ ಇದ್ದು, ಅವರ ಗಂಡು ಮಕ್ಕಳು ತೀರಿ ಹೋಗಿದ್ದಾರೆ. ಒಬ್ಬ ಹೆಣ್ಣು ಮಗಳು ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಾರೆ. ಅವರ ಕುಟುಂಬ ತುಂಬಾ ಕಷ್ಟದಲ್ಲಿ ಇದ್ದು, ನಮ್ಮ ಘಟಕದ ನೆರವು ಕೋರಿದ್ದರು. ಅವರಿಗೆ ನಮ್ಮ ಯುವವಾಹಿನಿ (ರಿ.) ಕೂಳೂರು ಘಟಕದ ಸೇವಾನಿಧಿ ಯೋಜನೆಯಡಿಯಲ್ಲಿ 10,000/- ಸಹಾಯಧನವನ್ನು ನೀಡಲಾಯಿತು. ಮೂಡುಶೆಡ್ಡೆ ನಿವಾಸಿ ಯಶ್ವಿರಾಜ್ ಇವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು, A.J ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರು. ಇವರ […]

Read More

ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚಿನ‌ ಕಾಳಜಿ ಅಗತ್ಯ: ಡಾ.ಮೋಹನ್ ಆಳ್ವ

ಮೂಡುಬಿದಿರೆ: ಕಣ್ಣುಗಳು ನಾವು ಹೊಂದಿರುವ ಅತ್ಯಂತ ಸೂಕ್ಷ್ಮ ಅಂಗಗಳಲ್ಲಿ ಒಂದಾಗಿದೆ. ಹೆಚ್ಚಿದ ಪರದೆಯ ಸಮಯ, ಮಾಲಿನ್ಯ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದಾಗಿ, ಕಳಪೆ ಕಣ್ಣಿನ ಆರೋಗ್ಯವು ಸಾಮಾನ್ಯ ಸಮಸ್ಯೆಯಾಗಿದೆ. ದೃಷ್ಟಿಹೀನತೆ ಮೂಲಭೂತ ದೈನಂದಿನ ಕೆಲಸಗಳನ್ನು ಅಡ್ಡಿಪಡಿಸಬಹುದು ಮತ್ತು ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ನಮ್ಮ ಕಣ್ಣುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ತಿಳಿಸಿದರು. ಅವರು ದಿನಾಂಕ 14-03-2024 ನೇ ಗುರುವಾರದಂದು ಮೂಡುಬಿದಿರೆ ಆಳ್ವಾಸ್ ಆಯುರ್ವೇದ […]

Read More

ಸಂಭ್ರಮದ ಮಹಿಳಾ ದಿನಾಚರಣೆ

ಕೊಲ್ಯ: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ದಿನಾಂಕ 13-03-2024 ರಂದು ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಂದು ಘಟಕದ ಮಹಿಳಾ ಸದಸ್ಯರಿಗೆ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಸದಸ್ಯರಿಗೆ ವಿವಿಧ ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮಹಿಳಾ ಸದಸ್ಯರಿಗೆ ಅಂತರ್ಜಾಲದಲ್ಲಿ ನಾರಿಯರಿಗೊಂದು ಸವಾಲು ರಸ ಪ್ರಶ್ನೆ ಸ್ಪರ್ಧೆ ನಡೆಸಲಾಗಿತ್ತು. ಕೊಲ್ಯ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ಮಹಿಳೆಯರಿಗೆ ಅಂತರ್ಜಾಲ ಸ್ಪರ್ಧೆ ನಡೆಸಿಕೊಟ್ಟರು. ಮಹಿಳಾ ಸಾಧಕರ ಕುರಿತಾಗಿ ಗಂಟೆಗೊಂದು ಪ್ರಶ್ನೆಗಳನ್ನು ಗುಂಪಿನಲ್ಲಿ ಹಾಕಿ ವೇಗವಾಗಿ ಸರಿಯಾದ ಉತ್ತರ ನೀಡಿದ […]

Read More

ಮನೆ‌ ಮನೆ ಭಜನೆ

ಭಜನೆಗಳು ಆರಾಧನೆಯ ಶ್ರೇಷ್ಠ ರೂಪ. ಭಜನೆಗಳು ನಮ್ಮ ಕೃತಜ್ಞತೆ ಮತ್ತು ದೇವರ ಮೇಲಿನ ಪ್ರೀತಿಯನ್ನು ತೋರಿಸಲು ಹಾಡುವ ಹಾಡುಗಳಾಗಿವೆ. ಭಕ್ತಿಗೀತೆಗಳನ್ನು ಹಾಡುವುದು ಅಥವಾ ಕೇಳುವುದು ಒಬ್ಬರ ಮನಸ್ಸಿನಲ್ಲಿರುವ ಎಲ್ಲಾ ನಕಾರಾತ್ಮಕತೆಯನ್ನು ತೊಡೆದುಹಾಕುತ್ತದೆ ಮತ್ತು ಒಬ್ಬರ ಹೃದಯದಲ್ಲಿ ಸಂತೋಷ, ಶಾಂತಿ ಮತ್ತು ಸಂತೃಪ್ತಿಯನ್ನು ತುಂಬುತ್ತದೆ. ಯುವವಾಹಿನಿ (ರಿ.) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ […]

Read More

ವಿಭಿನ್ನ ಪರಿಕಲ್ಪನಾ – ವಿಶ್ವ ಮಹಿಳಾ ದಿನಾಚರಣೆ

ವಿಟ್ಲ: ವಿಟ್ಲ ಕಸಬಾ ಭಾಗದ ಚಂದಳಿಕೆ ನಿವಾಸಿ ದಾಮೋದರ ಪೂಜಾರಿ ಪತ್ನಿ ಗೀತಾ ಕಿಡ್ನಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಕಿಡ್ನಿ ಮರುಜೋಡಣೆಗಾಗಿ ಯುವವಾಹಿನಿ ವಿಟ್ಲ ಘಟಕದ ನೆರವು ಕೋರಿದ್ದರು. ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 11/3/2024 ರಂದು 10,000/- ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ಸಮಾಜ ಸೇವಾ ನಿರ್ದೇಶಕರಾದ ಧನಲಕ್ಷ್ಮಿ ರಾಜೇಶ್, ಜೊತೆ ಕಾರ್ಯದರ್ಶಿ ಯಶೋಧರ ಪಟ್ಲ ಮತ್ತು ನಯನ, ಶ್ಯಾಮಲಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!