ಸಾರಥ್ಯ 2026
09-01-2026, 4:32 AM
08-01-2026, 9:00 PM
ಉಡುಪಿ: ವಿವಿಧ ರೂಪದ ಸಾಮಾಜಿಕ ಕಟ್ಟುಪಾಡುಗಳ ಕಾರಣದಿಂದ ಗಂಭೀರ ಶೋಷಣೆಗೆ ಗುರಿಯಾಗಿದ್ದ ಸಮಾಜಕ್ಕೆ ಬೆಳಕು ತೋರಿದ ಮಹಾನ್ ಚಿಂತಕ ನಾರಾಯಣ ಗುರು ಆಗಿದ್ದಾರೆ. ಸಮಾನ ಮನಸ್ಕ ಅನುಯಾಯಿಗಳ ಮೂಲಕ ತ್ಯಾಗ ಹಾಗೂ ಸೇವೆಯ ಮೌನ ಕ್ರಾಂತಿಯನ್ನು ಸಂಘಟಿಸಿದ ಗುರುಗಳಲ್ಲಿ ಬದ್ದತೆಯ ಅನನ್ಯ ಆದರ್ಶಗಳು ಅಡಗಿವೆ ಎಂದು ರಂಗನಿರ್ದೇಶಕ ವಿದ್ದು ಉಚ್ಚಿಲ್ ತಿಳಿಸಿದರು. ಪ್ರಸ್ತುತ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಡಿ ಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿರುವ ಎಲ್ಲಾ ತರದ ಸಾಮಾಜಿಕ ಬಂಧನಗಳಿಂದ ಬಿಡುಗಡೆಯು ಗುರುತತ್ವಗಳ ಪಾಲನೆಯಿಂದ ಮಾತ್ರ ಸಾಧ್ಯವಿದೆ ಎಂದು ಅವರು […]
08-01-2026, 11:18 AM
ಬೆಂಗಳೂರು: ಆರ್ಯ ಈಡಿಗ ಮಹಿಳಾ ಸಂಘ ಬೆಂಗಳೂರು ಇದರ ಆಶ್ರಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ, ಯುವವಾಹಿನಿ (ರಿ.) ಬೆಂಗಳೂರು ಘಟಕದ ಸದಸ್ಯರು ವಿವಿಧ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮೆರೆದಿದ್ದಾರೆ. ಶ್ರಮ ಮತ್ತು ಪರಿಶ್ರಮದಿಂದ ಸಾಧನೆಯ ಶಿಖರವೇರಬಹುದು ಎಂಬುದಕ್ಕೆ ಯುವವಾಹಿನಿ ಬೆಂಗಳೂರು ಘಟಕ ಕಣ್ಣಿಗೆ ಕಾಣುವ ಜೀವಂತ ಉದಾಹರಣೆಯಾಗಿ ಹೊರಹೊಮ್ಮಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ನಿರ್ಧಾರ ಕೈಗೊಂಡ ಬಳಿಕ, ಸದಸ್ಯರು ಸಿಕ್ಕ ಬಿಡುವಿನ ಸಮಯವನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು, ಹಗಲು-ರಾತ್ರಿ ಎನ್ನದೇ ನಿರಂತರ ಅಭ್ಯಾಸ ನಡೆಸಿದ ಫಲವಾಗಿ ಈ ಯಶಸ್ಸು […]
07-01-2026, 1:49 PM
ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು. ಸಾಮಾಜಿಕ, ಸಂಘಟನಾ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ತೋರಿದ ಸಾಧನೆ ಮತ್ತು ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಈ ಪುರಸ್ಕಾರ ಯುವವಾಹಿನಿಗೆ ಹೆಮ್ಮೆಯ ವಿಷಯವಾಗಿದ್ದು, ಸಂಘಟನೆಯ ಮಹಿಳಾ ಶಕ್ತಿಗೆ ಸ್ಫೂರ್ತಿಯಾಗಿದೆ. ಯುವವಾಹಿನಿ (ರಿ.) ಕೇಂದ್ರ ಸಮಿತಿಯು […]
06-01-2026, 9:00 PM
ಸುರತ್ಕಲ್ : ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 06-01-2026ರಂದು ಮನೆ–ಮನೆ ಭಜನಾ ಸೇವೆಯನ್ನು ಘಟಕದ ಅಧ್ಯಕ್ಷರಾದ ವಾಣಿ ಗಣೇಶ್ ಅವರ ಮನೆಯಲ್ಲಿ ಭಕ್ತಿಭಾವದಿಂದ ನಡೆಸಲಾಯಿತು. ಈ ಭಜನಾ ಸೇವೆಯಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿ, ಧಾರ್ಮಿಕ ವಾತಾವರಣವನ್ನು ನಿರ್ಮಿಸಿದರು. ಕಾರ್ಯಕ್ರಮವು ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಚೈತನ್ಯವನ್ನು ಮೂಡಿಸುವ ಉದ್ದೇಶದಿಂದ ಯಶಸ್ವಿಯಾಗಿ ನೆರವೇರಿತು
06-01-2026, 3:08 PM
ಪಡುಬಿದ್ರಿ : ಯುವವಾಹಿನಿ (ರಿ.), ಪಡುಬಿದ್ರಿ ಘಟಕದ ವತಿಯಿಂದ ಆಹ್ವಾನಿತ ತಂಡಗಳ ಮಹಿಳಾ ಕ್ರಿಕೆಟ್ ಪಂದ್ಯಾವಳಿ “ಬಿಲ್ಲವ ಪ್ರೀಮಿಯರ್ ಲೀಗ್ (BPL)–2026” ಅನ್ನು 2026ರ ಜನವರಿ 31 ಮತ್ತು ಫೆಬ್ರವರಿ 1ರಂದು ರಾಜೀವ್ ಗಾಂಧಿ ಕ್ರೀಡಾಂಗಣ, ಹೆಜಮಾಡಿದಲ್ಲಿ ಆಯೋಜಿಸಲಾಗಿದೆ. ಕ್ರೀಡೆಯ ಮೂಲಕ ಸಂಘಟನೆ, ಏಕತೆ ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಈ ಪಂದ್ಯಾಕೂಟದ ಮುಖ್ಯ ಉದ್ದೇಶವಾಗಿದ್ದು, ಈ ಸಂದರ್ಭದಲ್ಲಿ ಪ್ರತಿಭಾವಂತ ಆಟಗಾರ್ತಿಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಗುವುದು. ಪಂದ್ಯಾಕೂಟದ ವಿಜೇತರಿಗೆ ಒಟ್ಟು ₹1,75,000 […]
05-01-2026, 2:03 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ದಿನಾಂಕ: 05-01-2026 ರಂದು ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಲಹರಿ ತಂಡ ಬಿಜೈ ಮಂಗಳೂರು ಇವರ ಸಹಯೋಗದಿಂದ ನೆರವೇರಿತು. ಯುವವಾಹಿನಿ (ರಿ.) ಮಂಗಳೂರು ಘಟಕದ ಒಂದನೇ ಉಪಾಧ್ಯಕ್ಷರು ಹರೀಶ್ ಕೆ. ಸುವರ್ಣ ಮತ್ತು ಸದಸ್ಯರು ಉಪಸ್ಥಿತಿ ಇದ್ದರು.
04-01-2026, 2:48 PM
ಬೆಳ್ತಂಗಡಿ: ನೊಂದ ಕುಟುಂಬಗಳಿಗೆ ಸಾಂತ್ವನ ನೀಡುವ ಜೊತೆಗೆ ಯುವಜನತೆಯಲ್ಲಿ ಸ್ನೇಹ, ಸೌಹಾರ್ದತೆ ಮತ್ತು ಸಂಘಟನಾ ಮನೋಭಾವವನ್ನು ಬೆಳೆಸುವ ಕಾರ್ಯದಲ್ಲಿ ಯುವವಾಹಿನಿಯ ಪಾತ್ರ ಶ್ಲಾಘನೀಯವಾಗಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಶ ಸಂಭ್ರಮದ ಪ್ರಯುಕ್ತ ಆಯೋಜಿಸಲಾದ ಕ್ರೀಡಾಕೂಟ ಹಾಗೂ ಸಾಂತ್ವನ ನಿಧಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಂಗೇರ ಬ್ರಿಗೇಡ್ ಅಧ್ಯಕ್ಷ ಬಿನುತಾ ಬಂಗೇರ ಮಾತನಾಡಿ, ನೊಂದ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡುವ ಜೊತೆಗೆ ಮನಸ್ಸಿಗೆ ಧೈರ್ಯ ತುಂಬುವ ಸಂಘಟನೆ […]