Yuvavahini

ಘಟಕಗಳು

ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುತ್ತಿರುವ ಯುವ ವಾಹಿನಿಯ ಕಾರ್ಯ ಸುತ್ಯರ್ಹ : ಬನ್ನಂಜೆ ಬಾಬು ಅಮೀನ್

ಉಡುಪಿ: ನಾರಾಯಣ ಗುರುಗಳು ವಿಶ್ವಕ್ಕೆ ಸಾರ್ವಕಾಲಿಕ ಸಂದೇಶ ನೀಡಿದ ಜಗದ್ಗುರುಗಳು. ಅವರ ಚಿಂತನೆಗಳು ಪ್ರಸ್ತುತ ಯುವ ಜನತೆಗೆ ಹೆಚ್ಚು ಪ್ರೇರಣೆಯಾಗಬೇಕು. ಜಾತಿ ಮತ ಧರ್ಮಗಳ ಸಾಮರಸ್ಯ ಸಾರಿದ ನಾರಾಯಣ ಗುರುಗಳ ತತ್ವಾದರ್ಶಗಳನ್ನು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರ ಸಂಘಟಿಸುವ ಮೂಲಕ ಯುವವಾಹಿನಿ ಉಡುಪಿ ಘಟಕವು ಗುರುತಿಸಿಕೊಂಡಿರುವುದು ಸ್ತುತ್ಯರ್ಹವೆಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್ ಅಭಿಪ್ರಾಯಪಟ್ಟರು. ಶ್ರೀಯುತರು ಯುವವಾಹಿನಿ ಉಡುಪಿ ಘಟಕವು ಬನ್ನಂಜೆ ಬಿಲ್ಲವರ ಸೇವಾ ಸಂಘದ […]

Read More

ವಿದ್ಯಾನಿಧಿ ಬಲವರ್ಧನೆಗೆ ಬಜಪೆಯಲ್ಲಿ ‘ಪೊರಿಪುದಪ್ಪೆ ಜಲದುರ್ಗೆ’ ತುಳು ನಾಟಕದ ಯಶಸ್ವಿ ಪ್ರದರ್ಶನ

ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ 11ನೇ ವರ್ಷದ ಅಂಗವಾಗಿ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸ್ಥಾಪಿಸಲಾದ ‘ವಿದ್ಯಾನಿಧಿ’ಯನ್ನು ಬಲವರ್ಧನೆಗೊಳಿಸುವ ಸಲುವಾಗಿ ದಿನಾಂಕ 24/01/2026 ರಂದು ಶನಿವಾರ ಬಜಪೆ ಕೇಂದ್ರ ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ತುಳು ಪೌರಾಣಿಕ ಸಿನಿ ನಾಟಕ ‘ಪೊರಿಪುದಪ್ಪೆ ಜಲದುರ್ಗೆ’ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಬೆನಕ ಆರ್ಟ್ಸ್ ಕುಡ್ಲ ಕಲಾವಿದರಿಂದ ನಡೆದ ಈ ನಾಟಕಾಭಿನಯ ಅಭೂತಪೂರ್ವ ಯಶಸ್ಸು ಕಂಡು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳಿಂದ ಅಪಾರ […]

Read More

ಶೈಕ್ಷಣಿಕ ಮಾರ್ಗದರ್ಶನ ಶಿಬಿರ

ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ‌ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]

Read More

ಟೈಟಲ್ ಸಾಂಗ್ ಬಿಡುಗಡೆ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31 ಹಾಗೂ ಫೆಬ್ರವರಿ 01ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲ್ಪಟ್ಟಿದ್ದು, ಇದರ ಅಂಗವಾಗಿ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಗುರುದೇವರ ಸ್ಮರಣೆಯೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು ಅವರು ಮಾತನಾಡಿ, ಯುವವಾಹಿನಿ (ರಿ.) […]

Read More

ಜಯದುರ್ಗ ದೇವಸ್ಥಾನದಲ್ಲಿ ಶ್ರಮದಾನ

ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 23-01-2026ರ ಶುಕ್ರವಾರ ಸಂಜೆ 5.00 ರಿಂದ 7.00 ಗಂಟೆಯವರೆಗೆ ಕಡಬದ ಜಯದುರ್ಗ ದೇವಸ್ಥಾನದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ದೇವಸ್ಥಾನದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದರು. ಸಮಾಜಮುಖಿ ಕಾರ್ಯಗಳ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿಗೆ ಯುವವಾಹಿನಿ ಸದಾ ಬದ್ಧವಾಗಿರುವುದಕ್ಕೆ ಈ ಶ್ರಮದಾನ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರಮದಾನದಲ್ಲಿ […]

Read More

“ಗುರು ಸ್ಮರಣೆ – 2026”

ಉಪ್ಪಿನಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ನಕ್ಷತ್ರ ಶತಭಿಷ ದಿನವಾದ 22.01.2026ರ ಗುರುವಾರದಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಹಾಗೂ ಬಜತ್ತೂರು ಬಿಲ್ಲವ ಗ್ರಾಮ ಸಮಿತಿಯ ಸಂಯುಕ್ತ ಆಶ್ರಯದಲ್ಲಿ “ಗುರು ಸ್ಮರಣೆ – 2026” ಭಜನಾ–ಸಂಕೀರ್ತನಾ ಕಾರ್ಯಕ್ರಮ ನಡೆಯಿತು ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಹಾಗೂ ಗ್ರಾಮ ಸಮಿತಿಯ ಸದಸ್ಯರು ಸೇರಿದಂತೆ ಒಟ್ಟು 65 ಮಂದಿ ಭಕ್ತಿಯಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಗುರು ಮಂದಿರದ ಸಂಚಾಲಕರಾದ ಅಶೋಕ್ ಕುಮಾರ್ ಪಡ್ಪು, […]

Read More

ಯುವವಾಹಿನಿ (ರಿ.) ಪುತ್ತೂರು ಘಟಕದಿಂದ ಭಜನಾ ಸಂಕೀರ್ತನೆ

ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ 2025ನೇ ಡಿಸೆಂಬರ್ 26ರ ಶತಭಿಷ ನಕ್ಷತ್ರದಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಭಜನಾ ಸಂಕೀರ್ತನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾದ ಸಮಿತ್ ಪಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ದೀಕ್ಷಿತ್, ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸೇವೆಯನ್ನೇ ಧ್ಯೇಯವಾಗಿಸಿಕೊಂಡು ಎಲ್ಲರೂ ಧಾರ್ಮಿಕ ಕಾರ್ಯಕ್ರಮದ […]

Read More

ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಕ್ಕಳಿಗೆ ಜಾಗೃತಿ

ಪಣಂಬೂರು–ಕುಳಾಯಿ : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 19-01-2026 ಸೋಮವಾರ ಮಧ್ಯಾಹ್ನ 2.30ರಿಂದ 4.00 ಗಂಟೆಯವರೆಗೆ ಬೈಕಂಪಾಡಿಯ ಭಟ್ಟರಾಂಡ್ ರಶೆಲ್ ಶಾಲೆಯಲ್ಲಿ ಅಲ್ಲಿನ ಮಕ್ಕಳಿಗಾಗಿ ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಣಂಬೂರು ಠಾಣಾ ಅಧಿಕಾರಿ ಜ್ಞಾನ ಶೇಖರ್ ಮಾತನಾಡಿ, ಮಾದಕ ವ್ಯಸನಗಳಿಂದ ಯುವಕರು ಹೇಗೆ ದಾರಿ ತಪ್ಪುತ್ತಿದ್ದಾರೆ, ಅದರ ದುಷ್ಪರಿಣಾಮಗಳು ಏನೆಂಬುದನ್ನು ಮಕ್ಕಳಿಗೆ ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ವಿವರಿಸಿದರು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!