ವಿಕಾಸ 2026
22-02-2026, 9:45 AM
21-02-2026, 12:50 PM
ಕೊಲ್ಯ : ಬ್ರಹ್ಮಶ್ರೀ ನಾರಾಯಣಗುರುಗಳು ಮಂಗಳೂರಿನ ಕುದ್ರೋಳಿಯಲ್ಲಿ 1912 ಫೆಬ್ರವರಿ 21 ರಂದು ಶಿವಲಿಂಗ ಪ್ರತಿಷ್ಠಾಪಿಸಿದ ಐತಿಹಾಸಿಕ ದಿನದ ಪವಿತ್ರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ” ಎಂಬ ಸಂಕಲ್ಪದ ಕುದ್ರೋಳಿ ತೀರ್ಥಾಟನೆ ಮೆರವಣಿಗೆಯಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಭಾಗವಹಿಸಿದರು. ಶ್ರೀ ಗುರುಗಳ ತತ್ವ ಮತ್ತು ಆದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ನಡೆದ ಈ ಮೆರವಣಿಗೆಯಲ್ಲಿ ಕೊಲ್ಯ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ […]
21-02-2026, 12:47 PM
ಕಡಬ/ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವಲಿಂಗ ಪ್ರತಿಷ್ಠಾಪಿಸಿದ ಪವಿತ್ರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ – ಶ್ರೀಗುರುವಿನೆಡೆಗೆ” ಎಂಬ ಸಂಕಲ್ಪದ ಕುದ್ರೋಳಿ ತೀರ್ಥಾಟನೆಯಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ದಿನಾಂಕ 21-02-2026ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಆಗಮಿಸಿದ ಶಿವಗಿರಿ ಪೀಠಾಧಿಪತಿಗಳನ್ನು ಅತ್ಯಂತ ಭವ್ಯವಾಗಿ ಬರಮಾಡಿಕೊಳ್ಳುವ ಮೂಲಕ ತೀರ್ಥಾಟನೆಗೆ ಚಾಲನೆ ನೀಡಲಾಯಿತು. ಅಲ್ಲಿಂದ ಆರಂಭಗೊಂಡ ಭಕ್ತಿಪೂರ್ವಕ ಮೆರವಣಿಗೆಯೂದ್ದಕ್ಕೂ ಕಡಬ […]
21-02-2026, 12:42 PM
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವಲಿಂಗ ಪ್ರತಿಷ್ಠಾಪಿಸಿದ ಪವಿತ್ರ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ – ಶ್ರೀಗುರುವಿನೆಡೆಗೆ” ಕುದ್ರೋಳಿ ತೀರ್ಥಾಟನೆಯಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಅತ್ಯಂತ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ದಿನಾಂಕ 21-02-2026ರಂದು ಬೆಳಿಗ್ಗೆ 9.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಆರಂಭಗೊಂಡ ಈ ಭವ್ಯ ಯಾತ್ರೆಯುದ್ದಕ್ಕೂ ಗುರುಗಳ ಜ್ಞಾನದ ಸಂಕೇತವಾದ ಹಳದಿ ವರ್ಣದ ಬಾವುಟ ಹಾಗೂ ವಸ್ತ್ರಧಾರಿ ಭಕ್ತರಿಂದ ಇಡೀ ಪರಿಸರವು ಹಳದಿಮಯವಾಗಿ ಕಂಗೊಳಿಸುತ್ತಿತ್ತು. “ಓಂ ಶ್ರೀ ನಾರಾಯಣ […]
21-02-2026, 12:38 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ “ನಮ್ಮ ನಡಿಗೆ – ಶ್ರೀಗುರುವಿನೆಡೆಗೆ” ಎಂಬ ವಿಶೇಷ ಸಂಕಲ್ಪದೊಂದಿಗೆ ಶನಿವಾರದಂದು ತೀರ್ಥಾಟನೆಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು. ಭವ್ಯ ಸ್ವಾಗತ ಮತ್ತು ಮೆರವಣಿಗೆ: ದಿನಾಂಕ 21-02-2026ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಆಗಮಿಸಿದ ಶಿವಗಿರಿ ಪೀಠಾಧಿಪತಿಗಳನ್ನು ಮಹಿಳಾ ಘಟಕದ ವತಿಯಿಂದ ಭವ್ಯವಾಗಿ ಬರಮಾಡಿಕೊಳ್ಳಲಾಯಿತು. ಅಲ್ಲಿಂದ ಪೀಠಾಧಿಪತಿಗಳ ನೇತೃತ್ವದಲ್ಲಿ ಯಾತ್ರೆಯು ಕುದ್ರೋಳಿ ಕ್ಷೇತ್ರದತ್ತ ಸಾಗಿತು.ಧಾರ್ಮಿಕ ಕಾರ್ಯಕ್ರಮಗಳು: ಕ್ಷೇತ್ರಕ್ಕೆ ಆಗಮಿಸಿದ ಯಾತ್ರಿಗಳು […]
20-02-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಧಾರ್ಮಿಕ ಜಾಗೃತಿ ಮತ್ತು ಸದಸ್ಯರ ನಡುವಿನ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಐವತ್ತೊಕ್ಲು ಗ್ರಾಮದ ಪೊಳೆಂಜದಲ್ಲಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ದಿನಾಂಕ 20.02.2026ರ ಶುಕ್ರವಾರ ಸಂಜೆ ಶ್ರೀಮತಿ ಮತ್ತು ಶ್ರೀ ನಾಗೇಶ್ ಪೂಜಾರಿಯವರ ಗೃಹದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಪಾಲ್ಗೊಂಡರು. ಸಂಜೆ 7.15 ರಿಂದ 9.00 ಗಂಟೆಯವರೆಗೆ ನಡೆದ ಭಜನೆಯಲ್ಲಿ ಸುಶ್ರಾವ್ಯವಾಗಿ ನಾಮಸಂಕೀರ್ತನೆ ಮಾಡುವ ಮೂಲಕ ಭಕ್ತಿ ಸೇವೆಯನ್ನು ಸಮರ್ಪಿಸಲಾಯಿತು. ಧಾರ್ಮಿಕ ಬದ್ಧತೆ: […]
19-02-2026, 8:00 PM
ಕಾರ್ಕಳ: “ಸಮಾಜದಲ್ಲಿರುವ ಅಶಕ್ತರಿಗೆ ಆಸರೆಯಾಗುವುದು ಮತ್ತು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಪ್ರೋತ್ಸಾಹಿಸುವುದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನಾವು ಸಲ್ಲಿಸುವ ನಿಜವಾದ ಪೂಜೆ. ಗುರುಗಳ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಬೇಕು,” ಎಂದು ಉಡುಪಿಯ ನಿವೃತ್ತ ಉಪನ್ಯಾಸಕರಾದ ದಯಾನಂದ ಬಿ. ಕಿದಿಯೂರು ಅವರು ಕರೆ ನೀಡಿದರು.ಅವರು ಯುವವಾಹಿನಿ (ರಿ.) ಕಾರ್ಕಳ ಘಟಕದ ನೇತೃತ್ವದಲ್ಲಿ, ಕಾಂತಾವರ ಬಿಲ್ಲವ ಸಂಘದ ಆತಿಥ್ಯದಲ್ಲಿ ದಿನಾಂಕ 19.02.2026 ರಂದು ನಡೆದ “ಗುರುಭ್ಯೋ […]
19-02-2026, 9:30 AM
ಬಂಟ್ವಾಳ : ಫೆಬ್ರವರಿ 28 ಹಾಗೂ ಮಾರ್ಚ್ 01ರಂದು ನಡೆಯಲಿರುವ ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮ ಸಮಾರಂಭದ ಆಮಂತ್ರಣ ಪತ್ರವನ್ನು ಬಂಟ್ವಾಳದಲ್ಲಿ ಭಾರತ ಸರ್ಕಾರದ ಮಾಜಿ ವಿತ್ತ ಸಚಿವರಾದ ಬಿ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಲ್ಲಿ ಯುವವಾಹಿನಿ ಉಡುಪಿ ಘಟಕವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿದ್ದು, ಅಶಕ್ತ ಕುಟುಂಬಗಳ ಮನೆ ನಿರ್ಮಾಣದಂತಹ ಮಹತ್ವದ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಂಡಿರುವುದು […]
17-02-2026, 9:11 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ […]
15-02-2026, 10:30 AM
ಉಪ್ಪಿನಂಗಡಿ : ಯುವಜನರ ನಿರ್ಲಕ್ಷ್ಯ ಮನೋಭಾವದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ನಮ್ಮನ್ನು ಮಾತ್ರವಲ್ಲದೆ ನಮ್ಮನ್ನು ನಿರೀಕ್ಷಿಸುತ್ತಿರುವ ಮನೆಯವರನ್ನೂ ರಕ್ಷಿಸುತ್ತದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಯುವಜನತೆ ತಮ್ಮ ಹೆತ್ತವರಿಗೆ ನೀಡುವ ಅತಿ ದೊಡ್ಡ ಕೊಡುಗೆ ಎಂದು ಬಂಟ್ವಾಳ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಅಧಿಕಾರಿ ಚರಣ್ ಕೆ.ಎಸ್ ಅಭಿಪ್ರಾಯಪಟ್ಟರು. ಅವರು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 15.02.2026 […]