Yuvavahini

ಮಂಗಳೂರು

ಮಂಗಳೂರು ಯುವವಾಹಿನಿ : ಸಾಧಕರಿಗೆ ಸನ್ಮಾನ

ಮಂಗಳೂರು ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಮೆ. ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿತು. ಈ ಶುಭ ಸಂದರ್ಭದಲ್ಲಿ ಮಂಗಳೂರು ಯುವವಾಹಿನಿ ಸದಸ್ಯರಾದ ಸಮಾಜ ಸೇವಕ ಸಂಘಟಕರು ದೇವೇಂದ್ರ ಕೋಟ್ಯಾನ್, ಉದ್ಯಮಿ ಸಂಘಟಕರು ಸಾಧಕ ಉಮಾನಾಥ, ನಿಸ್ವಾರ್ಥ ಸೇವಕ ಶ್ರೀಕಾಂತ್ ಇವರುಗಳ ಸಾಧನೆಯನ್ನು ಗುರುತಿಸಿ ಗೌರವಿಸಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅದ್ಯಕ್ಷ ಪ್ರಭಾಕರ್ ಎಸ್. ಪೂಜಾರಿ, […]

Read More

ಮಂಗಳೂರು ಯುವವಾಹಿನಿ : ಪದಗ್ರಹಣ 2017-18

ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]

Read More

ಯುವಜನ ಜಾಗೃತಿ ಪ್ರಗತಿ – ಕಾರ್ಯಾಗಾರ ವಿಕಸನದ ವೇದಿಕೆ : ಯಶವಂತ ಪೂಜಾರಿ

  ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಘಟಕ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವಜನ ಜಾಗೃತಿ ಪ್ರಗತಿ ಉಪನ್ಯಾಸ, ಸಂವಾದ, ಸಮನ್ವಯ ಕಾರ್ಯಾಗಾರವು ದಿನಾಂಕ 23.12.2017 ರಂದು ಗೋಕರ್ಣನಾಥೇಶ್ವರ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಾಗಾರವು ಅವಶ್ಯಕವಾಗಿದ್ದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಾರ್ಯಾಗಾರವನ್ನು ಉಧ್ಘಾಟಿಸಿದ ಗೋಕರ್ಣನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಣುಕಾ ಕೆ ತಿಳಿಸಿದರು . ಉದ್ಯಮಿ ಶ್ರೀ ದತ್ತೇಶ್ ಪೂಜಾರಿ , ಪ್ರಿಯಾ ವುಡ್ […]

Read More

ಯು.ಪಿಎಸ್.ಸಿ, ಕೆ.ಪಿ.ಎಸ್.ಸಿ. ಮತ್ತು ಐ.ಬಿ.ಪಿ.ಎಸ್ – ಉಚಿತ ಪ್ರೇರಣಾ ಶಿಬಿರ-2016-17

ದಿನಾಂಕ 22-1-2017 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ) ಮಂಗಳೂರು, ದಿ ಕ್ರಿಶ್ಚಿಯನ್ ಎಜ್ಯುಕೇಶನ್ ಸೊಸೈಟಿ (ರಿ) ಮಂಗಳೂರು, ರೋಟರಿ ಕ್ಲಬ್ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು I.A.S. ಮಂಗಳೂರು ಸಂಸ್ಥೆಗಳ ಸಹಯೋಗದೊಂದಿಗೆ UPSC/KAS/IBPS ಉಚಿತ ಪ್ರೇರಣಾ ಶಿಬಿರವು ಜರಗಿತು. ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಎಸ್‌ಪಿ ಭೂಷಣ್ ಗುಲಾಬ್ ರಾವ್ ಬೋರಸೆ IPS ಉದ್ಘಾಟಿಸಿ, ಮಾತನಾಡುತ್ತಾ ಸೇವಾ ಮನೋಭಾವ ಇರುವವರು ಕಠಿಣ ಅಭ್ಯಾಸ, ತರಬೇತು ಪಡೆದು ಜನ ಸೇವೆ ಮಾಡುವ ಮನೋಭಾವವಿದ್ದರೆ ಮಾತ್ರ ಐ.ಎ.ಎಸ್, ಕೆ.ಎ.ಎಸ್‌ನಂತಹ […]

Read More

ಮಂಗಳೂರು ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ನಾಯಕತ್ವ ತರಬೇತಿ ಶಿಬಿರ

ಮಂಗಳೂರು ಘಟಕದ ವತಿಯಿಂದ ದಿನಾಂಕ 27-08-2016 ರಂದು ಗೋಕರ್ಣನಾಥ ಕಾಲೇಜ್‌ನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಗೆ ನಾಯಕತ್ವ ತರಬೇತಿ ಶಿಬಿರ ನಡೆಯಿತು. 27 ಈ ತರಬೇತಿ ಶಿಬಿರದಲ್ಲಿ ಸುಮಾರು 10 ಕಾಲೇಜುಗಳಿಂದ 48 ವಿದ್ಯಾರ್ಥಿಗಳು ಭಾಗವಹಿಸಿರುವರು. ಶಿಬಿರದ ಉದ್ಘಾಟನೆಯನ್ನು ಬಿ.ಜಿ.ಎಸ್. ಕಾಲೇಜಿನ ಪ್ರಾಧ್ಯಾಪಕ ಕೇಶವ ಕಟೀಲು ನೆರವೇರಿಸಿದರು. ಅಡ್ಯಾರು ಸಹ್ಯಾದ್ರಿ ಎಂ.ಬಿ.ಎ. ಕಾಲೇಜಿನ ಪ್ರಾಧ್ಯಾಪಕ ಪದ್ಮನಾಭರವರು ತರಬೇತಿಯನ್ನು ನಡೆಸಿಕೊಟ್ಟರು. ವಕೀಲರಾದ ನವನೀತ್ ಡಿ. ಹಿಂಗಾಣಿಯವರು ಬಿಲ್ಲವ ಸಂಘಟನೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಂತರ ನರೇಶ್ ಸಸಿಹಿತ್ಲು ಯುವವಾಹಿನಿ […]

Read More

ಸುಖದ ಪ್ರಸವ – ನಮ್ಮ ಪ್ರವಾಸ

ಪ್ರವಾಸಾನುಭವ ’ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ತತ್ವವನ್ನಿರಿಸಿಕೊಂಡು ಹಲವು ಚಿಕ್ಕ-ದೊಡ್ಡ ಪ್ರವಾಸಗಳನ್ನು ಏರ್ಪಡಿಸುತ್ತ ಬಂದಿರುವ ಯುವವಾಹಿನಿ ಮಂಗಳೂರು ಘಟಕವು ಈ ಬಾರಿ ದಕ್ಷಿಣ ಭಾರತ ಪ್ರವಾಸವನ್ನು ಏರ್ಪಡಿಸಿತ್ತು. 2014 ರಲ್ಲಿ ಉತ್ತರ ಭಾರತ ಮತ್ತು ನೇಪಾಳದ 10 ದಿನಗಳ ಪ್ರವಾಸದಲ್ಲಿ ಭಾಗಿಯಾಗಿದ್ದ ನಾನು 2015 ರ ಉತ್ತರ ಭಾರತ ಪ್ರವಾಸ (ವಾರಣಾಸಿ, ಹೃಷಿಕೇಶ, ಹರಿದ್ವಾರ, ವೈಷ್ಣೋದೇವಿ, ದೆಹಲಿ, ಅಮೃತಸರ್, ವಾಘಾ ಬೋರ್ಡರ್ ಇತ್ಯಾದಿ ಸ್ಥಳಗಳಿಗೆ)ಕ್ಕೆ ಹೋಗಲಾಗಲಿಲ್ಲ. ಈ ಬಾರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ಕೇರಳದ ಆಯ್ದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!