Yuvavahini

ಮಂಗಳೂರು

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ದಿನಾಂಕ: 05-01-2026 ರಂದು ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಲಹರಿ ತಂಡ ಬಿಜೈ ಮಂಗಳೂರು ಇವರ ಸಹಯೋಗದಿಂದ ನೆರವೇರಿತು. ಯುವವಾಹಿನಿ (ರಿ.) ಮಂಗಳೂರು ಘಟಕದ ಒಂದನೇ ಉಪಾಧ್ಯಕ್ಷರು ಹರೀಶ್ ಕೆ. ಸುವರ್ಣ ಮತ್ತು ಸದಸ್ಯರು ಉಪಸ್ಥಿತಿ ಇದ್ದರು.

Read More

ಶಿವಗಿರಿ ತೀರ್ಥಾಟನೆ

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಅನುಯಾಯಿಗಳ ತಂಡವು ದಿನಾಂಕ: 29- 12-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಕೇರಳದ ಶಿವಗಿರಿಯಲ್ಲಿ ಡಿಸಂಬರ್ 30, 31 ರಂದು ನಡೆಯಲಿರುವ ತೀರ್ಥಾಟನೆಯಲ್ಲಿ ಭಾಗವಹಿಸಲು ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.)ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ, ಹರೀಶ್ ವಿ. ಪಚ್ಚನಾಡಿ ಮತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಸಂಗೀತ ಸ್ಪರ್ಧೆ-ಯುವವಾಹಿನಿ(ರಿ.)ಮಂಗಳೂರು ಘಟಕ

25-11-2025 ಸಂಗೀತ ಎಂಬುದು ಮನಸ್ಸುಗಳನ್ನು ಜೋಡಿಸುವ ಶಕ್ತಿ, ಜನರನ್ನು ಒಗ್ಗೂಡಿಸುವ ಶಕ್ತಿ ಹಾಗೂ ನಮ್ಮ ಮನಸ್ಸಿನ ಭಾವನೆಗಳನ್ನು ಸುಂದರವಾಗಿ ವ್ಯಕ್ತಪಡಿಸುವ ಒಂದು ಕಲೆಯಾಗಿದೆ ಎಂದು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾದ ದೀಕ್ಷಿತ್ ಅತ್ತಾವರ ಹೇಳಿದರು. ಅವರು ಘಟಕದ ಆಶ್ರಯದಲ್ಲಿ ನಡೆದ ಸಂಗೀತ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆಯೊoದಿರುತ್ತದೆ ಅಂತಹ ಪ್ರತಿಭೆಗಳನ್ನು ಮುನ್ನೆಲೆಗೆ ತರಲು ಮಂಗಳೂರು ಘಟಕವೂ […]

Read More

ಶಿವಗಿರಿ ಯಾತ್ರೆ-ಯುವವಾಹಿನಿ (ರಿ.) ಮಂಗಳೂರು ಘಟಕ

ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಭೂಮಿ ಕೇರಳದ ಶಿವಗಿರಿಗೆ ಯಾತ್ರೆಯನ್ನು ಅ. 11ರಿಂದ ಅ. 14ರವರೆಗೆ ಹಮ್ಮಿಕೊಳ್ಳಲಾಗಿತ್ತು. ಅ. 11ರಂದು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ 49 ಭಕ್ತರನ್ನು ಒಳಗೊಂಡ ಯಾತ್ರಾರ್ಥಿಗಳ ತಂಡ ಹೊರಟು, ಮರುದಿನ ಬೆಳಗ್ಗೆ ಶಿವಗಿರಿ ತಲುಪಿ ಶಾರದಾ ಮಠ, ವೈದಿಕ ಮಠ ಮತ್ತು ಗುರು ಸಮಾಧಿಯನ್ನು ವೀಕ್ಷಿಸಿತು. ಬೆಳಗಿನ ಉಪಹಾರದ ನಂತರ ಚಂಬಲಂತಿಯಲ್ಲಿ ಗುರುಗಳ ಜನ್ಮಗ್ರಹ ದರ್ಶನ ಪಡೆದ ಯಾತ್ರಾರ್ಥಿಗಳು, ಬಳಿಕ ಗುರುಗಳು ಸ್ಥಾಪಿಸಿದ ಮೂರನೇ ದೇವಸ್ಥಾನವಾದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ […]

Read More

ಸೈಬರ್ ವಂಚನೆಯ ಕುರಿತು ಮಾಹಿತಿ-ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 04-11-2025: ಘಟಕದಲ್ಲಿ ಸೈಬರ್ ವಂಚನೆಯ ಕುರಿತು ಮಾಹಿತಿ ಕಾರ್ಯಾಗಾರ ನೆರವೇರಿತು. ಉರ್ವ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯಾದ ವೇಣುಗೋಪಾಲ್ ರವರು ಸೈಬರ್ ವಂಚನೆಯ ಕುರಿತು ಮಾತನಾಡಿ ಇಂದಿನ ದಿನಗಳಲ್ಲಿ ಹಿಂದೆ ಇದ್ದ ಅಪರಾಧ ಪ್ರಕರಣಗಳ ಚಿತ್ರಣವೆ ಬದಲಾಗಿದ್ದು ಇಂದು ಪೊಲೀಸ್ ಠಾಣೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸೈಬರ್ ವಂಚನೆ ಹಾಗೂ ಡ್ರಗ್ಸ್ ಸೇವನೆಗೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಾಗಿದೆ. ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಾಗಿ ವಿದ್ಯಾವಂತರೇ ಸಾಮಾಜಿಕ ಜಾಲತಾಣ, ಅಂತರ್ಜಾಲದ ಮೂಲಕ ವಂಚನೆಗೊಳಗಾಗುತ್ತಿದ್ದಾರೆ. ಆದ್ದರಿಂದ ಸಾಮಾಜಿಕ ಜಾಲತಾಣ ಹಾಗೂ […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಜೆಯಿಂದ ತಡ ರಾತ್ರಿಯವರೆಗೆ ನಿರಂತರವಾಗಿ ಸೇವಾ ಕೌಂಟರ್ನಲ್ಲಿ ಘಟಕದ ಸದಸ್ಯರು ಸೇವೆ-ಯುವವಾಹಿನಿ(ರಿ.) ಮಂಗಳೂರು ಘಟಕ

ಮಂಗಳೂರು ದಸರಾ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಜೆಯಿಂದ ತಡ ರಾತ್ರಿಯವರೆಗೆ ನಿರಂತರವಾಗಿ ಸೇವಾ ಕೌಂಟರ್ನಲ್ಲಿ ಘಟಕದ ಸದಸ್ಯರು ಸೇವೆಯನ್ನು ಸಲ್ಲಿಸಿದರು ಈ ಪುಣ್ಯ ಕಾರ್ಯದಲ್ಲಿ ತೊಡಗಿಸಿಕೊಂಡ ಸಲುವಾಗಿ ಶ್ರೀ ಶಾರದ ಮಾತೆಯ ದಿವ್ಯಾ ಸಾನಿಧ್ಯದಲ್ಲಿ ದೇವರ ಪ್ರಸಾದೊಂದಿಗೆ ಅನುಗ್ರಹ ಪತ್ರವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಘಟಕಕ್ಕೆ ಸಮರ್ಪಿಸಿದರು.

Read More

11ನೇ ವರ್ಷದ ಉಚಿತ ಶರಬತ್ ಸೇವೆ -ಯುವವಾಹಿನಿ(ರಿ.) ಮಂಗಳೂರು ಘಟಕ

ದಿನಾಂಕ 02- 10- 2025 : ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ದಸರಾ ಮಹೋತ್ಸವದ ಕೊನೆಯ ದಿನ ಶ್ರೀ ಶಾರದಾ ಮಾತೆಯ ಶೋಭಾ ಯಾತ್ರೆಯಂದು ನಾರಾಯಣ ಗುರು ವೃತ್ತದ ಬಳಿ ಸಾರ್ವಜನಿಕರಿಗೆ ತಂಪಾದ ಶರಬತ್ ನೀಡುವ ಸೇವಾ ಕಾರ್ಯ ಘಟಕದ ವತಿಯಿಂದ ನೆರವೇರಿತು. ಶರಬತ್ ಸೇವೆಯ ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್. ಎಲ್ ಶೇಟ್ ಡೈಮಂಡ್ ಹೌಸ್ ನ ಮಾಲೀಕರಾದ ರವೀಂದ್ರ ಶೇಟ್ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಸಾರ್ವಜನಿಕರಿಗೆ […]

Read More

ಕಾರ್ಗಿಲ್ ವಿಜಯ ದಿವಸ -ಯುವವಾಹಿನಿ(ರಿ.)ಮಂಗಳೂರು ಘಟಕ

ದಿನಾಂಕ 29-07-2025: ಕಷ್ಟಕರವಾದ ಭಾರತದ ಗಡಿ ಪ್ರದೇಶದಲ್ಲಿ ಹಗಲು ರಾತ್ರಿ ಎನ್ನದೇ ಬಿಸಿಲು, ಮಳೆ, ಕೊರೆಯುವ ಚಳಿಯ ನಡುವೆಯೂ ಭಾರತೀಯರಿಗೆ ರಕ್ಷಣೆ ನೀಡುತ್ತಿರುವ ನಮ್ಮ ಸೈನಿಕರ ಸಾಮರ್ಥ್ಯ ನಿಜವಾಗಿಯೂ ಹೆಮ್ಮೆಯ ವಿಷಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು. ಅವರು ಘಟಕದಲ್ಲಿ ನಡೆದಂತಹ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರ್ ಆಗಬೇಕೆಂದು ಹೆಚ್ಚಿನ ಹೆತ್ತವರು ಬಯಸುತ್ತಾರೆ. ಆದರೆ ತನ್ನ ಮಗ ಸೈನ್ಯಕ್ಕೆ ಸೇರಿ ದೇಶ […]

Read More

ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಒಂದು ದಿನದ ಅನ್ನದಾನ ಸೇವೆ-ಯುವವಾಹಿನಿ( ರಿ.) ಮಂಗಳೂರು ಘಟಕ

ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೇಂದ್ರ ಸಮಿತಿ ನೀಡುವ ಒಂದು ದಿನದ ಅನ್ನದಾನ ಸೇವೆಗೆ ಘಟಕದ ವತಿಯಿಂದ ಧನಸಹಾಯವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರಿಗೆ ಹಸ್ತಾಂತರಿಸಲಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!