ಯುವವಾಹಿನಿ(ರಿ) ಕೇಂದ್ರ ಸಮಿತಿ * ಯುವವಾಹಿನಿ(ರಿ) ಉಡುಪಿ ಘಟಕ

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರಿಗೆ 2016 ರ ಸಾಲಿನ ವಿಶುಕುಮಾರ್ ಪ್ರಶಸ್ತಿ

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ.

2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, ಹಿರಿಯ ಸಾಹಿತಿಯಾದ ಎಂ. ಜಾನಕಿ ಬ್ರಹ್ಮಾವರರವರಿಗೆ ನೀಡಿದ ಹೆಮ್ಮೆ ಯುವವಾಹಿನಿಯದ್ದು.

ತಾ. 31-7-2017 ರಂದು ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಆರೂರು ಲಕ್ಷ್ಮೀನಾರಾಯಣ ರಾವ್ ಸಭಾ ಭವನ (ಪುರಭವನ) ಅಜ್ಜರಕಾಡು, ಉಡುಪಿ ಇಲ್ಲಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ ಬಹಳ ಅಚ್ಚುಕಟ್ಟಾಗಿ ನಡೆದಿರುತ್ತದೆ.

ಸಮಾರಂಭದ ಮೊದಲಿಗೆ ನಾಡಗೀತೆಯನ್ನು ಮೂಲ್ಕಿ ಘಟಕದ ಸದಸ್ಯರು ಸುಶ್ರಾವ್ಯವಾಗಿ ಹಾಡಿದರು.

ಬನ್ನಂಜೆ ಬಾಬು ಅಮೀನ್‌ರವರು ಪ್ರಶಸ್ತಿಯನ್ನು ಪ್ರದಾನಿಸಿ ಯುವವಾಹಿನಿ ಸಂಘಟನೆಯ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನೇರ ನಡೆನುಡಿಯ ವಿಶುಕುಮಾರ್‌ರವರ ಕಾರ್ಯದಕ್ಷತೆಯ ಬಗ್ಗೆ ಮಾತನಾಡಿದರು.

ಅತಿಥಿ ಅಭ್ಯಾಗತರನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್‌ರವರು ಸ್ವಾಗತಿಸಿದರು. ವಿಶುಕುಮಾರ್ ದತ್ತಿನಿಧಿಯ ಪ್ರಾಯೋಜಕರಾದ ಟಿ. ಶಂಕರ ಸುವರ್ಣರವರು ಪ್ರಸ್ತಾವನೆ ಗೈದರು.

ಆಯ್ಕೆ ಸಮಿತಿಯ ಸದಸ್ಯರಾದ ಶ್ರೀಮತಿ ಬಿ.ಎಂ. ರೋಹಿಣಿ ಯವರು ವಿಶುಕುಮಾರ್ ಪ್ರಶಸ್ತಿಯ ಆಯ್ಕೆಯ ಬಗ್ಗೆ ತಿಳಿಸಿದರು.

ಪ್ರಶಸ್ತಿ ಪುರಸ್ಕೃತರ ಪರಿಚಯವನ್ನು ಶ್ರೀ ಸಾಧು ಪೂಜಾರಿಯವರು ಸಭೆಗೆ ಓದಿ ತಿಳಿಸಿದರು.

ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರು ವಿಶುಕುಮಾರ್‌ರವರ ಹೆಸರಿನಲ್ಲಿ ನೀಡಿದ ಈ ಪ್ರಶಸ್ತಿ ತುಂಬಾ ಅಮೂಲ್ಯವಾದುದು. ಈ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ತನ್ನ ಜವಾಬ್ದಾರಿ ಹೆಚ್ಚಿಸಿದಿರಿ ಎಂದರು. ಹಾಗೂ ಯುವವಾಹಿನಿಯ ಸರ್ವಸದಸ್ಯರನ್ನು ಅಭಿನಂದಿಸಿದರು.

ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಗೆ ಕಳೆದ ಹಲವಾರು ವರ್ಷಗಳಿಂದ ದೇಣಿಗೆ ನೀಡುತ್ತಾ ಬಂದಿರುವ ಪ್ರಸಕ್ತ ಸಾಲಿಗೆ ಪ್ರಾಯೋಜಕರಾದ ಟಿ. ಶಂಕರ ಸುವರ್ಣರವರನ್ನು ಸಮಿತಿಯ ಪರವಾಗಿ ಮುಖ್ಯ ಅತಿಥಿಯಾದ ಶ್ರೀ ಸಂಪತ್ ಬಿ. ಸುವರ್ಣರವರು ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಫಲಪುಷ್ಪ ನೀಡಿ ಅಭಿನಂದಿಸಿದರು.

ಶ್ರೀ ಸಂಪತ್ ಬಿ. ಸುವರ್ಣರವರು ಸಮಯೋಚಿತವಾಗಿ ಮಾತನಾಡುತ್ತಾ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಪ್ರಭಾಕರ ನೀರುಮಾರ್ಗ ಯುವವಾಹಿನಿ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಕು| ರಮ್ಯ ಸುಜೀರ್‌ರವರ ಪರಿಚಯವನ್ನು ಕಾರ್ಯದರ್ಶಿಯಾದ ಶ್ರೀ ಸಂಜೀವ ಸುವರ್ಣರವರು ವಾಚಿಸಿದರು. ಮುಖ್ಯ ಅತಿಥಿಯಾದ ಡಾ. ಮಾಧವಿ ಭಂಡಾರಿಯವರು ’ಯುವ ಸಾಹಿತ್ಯ ಪ್ರಶಸ್ತಿ’ಯನ್ನು ವಿತರಿಸಿದರು. ವಿಶುಕುಮಾರ್‌ರವರ ಕೆಲವೊಂದು ಕೃತಿಗಳ ಬಗ್ಗೆ ಮಾತನಾಡಿ ಅಂತರ್ಜಾಲದಲ್ಲಿ ವಿಶುಕುಮಾರ್‌ರವರ ಬಗ್ಗೆ ಮಾಹಿತಿ ನೀಡುವಂತೆ ವಿನಂತಿಸಿದರು. ಸಭಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರು ಕಾರ್ಯಕ್ರಮದ ಅಚ್ಚುಕಟ್ಟುತನಕ್ಕೆ ಮಾರು ಹೋಗಿ ಯುವವಾಹಿನಿಯನ್ನು ತುಂಬು ಹೃದಯದಿಂದ ಅಭಿನಂದಿಸಿದರು. ಸಾಹಿತ್ಯ ಕಾರ್ಯಕ್ರಮ ಇನ್ನು ಮುಂದಕ್ಕೆ ಉಡುಪಿಯಲ್ಲಿ ಮಾಡುವುದಾದರೆ ಯುವವಾಹಿನಿ ಸಂಘಟನೆಯ ಮಾರ್ಗದರ್ಶನ ಪಡೆಯುವಂತಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ನಾವು ಯಾವ ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿದರೂ ಕನ್ನಡದ ಬಗ್ಗೆ ಅಭಿಮಾನ ಇರಬೇಕೆಂದು ವಿನಂತಿಸಿದರು. ಅತಿಥಿಗಳಿಗೆ ಸ್ಮರಣಿಕೆಯನ್ನು ಅಧ್ಯಕ್ಷರ ನೀಡಿದರು.

ಕೊನೆಯದಾಗಿ ಧನ್ಯವಾದವನ್ನು ಸಂಚಾಲಕರಾದ ಶ್ರೀ ಕಿಶೋರ್ ಕೆ. ಬಿಜೈಯವರು ಸಮರ್ಪಿಸಿದರು. ಕಾರ್ಯಕ್ರಮವನ್ನು ನರೇಂದ್ರ ಕೆರೆಕಾಡು ಹಾಗೂ ಶ್ರೀಮತಿ ಅಮಿತಾಂಜಲಿ ಕಿರಣ್ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!