ಬಂಟ್ವಾಳ : ಎಪ್ರಿಲ್ 19 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಸಮಾರಂಭದಲ್ಲಿ ಯುವವಾಹಿನಿಯ ಮುಖವಾಣಿ ‘ಯುವಸಿಂಚನ’ದ ಎಪ್ರಿಲ್ ಸಂಚಿಕೆಯನ್ನು ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು ಬಿಡುಗಡೆಗೊಳಿಸಿದರು,

ದೇಶದ ಸಾಂಸ್ಕೃತಿಕ ವೈಭವದ ಮಹತ್ವವನ್ನು ಒತ್ತಿ ಹೇಳಿ, ಯುವಜನತೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಯುವವಾಹಿನಿ ಸಂಸ್ಥೆಯು ಈ ನಿಟ್ಟಿನಲ್ಲಿ ಕೈಗೊಂಡಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತುವಲ್ಲಿ ಮಹತ್ವದ ಕೊಡುಗೆಯನ್ನು ನೀಡುತ್ತಿದೆ ಎಂದು ಅವರು ಪ್ರಶಂಸಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ವಹಿಸಿದ್ದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಅಗ್ರಜ ಬಿಲ್ಡರ್ಸ ಮಾಲಕರಾದ ಸಂದೇಶ್ ಶೆಟ್ಟಿ, ಸೇವ್ ಲೈಫ್ ಚಾರಿಟಬಲ್ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಉದ್ಯಮಿಗಳಾದ ಪ್ರಿಯದರ್ಶಿನಿ ಸುನೀಲ್ ಬಜ್ಪೆ, ಮನೋಜ್ ಶರ್ಮ, ಗೋಪಾಲ್ ಮೂಲ್ಯ, ರಾಜಶೇಖರ್ ಕೋಟ್ಯಾನ್ ಪುತ್ತೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಹರೀಶ್ ವಿ ಪಚ್ಚನಾಡಿ, ಉಪಸಂಪಾದಕ ರಾಜೇಶ್ ಸುವರ್ಣ, ಸಂಪಾದಕ ಮಂಡಲಿಯ ಸದಸ್ಯರಾದ ಉಷಾ ಕೆ, ಲತೀಶ್ ಸಂಕೊಳಿಗೆ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಸಾಂಸ್ಕೃತಿಕ ನಿರ್ದೇಶಕ ಶೈಲೇಶ್ ಕುಚ್ಚಿಗುಡ್ಡೆ, ಹಾಗೂ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ದಿನೇಶ್ ಸುವರ್ಣ ರಾಯಿ, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಪ್ರಧಾನ ಸಂಚಾಲಕರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂಚಾಲಕರಾದ ಗೀತಾ ಜಗದೀಶ್, ಉದಯ ಮೇನಾಡು ಉಪಸ್ಥಿತರಿದ್ದರು.


