ಶಕ್ತಿನಗರ ಜೂನ್ 21 : ಯುವವಾಹಿನಿ (ರಿ.) ಶಕ್ತಿನಗರ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಶಕ್ತಿನಗರ ಕುಂಟಲ್ಪಾಡಿ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಅಂತರಾಷ್ಟ್ರೀಯ 12ನೇ ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕುಂಟಲ್ಪಾಡಿ ಇಲ್ಲಿ ಆಚರಿಸಲಾಯಿತು.

ಅಂತರಾಷ್ಟ್ರೀಯ ಯೋಗ ದಿನಾಚರಣೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಸಾರುವ ದಿನವಾಗಿದ್ದು, ಯೋಗದ ಮೂಲಕ ಆರೋಗ್ಯಕರ ಜೀವನ ಹಾಗೂ ಯೋಗಕ್ಷೇಮವನ್ನು ಕಾಪಾಡಿಕೊಳ್ಳುವ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕದ ಹಿರಿಯ ಶಿಕ್ಷಕರಾದ ರಾಮಕೃಷ್ಣ ಅವರು ಉಸಿರಾಟದ ಕ್ರಿಯೆಗಳ ನಿತ್ಯಾಭ್ಯಾಸವನ್ನು ನಡೆಸಿಕೊಟ್ಟರು. ತುಳುವರೇ ಕೂಟದ ಸದಸ್ಯರಾದ ಜಯರಾಮ್ ಹಾಗೂ ಯುವವಾಹಿನಿ ಶಕ್ತಿನಗರ ಘಟಕದ ಕೋಶಾಧಿಕಾರಿ ಯೋಗೇಂದ್ರ ಕೋಟ್ಯಾನ್ ಅವರು ಯೋಗಾಭ್ಯಾಸದ ವಿವಿಧ ವಿಧಾನಗಳನ್ನು ಪರಿಚಯಿಸಿ ಪ್ರಾಯೋಗಿಕ ತರಬೇತಿ ನೀಡಿದರು. ಜಿಲ್ಲಾ ಹಿರಿಯ ಶಿಕ್ಷಕಿ ಹಾಗೂ ಘಟಕದ ಮಾಜಿ ಅಧ್ಯಕ್ಷೆ ಭಾರತಿ ಜಿ. ಅಮೀನ್ ಅವರು ಅನ್ನಪೂರ್ಣೇಶ್ವರಿ ಮಂತ್ರವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ರಾಮಕೃಷ್ಣ ಅವರನ್ನು ಯುವವಾಹಿನಿ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದ ಸಂಚಾಲಕರಾಗಿ ಮಾಜಿ ಅಧ್ಯಕ್ಷೆ ಭಾರತಿ ಜಿ. ಅಮೀನ್ ಹಾಗೂ ಸಹ ಸಂಚಾಲಕರಾಗಿ ಕಾರ್ಯದರ್ಶಿ ಯೋಗೇಂದ್ರ ಕೋಟ್ಯಾನ್ ಕಾರ್ಯನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು. ಘಟಕದ ಅಧ್ಯಕ್ಷರಾದ ತೇಜಸ್ ವಿ. ಪೂಜಾರಿ ಧನ್ಯವಾದ ಅರ್ಪಿಸಿದರು.


