Yuvavahini

AUG 04, 2013 1.05 PM IST

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ-2013 : ಕಿರಣ್ ಕುಮಾರ್

ದೇವರು ಕೊಟ್ಟ ಪ್ರತಿಭೆಯನ್ನು ಆಧರಿಸಿ ಬರಮಾಡಿಕೊಳ್ಳದೇ ಅವಕಾಶ ಇಲ್ಲ ಎಂದು ಹಲುಬುವವರೇ ಅಧಿಕವಾಗಿರುವ ಇಂದಿನ ದಿನದಲ್ಲಿ ತನ್ನೊಳಗೆ ದೇವರಿತ್ತ ಸುಪ್ತ ಪ್ರತಿಭೆಯನ್ನು ಒರೆಗೆ ಹಚ್ಚಿಕೊಂಡು ಸೀಮಿತವಾದ ಅವಕಾಶಗಳನ್ನೆ ಬಳಸಿಕೊಂಡು ಬೆಳೆಯುವವರು ತೀರಾ ವಿರಳ ಎನ್ನಬಹುದು.

ಅಂತಹ ಪ್ರತಿಭೆಗಳ ಸಾಲಿನಲ್ಲಿ ಬರುವವರೇ ಕಿರಣ್ ಕುಮಾರ್ ಕೊಕುಡೆ. ಗ್ರಾಮೀಣ ಪ್ರದೇಶವಾದ ಕಿನ್ನಿಗೋಳಿ ಸಮೀಪದ ಕೊಕುಡೆ ನಿವಾಸಿಯಾಗಿರುವ ಕಿರಣ್‌ಕುಮಾರ್ 21 ರ ಹರೆಯದ ಯುವಕ. ಆದರೆ ಅವರು ಮೆರೆದ ಸಾಧನೆ ಮಾತ್ರ ೫೦ರ ಹಿರಿಯರೂ ನಾಚಬೇಕು ಎನ್ನುವಂತಹ ಸಾಧನೆ. ಸಾಹಿತ್ಯ ರಂಗದಲ್ಲಿ ಉತ್ತಮ ಭವಿಷ್ಯವನ್ನು ಹೊಂದುವ ಎಲ್ಲಾ ಲಕ್ಷಣಗಳಿರುವ ಕಿರಣ್‌ಕುಮಾರ್ ನಾಟಕ ರಚನೆಕಾರರಾಗಿಯೇ ಚಿರಪರಿಚಿತರು. ಈಗಾಗಲೇ ಅವರು ಬರೆದಿರುವ ’ಅಂಚಿನ ಎಂಚಿನ’ ಮತ್ತು ’ದಾದನಾ ಉಪ್ಪೊಡು’ ಎಂಬ ಎರಡು ತುಳು ನಾಟಕಗಳು ಹಲವಾರು ಕಡೆ ಪ್ರದರ್ಶನ ಕಂಡು ಜನಮೆಚ್ಚುಗೆ ಪಡೆದುಕೊಂಡಿವೆ. ಅದೇ ರೀತಿ ’ದಾದಂದೆ ಗೊತ್ತಾಪುಜಿ’ ಮತ್ತು ’ನಂಬುನೆಂಚ’ ಎರಡು ನಾಟಕಗಳು ಪ್ರದರ್ಶನಕ್ಕೆ ಸಿದ್ಧವಾಗಿವೆ. ಉತ್ತಮವಾದ ಸಾಮಾಜಿಕ ಸಂದೇಶ ನೀಡುವ ಕಥೆಗಳನ್ನು ನಾಟಕದ ಮೂಲಕ ಹೆಣೆಯುತ್ತಾ ಪರಿವರ್ತನೆಗಾಗಿ ಹಂಬಲಿಸುವ ಇವರ ಗುಣವನ್ನು ಮೆಚ್ಚಲೇ ಬೇಕಾಗಿದೆ. ಇದೇ ಕಾರಣದಿಂದ ಇವರನ್ನು ಹಲವಾರು ಸಂಸ್ಥೆಗಳು ಗೌರವಿಸಿವೆ. ಯುವ ಬರಹಗಾರ ಕಿರಣ್ ಕುಮಾರ್ ಇವರ ಗೆಲ್ಲ್ ಎನ್ನುವ ಕೃತಿ ಹಸ್ತಪ್ರತಿ ರೂಪದಲ್ಲಿದೆ. ಹಲವಾರು ನಾಟಕ, ರೂಪಕಗಳಿಗೆ ಗೀತೆ ರಚನೆಯನ್ನು ಮಾಡಿ ಮಿಂಚಿದ್ದಾರೆ. ವಿವಿಧ ಶಾಲಾ ಕಾಲೇಜುಗಳಿಗೆ ರೂಪಕ, ತುಳು ಜಾನಪದ ರೂಪಕ ರಚಿಸಿ ನಿರ್ದೇಶಿಸಿರುವಲ್ಲಿಯೂ ಇವರ ಪ್ರತಿಭೆ ಅಡಕವಾಗಿದೆ. ಹಲವಾರು ಪತ್ರಿಕೆಗಳಲ್ಲಿ ಇವರ ಬರಹ ಪ್ರಕಟಗೊಂಡಿದೆ. ಇಂತಹ ಯುವ ಪ್ರತಿಭೆಯನ್ನು ’ಪ್ರಭಾಕರ ನೀರುಮಾರ್ಗ ಯುವವಾಹಿನಿ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಲು ಯುವವಾಹಿನಿ ಸಂತೋಷಪಡುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!