Yuvavahini

AUG 08, 2014 10.41 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ,ಮಂಗಳೂರು

ಶ್ರೀ ಚೇತನ್ ಮುಂಡಾಜೆ ಇವರಿಗೆ ಯುವವಾಹಿನಿ ಯುವ ಸಾಹಿತ್ಯಪ್ರಶಸ್ತಿ 2014

ಶ್ರೀ ಚೇತನ್ ಮುಂಡಾಜೆ ಯುವವಾಹಿನಿ ಯುವ ಸಾಹಿತ್ಯಪ್ರಶಸ್ತಿ -2014 ಪುರಸ್ಕ್ರತರು

ಬಂಟ್ವಾಳ ತಾಲೂಕು ಕಳ್ಳಿಗೆÀ ಗ್ರಾಮದ ಮುಂಡಾಜೆ ನಿವಾಸಿಯಾಗಿರುವ ಚೇತನ್ ಮುಂಡಾಜೆ ಇವರು ವೃತ್ತಿಯಲ್ಲಿ ಶಿಕ್ಷಕರಾದರೂ ಪ್ರವೃತ್ತಿಯಲ್ಲಿ ಉದಯೋನ್ಮಖ ಸಾಹಿತಿಯೂ ಹೌದು, ಕಲಿಕೆ, ಅಧ್ಯಯನ, ಭಾಗವಹಿಸುವಿಕೆ ಇವು ಇವರ ಆಸಕ್ತಿಯ ಕ್ಷೇತ್ರವೂ ಹೌದು. 2009ರಲ್ಲಿ ‘ಪಿಂಗಾರ’ ಎಂಬ ಕವನ ಸಂಕಲನವನ್ನು ಪ್ರಕಟಿಸಿರುವ ಶ್ರೀಯುತರು 2008-09ರಲ್ಲಿ ‘ಮಂಗಳಗಂಗೆ’ ಎಂಬ ಸಂಪಾದಿತ ಕೃತಿಯನ್ನು ಅನಾವರಣಗೊಳಿಸಿದ್ದಾರೆ. ಆಧುನಿಕ ಕನ್ನಡ ಕಾವ್ಯದಲ್ಲಿ ಬೆಂದ್ರೆಯವರ ಅನನ್ಯತೆ, ಮಂಗಳೂರ ಕ್ರಾಂತಿ ಕೆಲವು ಟಿಪ್ಪಣಿಗಳು, ಬೂತಾರಾಧನೆಯಲ್ಲಿ ನುಡಿಗಟ್ಟು, ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಸೀರೆಯಂಗಡಿಯಲ್ಲಿ ಮಾದರಿಗೆ ಪ್ರತಿಮೆ ಕವನ ವಿಶ್ಲೇಷಣೆ, ಮುಂತಾದ ಸಂಶೋಧನಾ ಲೇಖನ ಪ್ರಕಟಿಸಿದ್ದಾರೆ. ತುಳುನಾಡಿನ ಶಾಸನಗಳು, ಇತಿಹಾಸದ ನಿರ್ವಚನ, ದೇಸಿ ಅಸ್ತಿತ್ವದ ಸ್ವರೂಪ, ಕೋಮುವಾದ ಮತ್ತು ಭಯೋತ್ಪಾದನೆ ಮುಂತಾದ ಪ್ರಬಂಧಗಳನ್ನೂ ಮಂಡನೆ ಮಾಡಿದ್ದಾರೆ.


ಕಥೆ, ಕವನ, ಭಾಷಣ ಮತ್ತು ಪ್ರಬಂಧಕ್ಕೆ ಸಂಬಂಧಿಸಿ ಇಪ್ಪತ್ತೈದಕ್ಕೂ ಅಧಿಕ ಬಹುಮಾನ ಪಡೆದಿರುವ ಚೇತನ್ ತನ್ನ ಶಾಲಾ ದಿನದಲ್ಲೇ ಸಾಹಿತ್ಯದತ್ತ ಒಲವು ತೋರಿದವರು. ಜಿಲ್ಲೆಯ ಮಾತ್ರವಲ್ಲದೆ ರಾಜ್ಯ ದ ಬೇರೆ ಬೇರೆ ಭಾಗದಲ್ಲಿ ನಡೆದಿರುವ ಕವಿಗೋಷ್ಠಿಯಲ್ಲಿ ಭಾಗವಹಿಸಿ ಹೆಸರು ಪಡೆದಿರುವ ಶ್ರೀಯುತರು ಪ್ರಸ್ತುತ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಶಿಕ್ಷಕ ಮತ್ತು ಸಾಹಿತ್ಯದ ನೆಲೆಯಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕೀರ್ಣ ಮತ್ತು ಸಮ್ಮೇಳನದಲ್ಲೂ ಭಾಗವಹಿಸಿದ ಕೀರ್ತಿ ಚೇತನ್ ಅವರದ್ದು. ನಾಟಕ ರಂಗದಲ್ಲೂ ಆಸಕ್ತಿಯನ್ನು ಹೊಂದಿರುವ ಚೇತನ್ ನಾಟಕ ಕಮ್ಮಟಗಳಲ್ಲೂ ಭಾಗವಹಿಸಿದ್ದಾರೆ. ಮಾತ್ರವಲ್ಲದೆ ಮಂಗಳೂರು ಆಕಾಶವಾಣಿಯಲ್ಲೂ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದ್ದಾರೆ. ಇವರ ಈ ಸಾಹಿತ್ಯ ಪ್ರತಿಭೆಯನ್ನು ಗುರುತಿಸಿ ಯುವವಾಹಿನಿಯು ‘ಪ್ರಭಾಕರ ನೀರುಮಾರ್ಗ ಯುವವಾಹಿನಿ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಲು ಸಂತೋಷ ಪಡುತ್ತಿದೆ.

  • ಅಧ್ಯಕ್ಷತೆ :
    ಡಾ| ಸತ್ಯನಾರಾಯಣ ಮಲ್ಲಿಪಟ್ಣ
    ಪ್ರಾಂಶುಪಾಲರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು
    ಪ್ರಶಸ್ತಿ ಪ್ರದಾನ :
    ಶ್ರೀ ಮಲಾರ್ ಜಯರಾಮ್ ರೈ
    ಪತ್ರಕರ್ತರು ಹಾಗೂ ಸಾಹಿತಿ
    ಮುಖ್ಯ ಅತಿಥಿಗಳು :
    ಶ್ರೀಮತಿ ಜಾನಕಿ ಬ್ರಹ್ಮಾವರ
    ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ
    ಶ್ರೀ ಬಿ.ಎ. ಮೊಹಮ್ಮದ್ ಹನೀಫ್
    ಮಾಜಿ ಅಧ್ಯಕ್ಷರು, ಬ್ಯಾರಿ ಸಾಹಿತ್ಯ ಅಕಾಡೆಮಿ
    `ವಿಶುಕುಮಾರ್ ಪ್ರಶಸ್ತಿ’ ಪುರಸ್ಕøತರು :
    ಶ್ರೀ ಮುದ್ದು ಮೂಡುಬೆಳ್ಳೆ
    ಬಹುಭಾಷಾ ಸಾಹಿತಿ, ಸಂಶೋಧಕರು
    ಯುವವಾಹಿನಿ ಯುವ ಸಾಹಿತ್ಯಪ್ರಶಸ್ತಿ – ಪುರಸ್ಕ್ರತರು
    ಶ್ರೀ ಚೇತನ್ ಮುಂಡಾಜೆ
    ಸಾಹಿತ್ಯ ಪ್ರತಿಭೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!