Yuvavahini

AUG 08, 2014 10.41 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ,ಮಂಗಳೂರು

ಶ್ರೀ ಚೇತನ್ ಮುಂಡಾಜೆ ಇವರಿಗೆ ಯುವವಾಹಿನಿ ಯುವ ಸಾಹಿತ್ಯಪ್ರಶಸ್ತಿ 2014

ಶ್ರೀ ಚೇತನ್ ಮುಂಡಾಜೆ ಯುವವಾಹಿನಿ ಯುವ ಸಾಹಿತ್ಯಪ್ರಶಸ್ತಿ -2014 ಪುರಸ್ಕ್ರತರು

ಬಂಟ್ವಾಳ ತಾಲೂಕು ಕಳ್ಳಿಗೆÀ ಗ್ರಾಮದ ಮುಂಡಾಜೆ ನಿವಾಸಿಯಾಗಿರುವ ಚೇತನ್ ಮುಂಡಾಜೆ ಇವರು ವೃತ್ತಿಯಲ್ಲಿ ಶಿಕ್ಷಕರಾದರೂ ಪ್ರವೃತ್ತಿಯಲ್ಲಿ ಉದಯೋನ್ಮಖ ಸಾಹಿತಿಯೂ ಹೌದು, ಕಲಿಕೆ, ಅಧ್ಯಯನ, ಭಾಗವಹಿಸುವಿಕೆ ಇವು ಇವರ ಆಸಕ್ತಿಯ ಕ್ಷೇತ್ರವೂ ಹೌದು. 2009ರಲ್ಲಿ ‘ಪಿಂಗಾರ’ ಎಂಬ ಕವನ ಸಂಕಲನವನ್ನು ಪ್ರಕಟಿಸಿರುವ ಶ್ರೀಯುತರು 2008-09ರಲ್ಲಿ ‘ಮಂಗಳಗಂಗೆ’ ಎಂಬ ಸಂಪಾದಿತ ಕೃತಿಯನ್ನು ಅನಾವರಣಗೊಳಿಸಿದ್ದಾರೆ. ಆಧುನಿಕ ಕನ್ನಡ ಕಾವ್ಯದಲ್ಲಿ ಬೆಂದ್ರೆಯವರ ಅನನ್ಯತೆ, ಮಂಗಳೂರ ಕ್ರಾಂತಿ ಕೆಲವು ಟಿಪ್ಪಣಿಗಳು, ಬೂತಾರಾಧನೆಯಲ್ಲಿ ನುಡಿಗಟ್ಟು, ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಸೀರೆಯಂಗಡಿಯಲ್ಲಿ ಮಾದರಿಗೆ ಪ್ರತಿಮೆ ಕವನ ವಿಶ್ಲೇಷಣೆ, ಮುಂತಾದ ಸಂಶೋಧನಾ ಲೇಖನ ಪ್ರಕಟಿಸಿದ್ದಾರೆ. ತುಳುನಾಡಿನ ಶಾಸನಗಳು, ಇತಿಹಾಸದ ನಿರ್ವಚನ, ದೇಸಿ ಅಸ್ತಿತ್ವದ ಸ್ವರೂಪ, ಕೋಮುವಾದ ಮತ್ತು ಭಯೋತ್ಪಾದನೆ ಮುಂತಾದ ಪ್ರಬಂಧಗಳನ್ನೂ ಮಂಡನೆ ಮಾಡಿದ್ದಾರೆ.


ಕಥೆ, ಕವನ, ಭಾಷಣ ಮತ್ತು ಪ್ರಬಂಧಕ್ಕೆ ಸಂಬಂಧಿಸಿ ಇಪ್ಪತ್ತೈದಕ್ಕೂ ಅಧಿಕ ಬಹುಮಾನ ಪಡೆದಿರುವ ಚೇತನ್ ತನ್ನ ಶಾಲಾ ದಿನದಲ್ಲೇ ಸಾಹಿತ್ಯದತ್ತ ಒಲವು ತೋರಿದವರು. ಜಿಲ್ಲೆಯ ಮಾತ್ರವಲ್ಲದೆ ರಾಜ್ಯ ದ ಬೇರೆ ಬೇರೆ ಭಾಗದಲ್ಲಿ ನಡೆದಿರುವ ಕವಿಗೋಷ್ಠಿಯಲ್ಲಿ ಭಾಗವಹಿಸಿ ಹೆಸರು ಪಡೆದಿರುವ ಶ್ರೀಯುತರು ಪ್ರಸ್ತುತ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಶಿಕ್ಷಕ ಮತ್ತು ಸಾಹಿತ್ಯದ ನೆಲೆಯಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕೀರ್ಣ ಮತ್ತು ಸಮ್ಮೇಳನದಲ್ಲೂ ಭಾಗವಹಿಸಿದ ಕೀರ್ತಿ ಚೇತನ್ ಅವರದ್ದು. ನಾಟಕ ರಂಗದಲ್ಲೂ ಆಸಕ್ತಿಯನ್ನು ಹೊಂದಿರುವ ಚೇತನ್ ನಾಟಕ ಕಮ್ಮಟಗಳಲ್ಲೂ ಭಾಗವಹಿಸಿದ್ದಾರೆ. ಮಾತ್ರವಲ್ಲದೆ ಮಂಗಳೂರು ಆಕಾಶವಾಣಿಯಲ್ಲೂ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದ್ದಾರೆ. ಇವರ ಈ ಸಾಹಿತ್ಯ ಪ್ರತಿಭೆಯನ್ನು ಗುರುತಿಸಿ ಯುವವಾಹಿನಿಯು ‘ಪ್ರಭಾಕರ ನೀರುಮಾರ್ಗ ಯುವವಾಹಿನಿ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಲು ಸಂತೋಷ ಪಡುತ್ತಿದೆ.

  • ಅಧ್ಯಕ್ಷತೆ :
    ಡಾ| ಸತ್ಯನಾರಾಯಣ ಮಲ್ಲಿಪಟ್ಣ
    ಪ್ರಾಂಶುಪಾಲರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು
    ಪ್ರಶಸ್ತಿ ಪ್ರದಾನ :
    ಶ್ರೀ ಮಲಾರ್ ಜಯರಾಮ್ ರೈ
    ಪತ್ರಕರ್ತರು ಹಾಗೂ ಸಾಹಿತಿ
    ಮುಖ್ಯ ಅತಿಥಿಗಳು :
    ಶ್ರೀಮತಿ ಜಾನಕಿ ಬ್ರಹ್ಮಾವರ
    ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ
    ಶ್ರೀ ಬಿ.ಎ. ಮೊಹಮ್ಮದ್ ಹನೀಫ್
    ಮಾಜಿ ಅಧ್ಯಕ್ಷರು, ಬ್ಯಾರಿ ಸಾಹಿತ್ಯ ಅಕಾಡೆಮಿ
    `ವಿಶುಕುಮಾರ್ ಪ್ರಶಸ್ತಿ’ ಪುರಸ್ಕøತರು :
    ಶ್ರೀ ಮುದ್ದು ಮೂಡುಬೆಳ್ಳೆ
    ಬಹುಭಾಷಾ ಸಾಹಿತಿ, ಸಂಶೋಧಕರು
    ಯುವವಾಹಿನಿ ಯುವ ಸಾಹಿತ್ಯಪ್ರಶಸ್ತಿ – ಪುರಸ್ಕ್ರತರು
    ಶ್ರೀ ಚೇತನ್ ಮುಂಡಾಜೆ
    ಸಾಹಿತ್ಯ ಪ್ರತಿಭೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!