Yuvavahini

MAY 23, 2017 1.49 PM IST

ಬರಹ: ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ

ತುಳುನಾಡ ನಂಬಿಕೆಯಲ್ಲಿ ಗೆಜ್ಜೆ ಕತ್ತಿಯ ಮಹತ್ವ:-ಶೈಲು ಬಿರ್ವ

             ಗೆಜ್ಜೆಕತ್ತಿ

ನವೀನತೆಯ ಯುಗದಲ್ಲಿ ನಾವು ಇಂದು ಗೆಜ್ಜೆಕತ್ತಿಯನ್ನು ಕೇವಲ ಮದುವೆಯ ಸಮಯದಲ್ಲಿ ಮ‌ಾತ್ರ ಮದುಮಗಳ ಕೈಯಲ್ಲಿ ಇರುವುದನ್ನು ಗಮನಿಸಿರಬಹುದು ಆದರೆ ಈ ಗೆಜ್ಜೆಕತ್ತಿಯ ಮಹತ್ವ ಇದರಿಂದಲು ಆಚೆಗಿದೆ. ಅದೊಂದು ಅಧಿಕಾರದ ಸಂಕೇತ ಅದೇ ರೀತಿ ರಕ್ಷಣೆಯ ಸಂಕೇತವು ಹೌದು.

ಹಿಂದಿನ ಕಾಲದಲ್ಲಿ ಹೆಣ್ಣು ಪ್ರಾಯಕ್ಕೆ ಬಂದಾಗ ತಾಯಿಯಾದವಳು ಮಗಳ ಕೈಯಲ್ಲಿ ಯಾವತ್ತು ಇರುವಂತೆ ಸಣ್ಣ ಕತ್ತಿಯನ್ನು ನೀಡುತ್ತಿದ್ದಳು. ಸಣ್ಣ ಹಿಡಿಯಿರುವ ಇದು ತುದಿಯಲ್ಲಿ ಅರ್ಧ ಚಂದ್ರಾಕೃತಿಯ ರಚನೆಯಿದ್ದು ಹಿಡಿಯ ತುದಿಯಲ್ಲಿ ಅಲಂಕಾರಕ್ಕಾಗಿ ಸಣ್ಣ ಗೆಜ್ಜೆಗಳು ಇರುತ್ತದೆ. ಇದೊಂದು ಆತ್ಮ ರಕ್ಷಣೆ ಮತ್ತು ಪ್ರಾಣ ರಕ್ಷಣೆಯ ಸಂಕೇತವಾಗಿ ಆಕೆ ಯಾವತ್ತು ಅದನ್ನು ಸೊಂಟದಲ್ಲೆ ಇಟ್ಟುಕೊಳ್ಳುತ್ತಿದ್ದಳು. ಇಂದು ನಾವು ಹೆಣ್ಣುಮಕ್ಕಳ ಸ್ವ ರಕ್ಷಣೆಯ ಬಗ್ಗೆ ಮಾತನಾಡುತ್ತಿದ್ದರೆ ಹಿರಿಯರು ಅದನ್ನು ಗೆಜ್ಜೆಕತ್ತಿ ನೀಡುವ ಮೂಲಕ  ಮಾಡಿ ತೋರಿಸಿದ್ದರು. ಅಂದರೆ ಅವರ ಅಲೋಚನೆಗಳು ಮಾತಿನ ಮೂಲಕವಲ್ಲ ಬದಲಾಗಿ ಅನುಷ್ಠಾನಕ್ಕೆ ಬರುತ್ತಿದ್ದವು. ಅದೇ ರೀತಿ ಮಗಳು ಪ್ರಾಯಕ್ಕೆ ಬಂದು ಮದುವೆಯಾದಾಗ ತಾಯಿಯು ತನ್ನ ಮನೆಯ ಅಧಿಕಾರ ಹಸ್ತಾಂತರವು ಕೂಡ ಗೆಜ್ಜೆಕತ್ತಿಯನ್ನು ನೀಡುವುದರ ಮೂಲಕ ಆಗುತ್ತಿತ್ತು.

ತುಳುನಾಡಿನಲ್ಲಿ ಮಾತೃಪ್ರಧಾನ ಕುಟುಂಬವಿದ್ದು ಇಲ್ಲಿ ತಾಯಿಯಿಂದ ಮಗಳಿಗೆ ಆಸ್ತಿ ಪರಭಾರೆಯಾಗುತ್ತಿದ್ದು ಇಲ್ಲಿ ಮನೆ ಅಳಿಯ ಎಂಬ ಸಂಪ್ರಧಾಯವೆ ಹೆಚ್ಚಾಗಿತ್ತು. ಆದುದರಿಂದ ಎಲ್ಲಾ ಆಸ್ತಿಗಳ ಅಧಿಕಾರ ಹೆಣ್ಣಿಗೆ ಬರುತ್ತಿತ್ತು ಆದುದರಿಂದ ತಾಯಿಯು ಮಗಳ ಮದುವೆಯ ನಂತರ ತನ್ನ ಅಧಿಕಾರವನ್ನು ಆಕೆಗೆ ಬಿಟ್ಟುಕೊಡುತ್ತಿದ್ದಳು. ಇಲ್ಲಿ ಹೆಣ್ಣು ಗಂಡಿನ ಅಡಿಯಾಳಾಗದೆ ಗಂಡಿನ ಸಹಾಯದಿಂದ ಅಧಿಕಾರ ಚಲಾವಣೆ ಮಾಡುತ್ತಿದ್ದಳು. ಇವತ್ತಿಗು ಕೂಡ ತುಳುನಾಡಿನ ಅಳಿಯ ಕಟ್ಟಿನ ಕುಟುಂಬಗಳ ಆಸ್ತಿ ಪತ್ರವನ್ನು ನೋಡಿದರೆ ಅಲ್ಲಿ ಆಸ್ತಿಯ ಪಟ್ಟೆ ಇರುವುದು ಹೆಣ್ಣಿನ ಹೆಸರಿನಲ್ಲಿ ಅದೇ ರೀತಿ ಆಕೆಯ ನಂತರ ಆಕೆಯ ದೊಡ್ಡ ಮಗಳ ಹೆಸರಿಗೆ ಅದು ನಮೂದಿಸಲ್ಪಡುತ್ತಿತ್ತು. ಇಲ್ಲಿ ಹೆಣ್ಣಿಗಿರುವ ಅಧಿಕಾರವನ್ನು ಸೂಚಿಸುತ್ತಿತ್ತು.

ಗೆಜ್ಜೆಕತ್ತಿಯ ಉಲ್ಲೇಖ ದೇಯಿ ಬೈದೆತಿಯ ಕಥಾನಕದಲ್ಲಿ ಬರುತ್ತದೆ. ದೇಯಿ ಬೈದೆತಿಯು ಪೆರುಮಲೆ ಬಲ್ಲಾಳ ಕುಜುಂಬ ಮುದ್ಯನಿಗೆ ಔಷದೋಪಚಾರ ಮಾಡಲು ಹೊರಟಾಗ ಅತ್ತಿಗೆ ಸೊನ್ನೆ ಸೋಮಿ ಬೈದೆತಿಯು ಗೆಜ್ಜೆಕತ್ತಿ ಕೊಟ್ಟು ಮಗಳೆ ನಿನ್ನ ಮಾನ ಪ್ರಾಣವು ಈ ಗೆಜ್ಜೆಕತ್ತಿಯಲ್ಲಿ ಇದೆ ನಿನ್ನೊಂದಿಗೆ ನಾವಿಲ್ಲ ಈ ಗೆಜ್ಜೆಕತ್ತಿ ಇರುತ್ತದೆ ಎಂದು ಹೇಳುತ್ತಾಳೆ. ಅಂದರೆ ಅಂದಿನ ಕಾಲದಲ್ಲಿ ಅದು ಅಷ್ಟು ಮಹತ್ವವನ್ನು ಪಡೆಯುತ್ತಿತ್ತು. ಅದೇ ರೀತಿ ಬಾಣಂತಿ ತಾಯಿ ಬಹಿರ್ದೆಸೆಗೆ ಹೊರಗೆ ಹೋಗುವಾಗ ಆಕೆಯ ಕೈಯಲ್ಲಿ ಗೆಜ್ಜೆಕತ್ತಿ ಇರುತ್ತಿತ್ತು. ಇದು ಆಕೆಯನ್ನು ದುಷ್ಟ ಶಕ್ತಿ ಮತ್ತು ಗಾಳಿ ಸೋಂಕಿನಿಂದ ಕಾಪಾಡುತ್ತದೆ ಎನ್ನುವ ಬಲವಾದ ನಂಬಿಕೆಯಿಂದ. ಇದಕ್ಕೆ ಉದಾಹರಣೆಯಾಗಿ ಇಂದಿಗು ಕೂಡ ದೇಯಿ ಬೈದೆತಿ ಮತ್ತು ಮಾಯಂದಾಲ್ ( ಮಾಣಿಬಾಲೆ) ಶಕ್ತಿಗಳ ನೇಮದ ಸಮಯದಲ್ಲಿ ಆಯುಧವನ್ನಾಗಿ ಗೆಜ್ಜೆಕತ್ತಿಯನ್ನೆ ನೀಡುವುದು ಕಾರಣ ಅವರಿಬ್ಬರು ಬಾಣಂತಿ ಎನ್ನುವ ನಂಬಿಕೆಯಿಂದ.

ಹೆಣ್ಣು ಪ್ರಾಯಕ್ಕೆ ಬಂದಾಗಲೆ ಆಕೆಯ ಪ್ರಾಣ ಮತ್ತು ಮಾನ ರಕ್ಷಣೆಗಾಗಿ ಕೊಡುತ್ತಿದ್ದು  ಇಂದು ಕೇವಲ ಮದುವೆಯ  ಸಮಯದಲ್ಲಿ ಮತ್ತು  ದೈವಗಳ ಆಯುಧವಾಗಿ ಸೀಮಿತ ಚೌಕಟ್ಟಿನಲ್ಲಿ ಹುದುಗಿ ಹೋಗಿದೆ. ಹಿರಿಯರ ನಂಬಿಕೆಗಳು ಬುಡಮೇಲಾಗಿದೆ ಹೊಸತ್ತನ್ನು ಹುಡುಕುವ ತವಕ ಯುವಜನತೆಗೆ ಅದರ ಧಾವಂತದಲ್ಲಿ ಹಳೆಯ ನಂಬಿಕೆಗಳು ಮಕ್ಕಡೆ ಮಲಗಿಕೊಂಡಿದೆ. ಹಿರಿಯರ ದೂರದೃಷ್ಟಿಯ ಅಲೋಚನೆಗಳು ಮೂಡನಂಬಿಕೆಯ ಬೇಲಿಯಲ್ಲಿ ಬಂಧಿಯಾಗಿದೆ. ಹಿರಿಯರ ನಂಬಿಕೆಗಳಿಗೆ ಮರುಜೀವ ನೀಡುವವರು ಯಾರೋ ಕಾದು ನೋಡಬೇಕಿದೆ.

ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ

One thought on “ತುಳುನಾಡ ನಂಬಿಕೆಯಲ್ಲಿ ಗೆಜ್ಜೆ ಕತ್ತಿಯ ಮಹತ್ವ:-ಶೈಲು ಬಿರ್ವ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!