Yuvavahini

NOV 01, 2017 7.08 AM IST

ಯುವವಾಹಿನಿ (ರಿ) ಮುಲ್ಕಿ ಘಟಕ

ಮಕ್ಕಳ ಆಂತರಿಕ ಪ್ರತಿಭೆ ಅನಾವರಣಗೊಳ್ಳಲಿ : ಯಶವಂತ ಪೂಜಾರಿ

ಮಕ್ಕಳಲ್ಲಿ ಕಲಿಕೆಯ ಜೊತೆಗೆ ಆವರಲ್ಲಿನ ಆಂತರಿಕ ಪ್ರತಿಭೆಗಳು ಅನಾವರಣಗೊಂಡಾಗ ಅವರು ಸಹ ಭವಿಷ್ಯದಲ್ಲಿ ಕಲಾವಿದರಾಗಿ ಅಥವ ಅಸಾಧಾರಣ ಪ್ರತಿಭೆಗಳಾಗಿ ಬೆಳಗಲು ಸಾಧ್ಯವಿದೆ. ಮಕ್ಕಳಲ್ಲಿ ಎಂದಿಗೂ ಅನಾಥ ಪ್ರಜ್ಞೆಯನ್ನು ಮೂಡಿಸಬೇಡಿ, ಅವರನ್ನು ಸಮಾಜದ ಆಸ್ತಿಯನ್ನಾಗಿ ಅವರನ್ನು ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ, ಮೂಲ್ಕಿ ಯುವವಾಹಿನಿ ಘಟಕದ ಪ್ರತಿಯೊಂದು ಕಾರ್ಯಕ್ರಮವೂ ಸಹ ಮಾದರಿ ಕಾರ್ಯಕ್ರಮವಾಗಿರುತ್ತದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಹೇಳಿದರು.
ಮೂಲ್ಕಿ ಯುವವಾಹಿನಿ ಘಟಕದಿಂದ ಮೂಲ್ಕಿ ಸಿಎಸ್‌ಐ ಬಾಲಿಕಾಶ್ರಮದಲ್ಲಿ ದಿನಾಂಕ 01.11.2017 ರಂದು ನಡೆದ ಮಕ್ಕಳ ದಿನಾಚರಣೆಯ ವಿಶೇಷ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಮೂಲ್ಕಿ ಯುವವಾಹಿನಿ ಘಟಕದ ಆಧ್ಯಕ್ಷೆ ರಕ್ಷಿತಾ ಯೋಗೀಶ್ ಕೋಟ್ಯಾನ್ ಚಿತ್ರಾಪು ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.  ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮೂಲ್ಕಿ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ ಮಾತನಾಡಿ, ಸುಪ್ತ ಪ್ರತಿಭೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶದಲ್ಲಿದ್ದಾರೆ. ಸಂಘ ಸಂಸ್ಥೆಗಳು ಅವರಲ್ಲಿರುವ ಕಲಾ ಕೌಶಲ್ಯವನ್ನು ಅರಿತು ಮುನ್ನಡೆಸಬೇಕು, ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರುರವರ ದೂರದೃಷ್ಟಿತ್ವದ ಚಿಂತನೆಯಿಂದ ಮಕ್ಕಳ ಬಗ್ಗೆ ಕಾಳಜಿ ನಮ್ಮಲ್ಲಿ ಹೆಚ್ಚಾಗಿದೆ ಎಂದರು. ಬಾಲಿಕಾಶ್ರಮದ ವಾರ್ಡನ್ ರೆ.ಶಶಿಕಲ ಅಂಚನ್ ಶುಭ ಹಾರೈಸಿದರು.
ವೇದಿಕೆಯಲ್ಲಿ ಮೂಲ್ಕಿ ಘಟಕದ ಸಹ ಕಾರ್ಯದರ್ಶಿ ದಿವಾಕರ ಕೋಟ್ಯಾನ್, ಕಾರ್ಯಕ್ರಮದ ನಿರ್ದೇಶಕರಾದ ವಾಣಿ ಮಧುಕರ್ ಸುವರ್ಣ, ರಾಹುಲ್ ಜಿ. ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು, ಮಾಜಿ ಅಧ್ಯಕ್ಷ ನರೇಂದ್ರ ಕೆರೆಕಾಡು ನಿರೂಪಿಸಿದರು.
ಈ ಸಂದರ್ಭದಲ್ಲಿ ಮಕ್ಕಳಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರ ನೇತೃತ್ವದಲ್ಲಿ ಮಾಜಿ ಅಧ್ಯಕ್ಷರುಗಳಾದ ಚಂದ್ರಶೇಖರ ಸುವರ್ಣ, ಯೋಗೀಶ್ ಕೋಟ್ಯಾನ್, ರಾಮಚಂದ್ರ ಟಿ. ಕೋಟ್ಯಾನ್, ಪ್ರಕಾಶ್ ಸುವಣ€, ಚೇತನ್‌ಕುಮಾರ್, ಹಿರಿಯ ಸದಸ್ಯರಾದ ಮಧುಕರ ಸುವರ್ಣ, ಭಾಸ್ಕರ್, ರಮಾನಾಥ್, ಪ್ರವೀದ್ ಮತ್ತಿತರರ ಸಹಕಾರದಲ್ಲಿ ಮಕ್ಕಳಿಗೆ ವಿವಿಧ ಮನರಂಜನಾತ್ಮಕ ಕ್ರೀಡೆಗಳನ್ನು ಸಂಯೋಜಿಸಿ ಬಹುಮನವನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!