Yuvavahini

NOV 19, 2017 5.26 AM IST

ಯುವವಾಹಿನಿ (ರಿ) ಮಾಣಿ ಘಟಕ

ವ್ಯಕ್ತಿತ್ವ ವಿಕಸನ, ಭಾಷಣ ಕಲೆ ತರಬೇತಿ ಕಾರ್ಯಾಗಾರ

ಮಾಣಿ: ಯುವವಾಹಿನಿ ಮಾಣಿ ಘಟಕದ ವತಿಯಿಂದ ಸದಸ್ಯರಿಗೆ ಒಂದು ದಿನದ ವ್ಯಕ್ತಿತ್ವ ವಿಕಸನ ಮತ್ತು ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ಯುವಸ್ಫೂರ್ತಿ-2017 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲಡ್ಕ ಬಿಳಿಯೂರಿನಲ್ಲಿದಿನಾಂಕ 19.11.2017 ರಂದು   ನಡೆಸಲಾಯಿತು.
ಕಳೆಂಜ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೋಕ್ತೇಸರ ಚಂದಪ್ಪ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ರಾಜೇಶ್ ಪೂಜಾರಿ ಬಾಬನಕಟ್ಟೆ ಅನಂತಾಡಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಇದರ ಗೌರವಾಧ್ಯಕ್ಷ ಈಶ್ವರ ಪೂಜಾರಿ ಹಿರ್ತಡ್ಕ ಕಡೇಶಿವಾಲಯ, ಅಧ್ಯಕ್ಷ ನಾರಾಯಣ ಸಾಲಿಯಾನ್ ಅನಂತಾಡಿ, ನೇರಳಕಟ್ಟೆವ್ಯವಸಾಯ ಸೇವಾ ಸಹಕಾರಿ ಸಂಘ ಮಾಣಿ ಶಾಖೆಯ ವ್ಯವಸ್ಥಾಪಕ ಸಂಜೀವ ಪೂಜಾರಿ, ಘಟಕದ ಸಲಹೆಗಾರರಾದ ಪ್ರೇಮನಾಥ ಕೆ. ಪ್ರಗತಿಪರ ಕ್ರಷಿಕ ರುಕ್ಮಯ ಪೂಜಾರಿ ನೂಜೆ, ಸಂಘಟನ ಕಾರ್ಯದರ್ಶಿ ಸತೀಶ್ ಬಾಯಿಲ ಕೆಡಿ.ಪಿ.ಸದಸ್ಯೆ ಜಯಂತಿ ವಸಂತ ಪೂಜಾರಿ, ಮಾಣಿ ಘಟಕದ ಸಲಹೆಗಾರ ದಯಾನಂದ ಕೊಡಾಜೆ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ ರಾಷ್ಟ್ರೀಯ ತರಬೇತುದಾರ ರಾಮಚಂದ್ರ ರಾವ್ ಅವರು ವ್ಯಕ್ತಿತ್ವ ವಿಕಸನ, ಪರಿಣಾಮಕಾರಿಭಾಷಣ ಕಲೆ ಕುರಿತ ತರಬೇತಿ ನೀಡಿದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಪ್ರದಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಬಂಟ್ವಾಳ, ಕೋಶಾಧಿಕಾರಿ ಹರೀಶ್ ಸನಿಲ್, ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷ ಲೋಕೇಶ್ ಸುವರ್ಣ ಅಲೆತ್ತೂರು ಶುಭಹಾರೈಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ಸತೀಶ್ ಕೊಪ್ಪರಿಗೆ ಸ್ವಾಗತಿಸಿ, ಚೇತನ್ ಕುಮಾರ್ ಕಳಂಜ ಬಿಳಿಯೂರು ವಂದಿಸಿ ಮಾಣಿ ಯುವವಾಹಿನಿ ಘಟಕದ ಕಾರ್ಯದರ್ಶಿ ಪ್ರಶಾಂತ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

One thought on “ವ್ಯಕ್ತಿತ್ವ ವಿಕಸನ, ಭಾಷಣ ಕಲೆ ತರಬೇತಿ ಕಾರ್ಯಾಗಾರ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!