ಯುವವಾಹಿನಿ (ರಿ) ಸುಳ್ಯ ಘಟಕ

ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ : ಶಿವರಾಮ

 ಸುಳ್ಯ ; ದೇಶದಲ್ಲಿ ಕ್ರಾಂತಿಯಕಾರಿ ವಿಚಾರ ಧಾರೆಗಳು ನಿಂತುಹೋಗಿವೆ .ಅಸಹಿಷ್ಣುತೆ ಜಾಸ್ತಿ ಯಾಗಿದೆ .ಉಡುಪಿಯಲ್ಲಿ ಧರ್ಮ ಸಂತರ ಸಂಸತ್ ನಡೆಯುತ್ತಿದೆ ಆದರೆ ಅದು ಧರ್ಮ ಸಂತೃಪ್ತರ ಸಭೆ ನಾವೆಲ್ಲ ಧರ್ಮಸಂತ್ರಸ್ತರು .ಪುರೋಹಿತಶಾಹಿ ವರ್ಗದಿಂದ ಧರ್ಮ ಉಳಿದುದಲ್ಲ ಶೋಷಿತ ವರ್ಗದಿಂದ ಉಳಿದುದು ಎಂದು ಬೆಂಗಳೂರಿನ ನಿವೃತ್ತ ಎ.ಸಿ.ಪಿ ಬಿ.ಕೆ .ಶಿವರಾಮ ಹೇಳಿದರು .ಅವರು ನ.25ರಂದುಯುವವಾಹಿನಿ (ರಿ) ಸುಳ್ಯ ಘಟಕ ಮತ್ತು ಸುಳ್ಯದ ಮಾನವ ಬಂಧುತ್ವ ವೇದಿಕೆ ವತಿಯಿಂದ ಯುವಜನ ಸಂಯುಕ್ತ ಮಂಡಳಿ ಸಂಭಾಂಗಣದಲ್ಲಿ ನಡೆದ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಸಂದೇಶ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಿದ್ದರು.
ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಸುಳ್ಯ ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ| ಅಚ್ಚುತ ಪೂಜಾರಿ ಬ್ರಹ್ಮಶ್ರೀ ನಾರಾಯಣ ಗುರುಗಳು ಈ ಸಮಾಜ ಕಂಡ ಅಪ್ರತಿಮ ಸಮಾಜ ಸುಧಾರಕರು. ಅವರು ಕೇರಳ ದಲ್ಲಿ ಸಮಾಜಿಕ ,ಧಾರ್ಮಿಕ ಮತ್ತು ಶೈಕ್ಷಣಿಕ ಕ್ರಾಂತಿಯನ್ನು ಮಾಡಿದರು . ದಲಿತರಿಗೆ ,ಹಿಂದುಳಿದ ವರ್ಗದವರಿಗೆ ತಲೆ ಎತ್ತಿ ನಡೆಯುವಂತಹ ಸ್ವಾಭಿಮಾನ ತುಂಬಿದರು. ಬಿಲ್ಲವ ಸಮುದಾಯವೂ ಸೇರಿದಂತೆ ಹಲವು ಜಾತಿಯ ವರಿಗೆ ದೇವಸ್ಥಾನಗಳಿಗೆ ಪ್ರವೇಶ ಇಲ್ಲದಿದ್ದಾಗ ಪ್ರತ್ಯೇಕ ದೇವಸ್ಥಾನಗಳನ್ನೇ ಕಟ್ಟಿಸುವ ಕಾರ್ಯ ಆರಂಭಿಸಿದರು. ನಿನ್ನ ಧರ್ಮವನ್ನು ಪ್ರೀತಿಸು ಇತರ ಧರ್ಮವನ್ನು ಗೌರವಿಸು ಎಂದು ಹೇಳಿಕೊಟ್ಟರು ಎಂದು ಹೇಳಿದರು.
ಸಭಾದ್ಯಕ್ಷತೆಯನ್ನು ಮಾನವ ಬಂಧುತ್ವ ವೇದಿಕೆ ಯ ಸಂಚಾಲಕ ವಿಲ್ಪ್ರೆಡ್ ಡಿಸೋಜ ವಹಿಸಿದ್ದರು.ಯುವವಾಹಿನಿ ಸುಳ್ಯ ಘಟಕ ದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ, ಬಿಲ್ಲವ ಸಂಘದ ಕಾರ್ಯದರ್ಶಿ ಬಾಲಕೃಷ್ಣ ನೂಜಾಡಿ, ಎಂ.ಬಿ ಸದಾಶಿವ, ಅಶೋಕ್ ಎಡಮಲೆ,ಶ್ರೀಮತಿ ಲೀಲಾ ಸಂಪಿಗೆ ,ಅಬ್ಬಾಸ್ ಕಟ್ಟೆಕ್ಕಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾನವ ಬಂಧುತ್ವ ವೇದಿಕೆಯ ಸತೀಶ್ ಕುಮಾರ್ ಪ್ರಸ್ತಾವಿಕ ಭಾಷಣಗೈದರು, ಗೋಪಾಲ ಪೆರಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯುವವಾಹಿನಿ ಸಂಘಟನ ಕಾರ್ಯದರ್ಶಿ ಮಹೇಶ್ ಚಂದ್ರ ಸಾಲ್ಯಾನ್, ರವೀಂದ್ರ ಎಚ್, ರವಿಕುಮಾರ್, ರವಿಕಿರಣ್, ರಮೇಶ್ ಜಯನಗರ , ಜಯಂತಿ , ದಿನೇಶ್, ಸರೋಜಿನಿ,ಚಂದ್ರಾವತಿ, ಗುರುನಾಥೇಶ್ವರ ,ಸುಂದರ ಪೂಜಾರಿ, ಚಂದ್ರಶೇಖರ್, ಸುಂದರಿ,ಭಾಸ್ಕರ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!