Yuvavahini

JAN 11, 2018 5.07 PM IST

ಯುವವಾಹಿನಿ(ರಿ) ಬಜ್ಪೆ ಘಟಕದ ಪದಗ್ರಹಣ

ಯುವವಾಹಿನಿ ಯುವಕರ ಮೂಲ ಪ್ರೇರಣೆ : ಜಯಾನಂದ್

ಯುವವಾಹಿನಿಯ ಸಮಾಜಮುಖಿ ಕಾರ್ಯ ಹೆತ್ತ ತಾಯಿಯ ಸೇವೆಗೆ ಸಮಾನವಾದುದು ,ಭಕ್ತಿ , ತ್ಯಾಗ , ಕರ್ತವ್ಯ ಪ್ರಜ್ಞೆ ಮೂಲಕ ಯುವವಾಹಿನಿ ಯುವಕರ ಮೂಲ ಪ್ರೇರಣೆ ,ಯುವವಾಹಿನಿ ಎಂಬ ದೇವಸ್ಥಾನದಲ್ಲಿ ಭಕ್ತರಂತಿರುವ ಸದಸ್ಯರು ಗುರುವರ್ಯರ ಆದರ್ಶದ ಬೆಳಕಿನಲ್ಲಿ ಮತ್ತಷ್ಟು ಪ್ರಕಾಶಮಾನರಾಗಿ ಕಂಗೊಳಿಸುತ್ತಿದ್ದಾರೆ , ಎಂದು ಜಯಾನಂದ್ ತಿಳಿಸಿದರು . ಹಿಂದುಳಿದ ಸಮಾಜದಲ್ಲಿ ತೀರಾ ಬಡತನದ ಬೇಗೆಯಲ್ಲಿ ಕೆಂಗಟ್ಟು ಮುಂದೆ ಸಾಗಲು ಪರದಾಟ ನಡೆಸುವ ಮಂದಿಗೆ ಇದೇ ಸಮಾಜದ ಸ್ಥಿತಿವರಿತರು ಮತ್ತಷ್ಟು ಸಕ್ರೀಯತೆಯಿಂದ ತೊಡಗಿಸಿಕೊಂಡು ತಮ್ಮ ಹೃದಯ ಶ್ರೀಮಂತಿಕೆಯನ್ನು ವ್ಯಕ್ತಪಡಿಸಿ ಆ ಮೂಲಕ ಸಶಕ್ತ ಯುವ ಸಮಾಜವನ್ನು ಕಟ್ಟುವಲ್ಲಿ ತಮ್ಮ ಕಾಣಿಕೆಯನ್ನು ಸದಾ ಜಾರಿಯಲ್ಲಿರಿಸಬೇಕಾಗಿದೆ, ಎಂದು ದಿನಾಂಕ ೧೧. ೦೧ . ೨೦೧೮ ರಂದು ಬಜ್ಪೆ ಬಿಲ್ಲವ ಸಂಘದಲ್ಲಿ ಜರುಗಿದ ಯುವವಾಹಿನಿ(ರಿ) ಬಜ್ಪೆ ಘಟಕದ ಪದಗ್ರಹಣ ಸಮಾರಂಭದಲ್ಲಿ ಮೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ಜಯಾನಂದ್ ಇವರು ತಮ್ಮ ದಿಕ್ಸೂಚಿ ಭಾಷಣದ ಮೂಲಕ ನಿವೇದಿಸಿಕೊಂಡರು.

ಇಂದಿನ ಯುವ ಸಮುದಾಯ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಇನ್ನಷ್ಟು ತಮ್ಮ ಶಕ್ತಿಯನ್ನು ವಿನಿಯೋಗಿಸಬೇಕೆಂದು ನಿವೃತ್ತ ಪೊಲೀಸ್ ಅಧಿಕಾರಿ ಶ್ರೀ ಶಾಂತಪ್ಪ ಮುಗ್ಡಾಲ್ ಇವರು ಇತ್ತೀಚಿಗೆ ಬಜ್ಪೆ ಬಿಲ್ಲವ ಸಂಘದಲ್ಲಿ ನಡೆದ ಬಜ್ಪೆ ಯುವವಾಹಿನಿ ಘಟಕದ ಈ ಸಾಲಿನ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು .
ಇದೇ ಸಂದರ್ಭದಲ್ಲಿ ಘಟಕದ ಸಲಹೆಗಾರರಾಗಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ಇವರನ್ನು ಅಭಿನಂದಿಸಲಾಯಿತು. ಗೂಡುದೀಪ ಕಲಾವಿದ, ಕಲಾ ಸಂಘಟಕ ಶ್ರೀ ಜಗದೀಶ್ ಅಮೀನ್ ಸುಂಕದಕಟ್ಟೆ, ರಾಷ್ಟ್ರೀಯ ಕ್ರೀಡಾಳು ಪುಷ್ಪಾವತಿ ಪೂಜಾರಿ ಮುಚ್ಚೂರು ಇವರಿಬ್ಬರನ್ನು ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿ ಪದಪ್ರಧಾನ ಮಾಡಿದರು . ೨೦ ದೇವರಾಜ್ ಅಮೀನ್ ನೇತೃತ್ವದ ೨೦ ಸದಸ್ಯರ ತಂಡವು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಅಧ್ಯಕ್ಷ ಶ್ರೀ ದೇವರಾಜ್ ಅಮೀನ್ ಸರ್ವರ ಸಹಕಾರದಲ್ಲಿ ಯುವವಾಹಿನಿ ಬಜ್ಪೆ ಘಟಕವನ್ನು ಯಶಸ್ವೀಯಾಗಿ ಮುನ್ನಡೆಸುವ ವಿಶ್ವಾಸ ವ್ಯಕ್ತಪಡಿಸಿದರು.
ಯುವವಾಹಿನಿ(ರಿ) ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಜೇಶ್ ಸುವರ್ಣ, ಬಜ್ಪೆ ವೆಸ್ಟ್ ಕೋಸ್ಟ್ ವೈನ್ಸ್ ನ ಮಾಲಕರಾದ ಉಮೇಶ್, ಬಜ್ಪೆ ಬಿಲ್ಲವ ಸಂಘದ ಕೋಶಾಧಿಕಾರಿಯಾದ ಬಾಲಕೃಷ್ಣ ಪೂಜಾರಿ, ಯುವವಾಹಿನಿ ಬಜ್ಪೆ ಘಟಕದ ಸಲಹೆಗಾರರಾದ ರವಿಚಂದ್ರ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಅಮೀನ್ ಮಮತ್ತಿತರರು ಉಪಸ್ಥಿತರಿದ್ದರು. ಬಜ್ಪೆ ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಪದಗ್ರಹಣ ಕಾರ್ಯಕ್ರಮದ ಪೂರ್ವದಲ್ಲಿ ಬಜ್ಪೆ ಮತ್ತು ಕೆಂಜಾರು-ಕರಂಬಾರು ಯುವಾಹಿನಿ ಘಟಕದ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಘಟಕದ ಕಾರ್ಯದರ್ಶಿ ಶ್ರೀಮತಿ ಕನಕಾ ಮೋಹನ್ ವಾರ್ಷಿಕ ವರದಿ ವಾಚಿಸಿದರು.
ಕು| ಗ್ರೀಷ್ಮಾ ಹಾಗೂ ಕು| ಶ್ರೇಯ ಸನಿಲ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ನಿರ್ಗಮನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೂಜಾರಿ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀ ವಿಶ್ವನಾಥ್ ಪೂಜಾರಿ ರೆಂಜಾಳ ನೂತನ ಪದಾಧಿಕಾರಿಗಳ ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ವಿನೀತ್ ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ನೂತನ ಕಾರ್ಯದರ್ಶಿ ಶ್ರೀಮತಿ ಸುನಿತಾ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!