Yuvavahini

FEB 11, 2018 8.09 AM IST

ಯುವವಾಹಿನಿ (ರಿ) ಕಾಪು ಘಟಕ ಉದ್ಘಾಟನೆ

ಯುವವಾಹಿನಿಯಿಂದ ಗುರುಗಳ ಸಂದೇಶ ಅನುಷ್ಠಾನ ಶ್ಲಾಘನೀಯ : ವಿನಯ ಕುಮಾರ್ ಸೊರಕೆ

ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಯುವಪೀಳಿಗೆ ಅನುಸರಿಸುವಂತೆ ಮಾಡುವ ಯುವವಾಹಿನಿಯ ಕಾರ್ಯ ಶ್ಲಾಘನೀಯ, ವಿದ್ಯೆಗೆ ಭದ್ರ ಬುನಾದಿ ಹಾಕುವ ಮೂಲಕ ಉದ್ಯೋಗ , ವ್ಯಕ್ತಿತ್ವ ವಿಕಸನ, ಕ್ರೀಡೆ, ಆರೋಗ್ಯ, ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವವಾಹಿನಿಯ ಎಲ್ಲಾ ಘಟಕಗಳು ಸಮಾಜದಲ್ಲಿ ವಿಶಿಷ್ಠ ಸಂಚಲನ ಮೂಡಿಸಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ ಸೊರಕೆ ತಿಳಿಸಿದರು.
ಅವರು ದಿನಾಂಕ 11.02.2018 ನೇ ಆದಿತ್ಯವಾರ ಕಾಪು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿಯ 29 ಘಟಕ ಯುವವಾಹಿನಿ (ರಿ) ಕಾಪು ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ದೀಪಕ್ ಕುಮಾರ್ ಎರ್ಮಾಳ್ ನೇತ್ರತ್ವದಲ್ಲಿ 20 ಸದಸ್ಯರ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ವೈಭವ ಹಾಗೂ ವೈಫಲ್ಯದಿಂದ ಕೂಡಿದ ಬಿಲ್ಲವ ಸಮಾಜದಲ್ಲಿ ಯುವವಾಹಿನಿಯು ಭರವಸೆಯ ಬೆಳಕಿನ ಆಶಾಕಿರಣವಾಗಿ ಮೂಡಿದೆ, ಎಂದು ಪ್ರಧಾನ ಭಾಷಣ ಮಾಡಿದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ ತಿಳಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಟಪಾಡಿ ಶಂಕರ ಪೂಜಾರಿ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಬಿಡುಗಡೆ ಮಾಡಿದರು, ಕಾಪು ಬಿಲ್ಲವ ಸಹಾಯಕ ಸಂಘದ ಅಧ್ಯಕ್ಷರಾದ ಮಾಧವ ಪಾಲನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

 

ಸನ್ಮಾನ :

ಚಲನಚಿತ್ರ ನಟ ನಟಿಯರಾದ ಪ್ರಥ್ವೀ ಅಂಬಾರ್, ಸ್ವಾತಿ ಬಂಗೇರ, ಚಿರಶ್ರೀ ಅಂಚನ್, ಕರಾಟೆ ಪಟು ಜಿಯಾ.ಸಿ.ಪೂಜಾರಿ, ಜೇಸೀ ವಲಯ ಅಧ್ಯಕ್ಷರಾದ ರಾಕೇಶ್ ಕುಂಜೂರು ಇವರನ್ನು ‌ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಎಲ್ಲರ ಸಹಕಾರದಿಂದ ಉತ್ತಮ ಸಮಾಜಮುಖಿ ಕಾರ್ಯಗಳ ಮೂಲಕ ಯುವವಾಹಿನಿ ಕಾಪು ಘಟಕವನ್ನು ಯಶಸ್ಸಿನ ಪಥದತ್ತ ಕೊಂಡೊಯ್ಯುವುದಾಗಿ ನೂತನ ಅಧ್ಯಕ್ಷರಾದ ದೀಪಕ್ ಕುಮಾರ್ ಎರ್ಮಾಳ್ ತಿಳುಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಉದ್ಯಾವರ ಪ್ರಸ್ತಾವನೆ ಮಾಡಿದರು, ಸುಧಾಕರ್ ಸಾಲ್ಯಾನ್ ಸ್ವಾಗತಿಸಿದರು, ಜತೆಕಾರ್ಯದರ್ಶಿ ಸಂದೀಪ್ ಕುಮಾರ್ ಧನ್ಯವಾದ ನೀಡಿದರು, ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

3 thoughts on “ಯುವವಾಹಿನಿಯಿಂದ ಗುರುಗಳ ಸಂದೇಶ ಅನುಷ್ಠಾನ ಶ್ಲಾಘನೀಯ : ವಿನಯ ಕುಮಾರ್ ಸೊರಕೆ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!