Yuvavahini

JAN 07, 2018 1.06 PM IST

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ಯುವವಾಹಿನಿಯು ತನ್ನ ಸಾರ್ಥಕ ಕೆಲಸಗಳಿಂದ ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ : ಉಗ್ಗೆಲ್‍ಬೆಟ್ಟು

ಮಂಗಳೂರು: ಅಭಿವೃದ್ಧಿ ಆಗಿದ್ದೇವೆ ಪರಿವರ್ತನೆ ಆಗಿದೆ ಎಂದು ನಾವೆಷ್ಟೇ ಅಂದುಕೊಂಡರೂ ಸಮಾಜದಲ್ಲಿ ಇಂದಿಗೂ ಸಮಸ್ಯೆಗಳು ಇವೆ, ಜನರ ಈ ಸಮಸ್ಯೆಗೆ ಸೂಕ್ತ ಸ್ಪಂದನೆ ನೀಡಿದಾಗ ಜನ ಸಂಘಟನೆಗೆ ಹತ್ತಿರವಾಗುತ್ತಾರೆ ಮತ್ತು ಗೌರವಿಸುತ್ತಾರೆ, ಯುವವಾಹಿನಿಯ ಈ ಸಾರ್ಥಕ ಕೆಲಸಗಳಿಂದಲೇ ಅದು ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ ಎಂದು ಉದ್ಯಮಿ ಸಂತೋಷ್ ಕುಮಾರ್ ಉಗ್ಗೆಲ್‍ಬೆಟ್ಟು ತಿಳಿಸಿದರು.
ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಹಕಾರದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಬಿಲ್ಲವ ವಧುವರರ ಅನ್ವೇಷಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಬಿಲ್ಲವ ಸಮುದಾಯ ಅತ್ಯಂತ ಹೆಚ್ಚಿನ ಜನಸಂಖ್ಯೆ ಇರುವ ಸಮುದಾಯ ಈ ಕಾರಣದಿಂದ ಸಾಮಾಜಿಕ ಸಮಸ್ಯೆಗಳೂ ಅಧಿಕವಾಗಿದೆ, ಆದರೆ ಯುವವಾಹಿನಿಯಂತಹ ಸಂಘಟನೆ ಇರುವವರೆಗೆ ಆ ನೋವು ಸಮಾಜವನ್ನು ಭಾದಿಸದು, ನಾವೆಲ್ಲ ಯುವವಾಹಿನಿ ಜೊತೆಗಿರೋಣ ಎಂದು ಅವರು ತಿಳಿಸಿದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅವರು ಮಾತನಾಡಿ, ಕಳೆದ ಬಾರಿ ಈ ಕಾರ್ಯಕ್ರಮ ಆಯೋಜಿಸಿದಾಗ ಮಹಿಳಾ ಘಟಕಕ್ಕೆ ಆತಂಕವಿತ್ತು, ಆದರೆ ಅದಕ್ಕೆ ಸಿಕ್ಕಿದ ಸ್ಪಂದನೆ ನಮ್ಮ ಆತಂಕ ದೂರ ಮಾಡಿ ಈ ಬಾರಿಯೂ ಕಾರ್ಯಕ್ರಮ ಮಾಡಲು ಪ್ರೇರಣೆ ನೀಡಿತು. ಕಳೆದ ಬಾರಿ 600 ಕ್ಕೂ ಅಧಿಕ ಮಂದಿ ಹೆಸರು ನೊಂದಾಯಿಸಿದ್ದರು. ಈ ಪೈಕಿ 150 ಕ್ಕೂ ಅಧಿಕ ಜೋಡಿಗೆ ಕಂಕಣ ಭಾಗ್ಯ ಒದಗಿಸಿದ ಸಂತೃಪ್ತಿ ಮಹಿಳಾ ಘಟಕದ್ದು ಎಂದರು. ಈ ಬಾರಿಯೂ ಅಧಿಕ ಮಂದಿ ಹೆಸರು ನೋಂದಾಯಿಸಿದ್ದು ಇಂದಿನಿಂದ ಈ ಕಂಕಣ ಯಜ್ಞ ನಿರಂತರವಗಿ ಮುಂದುವರಿಯಲಿದೆ ಎಂದರು.
ಸಮಾರಂಭವನ್ನು ಕುದ್ರೊಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್ ಸಾಯಿರಾಮ್ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್, ಮಹಿಳಾ ಘಟಕದ ಸಲಹೆಗಾರ ಪರಮೇಶ್ವರ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಸುಪ್ರೀತಾ ಉಪಸ್ಥಿತಿರಿದ್ದರು. ಅನ್ವೇಷಣಾ ಕಾರ್ಯಕ್ರಮದ ಸಂಚಾಲಕಿ ಉಮಾ ಶ್ರೀಕಾಂತ್ ಸ್ವಾಗತಿಸಿದ್ದು, ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದ್ದು ಶುಭಾ ರಾಜೇಂದ್ರ, ರವಿಕಲಾ, ನರೇಶ್‍ಕುಮಾರ್ ಸಸಿಹಿತ್ಲು, ಹಾಗೂ ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!