Yuvavahini

MAY 10, 2018 3.17 AM IST

ಯುವವಾಹಿನಿ (ರಿ) ಕೂಳೂರು ಘಟಕ

ಎಲ್ಲಾ ಬಾಂಧವ್ಯ , ಸಂಬಂಧಗಳನ್ನು ಮೀರಿದವಳು ತಾಯಿ : ಯಶವಂತ ಪೂಜಾರಿ

ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ‌, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ‌ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು.

ಅವರು ದಿನಾಂಕ‌ 10.05.2018 ರಂದು ಯುವವಾಹಿನಿ (ರಿ) ಕೂಳೂರು ಘಟಕದ ಆಶ್ರಯದಲ್ಲಿ ಕೂಳೂರು ನಾರಾಯಣಗುರು ಸಭಾಭವನದಲ್ಲಿ ವಿಶ್ವ ತಾಯಂದಿರ ದಿನದ ಪ್ರಯುಕ್ತ ಜರುಗಿದ ಮಾತೃ ವಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸಭ್ಯತೆಯ ಶಿಷ್ಟಾಚಾರದ ಶಿಕ್ಷಣವೇ ಸಂಸ್ಕಾರವಾಗಿದೆ, ಸುಸಂಸ್ಕೃತಿಯನ್ನು ಒಂದು‌ ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಸ್ತಾಂತರಿಸುವ ಪ್ರಕಿಯೆಯೇ ಸಂಸ್ಕಾರವಾಗಿದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೂಳೂರು ಘಟಕದ ಮಾತೃ ವಂದನಾ‌ ಕಾರ್ಯಕ್ರಮ ಅತ್ಯಂತ ಅರ್ಥ ಪೂರ್ಣವಾಗಿದೆ. ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಯುವವಾಹಿನಿ (ರಿ) ಮಂಗಳೂರು ಘಟಕದ ಉಪಾಧ್ಯಕ್ಷರಾದ ಲಕ್ಷ್ಮಿ ನಾರಾಯಣ ಮಾತನಾಡಿ , ಕಾಲ ‌ಬದಲಾಗಬಹುದು ಮಕ್ಕಳು ಬದಲಾಗಬಹುದು ಆದರೆ ತಾಯಿ ಮತ್ತು ಆಕೆಯ ಪ್ರೀತಿ ಎಂದಿಗೂ‌ ಬದಲಾಗಲಾರದು ಅವಳ ಪ್ರೀತಿ ಎಂಬುದು ಎಂದೂ ಬತ್ತದ ಕಡಲಿದ್ದಂತೆ . ತನ್ನ ಮಗು ಅಂಗವಿಕಲನೇ ಆಗಿರಲಿ, ಬುದ್ಧಿಮಾಂದ್ಯನೇ ಆಗಿರಲಿ ಇಡೀ ಸಮಾಜವೇ ಆತನನ್ನು ತಿರಸ್ಕಾರ ದೃಷ್ಟಿಯಿಂದ ನೋಡಲಿ ಆದರೆ ತಾಯಿಯ ಮಮತೆ ಕಿಂಚಿತ್ತೂ ಕಡಿಮೆಯಾಗದು , ಅದಕ್ಕಾಗಿಯೇ ಅವಳು ದೇವರಿಗೆ ಸಮಾನಾಗಿ ನಿಂತಿದ್ದಾಳೆ ಎಂದರು.

ಯುವವಾಹಿನಿ ಕೂಳೂರು ಘಟಕದ ಸದಸ್ಯರು ತಮ್ಮ ತಾಯಂದಿರ ಪಾದ ಪೂಜೆ ನೆರವೇರಿಸಿ ತಾಯಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಶ್ರೀ ಗೋಕರ್ಣನಾಥ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಹಾಗೂ ಪುಟ್ಟು ಶಾಂತಿ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷ ಪುಷ್ಪರಾಜ್ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ನವೀನ್ ಚಂದ್ರ ಹಾಗೂ ಸಲಹೆಗಾರರಾದ ನೇಮಿರಾಜ್ ಉಪಸ್ಥಿತರಿದ್ದರು.

ಕಾರ್ಯಕ್ರಮ ‌ಸಂಚಾಲಕರಾದ ತುಳಸಿ ಸುಜೀರ್ ವಂದಿಸಿದರು, ಮಾಜಿ ಅಧ್ಯಕ್ಷ ಸುಜಿತ್ ರಾಜ್ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!