Yuvavahini

JUN 15, 2018 3.47 PM IST

ಯುವವಾಹಿನಿ (ರಿ) ಮುಲ್ಕಿ ಘಟಕದ ಪದಗ್ರಹಣ

ಯುವ ಸಮುದಾಯಕ್ಕೆ ಯುವವಾಹಿನಿಯೇ ದಾರೀ ದೀಪ : ಸುಮಲತಾ ಸುವರ್ಣ

ಮೂಲ್ಕಿ: ಇಂದು ಯುವ ಸಮುದಾಯವು ಹಾದಿ ತಪ್ಪುತ್ತಿದ್ದಾರೆ ಎಂದು ಹೇಳುವ ಬದಲು ಅವರನ್ನು ಯುವವಾಹಿನಿಯಂತಹ ಸಮಾಜ ಮುಖಿ ಚಿಂತನೆಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಉತ್ತಮ ಸಮಾಜವನ್ನು ಸೃಷ್ಟಿಸುವಲ್ಲಿ ಪ್ರಯತ್ನ ನಡೆಸಬೇಕು. ಹೆಣ್ಣು ಮಕ್ಕಳು ವಿದ್ಯೆಯ ಮೂಲಕ ಸದೃಢರಾಗುತ್ತಿರುವ ಇಂದಿನ ದಿನದಲ್ಲಿ ಯುವಕರು ಯಾಕಾಗಿ ಹಿನ್ನೆಡೆಯಾಗಿದ್ದಾರೆ ಎಂದು ಹೆತ್ತವರು ಚಿಂತಿಸಬೇಕಾಗಿದೆ ಎಂದು ಮಂಗಳೂರು ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಹೇಳಿದರು.
ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಶನಿವಾರ ನಡೆದ ಮೂಲ್ಕಿ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.
ಮೂಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷೆ ರಕ್ಷಿತಾ ಯೋಗೀಶ್ ಕೋಟ್ಯಾನ್ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿ, ತಮ್ಮ ಅವಧಿಯಲ್ಲಿ ಸಹಕರಿಸಿದವರನ್ನು ಗೌರಿವಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಕುಶಲಾ ಎಸ್. ಕುಕ್ಯಾನ್ ಅವರ ತಂಡಕ್ಕೆ ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಅವರು ಪ್ರತಿಜ್ಞಾವಿಧಿಯನ್ನು ಭೋಧಿಸಿ, ಮಾತನಾಡಿ ಯುವವಾಹಿನಿ ಸಂಸ್ಥೆಯನ್ನು ಇನ್ನಷ್ಟು ಘಟಕಗಳ ಮೂಲಕ ಸಮಾಜದಲ್ಲಿ ಗಟ್ಟಿಯಾಗಿ ಬೇರೂರಲು ಎಲ್ಲಾ ಸಮಾಜದವರು ಪ್ರೋತ್ಸಾಹ ನೀಡಿದ್ದಾರೆ. ಸಂಸ್ಥೆಯ ಮೇಲಿನ ಜವಬ್ದಾರಿ ಹೆಚ್ಚಾಗಿದೆ. ಯುವ ಜನತೆಯನ್ನು ಭವಿಷ್ಯದ ಚಿಂತನೆ ಮಾಡುವಂತಹ ವಾತಾವರಣವನ್ನು ಯುವವಾಹಿನಿ ನಿರ್ಮಿಸಿರುವುದಕ್ಕೆ ಹೆಮ್ಮೆಯಾಗುತ್ತದೆ ಎಂದರು.

ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗ, ಉದ್ಯಮಿ ಪ್ರವೀಣ್‍ಕುಮಾರ್ ಬೊಳ್ಳೂರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ 11 ಮಂದಿ ಹೊಸ ಸದಸ್ಯರಾಗಿ ಘಟಕಕ್ಕೆ ಸೇರ್ಪಡೆಗೊಂಡರು.
ಕೋಶಾಧಿಕಾರಿಗಳಾದ ಭಾರತೀ ಭಾಸ್ಕರ ಕೋಟ್ಯಾನ್, ದಿವಾಕರ ಕೋಟ್ಯಾನ್, ದಾನಿಗಳಾದ ವಾಸು ಪೂಜಾರಿ ಚಿತ್ರಾಪು, ಯೋಗೀಶ್ ಕೋಟ್ಯಾನ್ ಚಿತ್ರಾಪು, ಅಶೋಕ್ ಕರ್ಕೇರ ಎಸ್.ಕೋಡಿ. ನವೀನ್‍ಚಂದ್ರ ಸುವರ್ಣ, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಉದಯ ಅಮೀನ್ ಮಟ್ಟು, ಜಯಕುಮಾರ್ ಕುಬೆವೂರು, ರಾಮಚಂದ್ರ ಟಿ. ಕೋಟ್ಯಾನ್, ರಮೇಶ್ ಬಂಗೇರ, ಜಯ ಸಿ. ಪೂಜಾರಿ, ಪ್ರಕಾಶ್ ಸುವರ್ಣ ಉಪಸ್ಥಿತರಿದ್ದರು.
ಘಟಕದ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವರದಿ ನೀಡಿದರು, ನೂತನ ಕಾರ್ಯದರ್ಶಿ ಚರಿಷ್ಮಾ ಶ್ರೀನಿವಾಸ್ ವಂದಿಸಿದರು, ಚುನಾವಣಾಧಿಕಾರಿ ಚೇತನ್‍ಕುಮಾರ್ ಹಾಗೂ ಮಾಜಿ ಅಧ್ಯಕ್ಷ ವಿಜಯಕುಮಾರ್ ಕುಬೆವೂರು ಪರಿಚಯಿಸಿದರು, ಮಾಜಿ ಅಧ್ಯಕ್ಷ ಮೋಹನ್ ಸುವರ್ಣ ಪ್ರಸ್ತಾವನೆಗೈದರು. ಮಾಜಿ ಅಧ್ಯಕ್ಷ ನರೇಂದ್ರ ಕೆರೆಕಾಡು ಮತ್ತು ಸದಸ್ಯೆ ಜಾಹ್ನವಿ ಮೋಹನ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.


ಸನ್ಮಾನ..ಪುರಸ್ಕಾರ..ಗೌರವ..ಸಮಾಜ ಸೇವೆ
ಕಾರ್ಯಕ್ರಮದಲ್ಲಿ ಯುವವಾಹಿನಿ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆಯಲು ಪ್ರೇರಣೆಯಾದ ನೆಲೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಹಾಗೂ ಮೂಲ್ಕಿ ಘಟಕಕ್ಕೆ ವಿಶೇಷ ಸಹಕಾರ ನೀಡಿದ ಮಾಜಿ ಸಲಹೆಗಾರ ವಿಶ್ವನಾಥ್‍ರನ್ನು ಗೌರವಿಸಲಾಯಿತು.
ವಾಸು ಪೂಜಾರಿ ಚಿತ್ರಾಪು ಸಹಕಾರದಲ್ಲಿ ಧ್ಯಾನ್ ಹೆಜಮಾಡಿ, ಯಶ್ವಿತ್ ಹೆಜಮಾಡಿ, ಮೇಘಶ್ರೀ ಮೂಲ್ಕಿ, ಕಾವ್ಯ ನಡಿಕುದ್ರು, ಅಶ್ವಿನ್ ನಡಿಕುದ್ರ, ಪ್ರಣೀತ್ ಚಿತ್ರಾಪು, ಅಶೋಕ್ ಕರ್ಕೇರ ಸಹಕಾರದಲ್ಲಿ ಅಭಿಜಿತ್ ಮಟ್ಟು, ಪಲ್ಲವಿ, ನವೀನ್‍ಚಂದ್ರ ಸುವರ್ಣರ ಸಹಾಕಾರದಲ್ಲಿ ದೀಪಕ್‍ಕುಮಾರ್ ಕುಬೆವೂರು, ಯೋಗೀಶ್ ಕೋಟ್ಯಾನ್ ಅವರ ಸಹಕಾರದಲ್ಲಿ ಕಲ್ಪಿತ ಕಕ್ವ, ಮನಿಷ್ ಕೋಟ್ಯಾನ್ ಚಿತ್ರಾಪು ಅವರಿಗೆ ವಿದ್ಯಾ ನಿಧಿಯನ್ನು ಹಾಗೂ ಭವಾನಿ ಕಕ್ವ ಅವರಿಗೆ ನಿರಂತರ 5ನೇ ವರ್ಷದ ಅಕ್ಕಿ, ಬೊಮ್ಮಿ ಪೂಜಾರಿ ತೋಕೂರು ಅವರ ಮನೆಗೆ ವಿದ್ಯುತ್ ಸಂಪರ್ಕ, ಕೇಶವ ಪೂಜಾರಿ ಕೊಳಚಿಕಂಬಳ ಅವರ ಮನೆಯ ಪುನರ್ ನಿರ್ಮಾಣಕ್ಕೆ ಸಂಪೂರ್ಣ ಸಹಾಯವನ್ನು ನೀಡಲಾಯಿತು.

ವರದಿ : ನರೇಂದ್ರ ಕೆರೆಕಾಡು
ಚಿತ್ರ : ಪ್ರಕಾಶ್ ಸುವರ್ಣ

One thought on “ಯುವ ಸಮುದಾಯಕ್ಕೆ ಯುವವಾಹಿನಿಯೇ ದಾರೀ ದೀಪ : ಸುಮಲತಾ ಸುವರ್ಣ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!