Yuvavahini

AUG 15, 2018 2.11 PM IST

ಯುವವಾಹಿನಿ (ರಿ) ಯಡ್ತಾಡಿ ಘಟಕದ ವತಿಯಿಂದ

ನಮ್ಮ ನಡೆ, ಸ್ವಚ್ಛತೆ ಕಡೆ : ಯಡ್ತಾಡಿ ಘಟಕ

ಯಡ್ತಾಡಿ : ಸ್ವಾತಂತ್ರ್ಯ ದಿನದಂದು ಕೇವಲ ಧ್ವಜ ಹಾರಿಸಿ ಸಿಹಿ ತಿಂಡಿ ತಿಂದು ಮನೆಗೆ ಮರಳುವ ಬದಲು, ನಾಲ್ಕು ಜನರಿಗೆ ಉಪಯೋಗವಾಗುವ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾಡುವುದು, ಯುವವಾಹಿನಿ (ರಿ) ಯಡ್ತಾಡಿ ಘಟಕದ ಪ್ರತಿ ವರುಷದ ಕಾರ್ಯಕ್ರಮ. ಈ ಬಾರಿ ಮಾಡಲೇ ಬೇಕಾದ ಕೆಲಸ ಎಲ್ಲರ ಕಣ್ಣೆದುರೇ ಇದ್ದರೂ, ಯಾರಿಗೂ ಈ ಮೊದಲು ಅನುಕೂಲಕರ ಸಮಯ ಒದಗಿ ಬಂದಿರಲಿಲ್ಲ. ಯಡ್ತಾಡಿಯಿಂದ ಕಂಬಳಗದ್ದೆಗೆ ಹೋಗುವ ಕಾಂಕ್ರೀಟ್ ರೋಡಿನ ಎರಡು ಬದಿಗಳಲ್ಲಿ ಹಬ್ಬಿದ ಗಿಡ ಮರ ಹಾಗು ಕಸ ಕಡ್ಡಿಗಳು, ಅದಾಗಲೇ ಪಾಚಿಯನ್ನು ಬೆಳೆಸಿ, ನಾಲ್ಕೈದು ಜನ ಆಯ ತಪ್ಪಿ ಬಿದ್ದಿದ್ದರು. ಹಾಗಾಗಿ ಯುವವಾಹಿನಿಯಿಂದ ಈ ರಸ್ತೆಯನ್ನು ಮತ್ತೆ ಚೊಕ್ಕವಾಗಿ, ಸುರಕ್ಷವಾಗಿ ಮಾಡುವ ನಿರ್ಧಾರ ಕೈಗೊಳ್ಳಲಾಯಿತು.

ಈ ವರುಷ ನಾಗರಪಂಚಮಿ ಹಾಗೂ ಸ್ವಾತಂತ್ರ್ಯ ದಿನ ಒಂದೇ ದಿನ ಬಂದಿರುವುದರಿಂದ ಸದಸ್ಯರ ಪಾಲ್ಗೊಳ್ಳುವಿಕೆಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೂ ಕೂಡ ನಿರೀಕ್ಷೆಗೂ ಮೀರಿ ಸರಿ ಸುಮಾರು ಮುವತ್ತು ಮಂದಿ ಈ ಕಾರ್ಯದಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಹಿಡಿದ ಕೆಲಸವನ್ನು ಬೇಗನೆ ಪೂರೈಸುವ ಸಲುವಾಗಿ, ನಮ್ಮ ಘಟಕದವರೆ ಆದ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಕಡೆಯಿಂದ ಗಿಡಗಳನ್ನು ಕತ್ತರಿಸುವ ಕಟಿಂಗ್ ಮಷೀನ್ ತರಿಸಿ ಕೊಟ್ಟರು. ನಾಗರ ಪಂಚಮಿಗೆ ಬಂದ ಅಸಂಖ್ಯಾತ ಮಂದಿ ಯುವವಾಹಿನಿ ಸದಸ್ಯರ ಕೆಲಸವನ್ನು ಮನಸಾರೆ ಮೆಚ್ಚಿ ಹೊಗಳಿಕೆಯ ಉತ್ಸಾಹವನ್ನು ನೀಡಿದರು. ರಸ್ತೆಯನ್ನು ಸ್ವಚ್ಛಗೊಳಿಸಿ ಎರಡೂ ಬದಿಗಳಿಗೆ ಜಾರದಂತೆ ಸುಣ್ಣವನ್ನು ಹಾಕಿದಾಗ ಅದು ಹೊಸ ರೂಪವನ್ನೇ ಪಡೆದುಕೊಂಡಿತ್ತು.


ರಸ್ತೆ ಕೆಲಸ ಪೂರ್ಣಗೊಂಡ ನಂತರ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಕರೆಸಿ, ನಮ್ಮ ಕೆಲಸದ ವಿವರ ನೀಡಿ, ಮುಂದೆ ಮಾಡಬೇಕಿರುವ ಕೆಲಸದ ಮನವರಿಕೆ ಮಾಡಲಾಯಿತು. ನಮ್ಮ ಕೆಲಸದಿಂದ ಸಂತೃಪ್ತಿ ಹೊಂದಿದ ಅಧ್ಯಕ್ಷರು ಪಂಚಾಯತ್ ಕಡೆಯಿಂದ ರಸ್ತೆಯ ಎರಡು ಬದಿಗು ಮಣ್ಣು ತುಂಬಿಸುವ ಭರವಸೆ ನೀಡಿದರು. ಯುವವಾಹಿನಿಯ ಸಮಾವೇಶದಲ್ಲಿ ಮಾನ್ಯ ಸಚಿವರೊಬ್ಬರು ಹೇಳಿದಂತೆ, ಸರಕಾರ ಮಾಡಬೇಕಿರುವ ಕೆಲಸ ಕಾರ್ಯಗಳನ್ನು ಮಾಡುವ ಸಂಘ ಸಂಸ್ಥೆಗಳು, ಸರಕಾರದ ಸವಲತ್ತುಗಳನ್ನು ಕೇಳಿ ಪಡೆಯುವ ಕೆಲಸ ಕೂಡಾ ಮಾಡಬೇಕಿದೆ.
ರಸ್ತೆಯ ಕೆಲಸ ಮುಗಿದ ನಂತರ ಸ್ವಚ್ಛತಾ ತಂಡ ಅನಾಥವಾಗಿರುವ ರುದ್ರಭೂಮಿಯತ್ತ ನಡೆಯಿತು. ಅಲ್ಲಿಯೂ ಒಂದು ಘಂಟೆಯ ಕಾಲ ಎಲ್ಲರೂ ಸೇರಿ, ಸಾಧ್ಯವಾದಷ್ಟು ಸ್ವಚ್ಛತೆ ನಡೆಸಿ, ರುದ್ರಭೂಮಿಗೆ ಹೊಸ ರೂಪ ನೀಡಲಾಯಿತು.

ಸ್ವಚ್ಛತಾ ಕಾರ್ಯಕ್ರಮ ಮುಗಿದ ನಂತರ, ಪಾಲ್ಗೊಂಡ ಎಲ್ಲ ಸದಸ್ಯರಿಗೂ ಪ್ರಕೃತಿಯ ಮಡಿಲಲ್ಲಿ ಊಟದ ವ್ಯವಸ್ಥೆ ಮಾಡಿ ಸಂಘಟನೆಯನ್ನು ಬಲಪಡಿಸುವ ಕಾರ್ಯವನ್ನೂ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಸತೀಶ್ ಕುಮಾರ್ ಸ್ವಾಗತಿಸಿದರು , ಕಾರ್ಯದರ್ಶಿ ಚಂದ್ರ ಯಡ್ತಾಡಿ ವಂದಿಸಿದರು ,

2 thoughts on “ನಮ್ಮ ನಡೆ, ಸ್ವಚ್ಛತೆ ಕಡೆ : ಯಡ್ತಾಡಿ ಘಟಕ

  1. ಅಶೋಕ್ ಕುಮಾರ್ ಪಡ್ಪು ಉಪ್ಪಿನಂಗಡಿ says:

    ಸಮಾಜದ ಋಣ ಸಂದಾಯದ ಕೆಲಸ ,ಉತ್ತಮ ಪರಿಸರ, ಆರೋಗ್ಯಕರ ವಾತಾವರಣ ನಿರ್ಮಾಣ ಹಾಗೂ ಸ್ವಚ್ಚತಾ ಜಾಗ್ರತಿ ಮೂಡಿಸುವಲ್ಲಿ ನಿಮ್ಮ ಕಾರ್ಯ ಶ್ಲಾಘನೀಯ ಅಭಿನಂದನೆಗಳು….

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!