Yuvavahini

SEP 05, 2018 3.57 PM IST

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 05/09/2018 ರಂದು ಬುಧವಾರ ಸಂಜೆ 7 ಗಂಟೆಗೆ ಸಭೆಯ ನಂತರ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು . ವೇದಿಕೆಯಲ್ಲಿ ಮುಖ್ಯ ಅತಿಥಿಯಾದ ಕೂಳೂರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸೆಲಿನ್ ರಾಡ್ರಿಗಸ್ , ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ,ನಮ್ಮ ಘಟಕದ ಗೌರವ ಸಲಹೆಗಾರರಾದ ನೇಮಿರಾಜ್, ಕಾರ್ಯದರ್ಶಿ ಪವಿತ್ರ ಅಂಚನ್ ಹಾಗೂ ಸಂಚಾಲಕರಾದ ವಿನೀತ್ ಕುಮಾರ್ ಇವರು ಉಪಸ್ಥಿತರಿದ್ದರು . ಕಾರ್ಯದರ್ಶಿ ಎಲ್ಲರನ್ನು ಸ್ವಾಗತಿಸಿದರು . ಸಭೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಅಭಿನಂದನೆಯನ್ನು ಸ್ವೀಕರಿಸಲಿರುವ ಶಿಕ್ಷಕಿಯರಾದ ಕೂಳೂರು ಪ್ರೌಢ ಶಾಲಾ ಶಿಕ್ಷಕಿ ಸೌಮ್ಯಾಲತಾ ಬಂಗೇರ , ಅಂಗನವಾಡಿ ಶಿಕ್ಷಕಿ ಪಿಆರ್ ಹರಿಣಾಕ್ಷಿ ,ಹಾಗೂ ಇನ್ನೋರ್ವ ಶಿಕ್ಷಕಿ ಸುಶೀಲಾ ಐ ಇವರು ಉಪಸ್ಥಿತರಿದ್ದರು .ಹಾಗೂ ಘಟಕದ ಸ್ಥಾಪಕ ಅಧ್ಯಕ್ಷ ರಾದ ಸುಜಿತ್ ರಾಜ್, ನಿಕಟಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ , ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ತುಕರಾಮ ಪೂಜಾರಿ ,ಪದ್ಮನಾಭ ಮರೋಳಿ ಇವರು ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು .

ಮುಖ್ಯ ಅತಿಥಿಯಾದ ಸೆಲಿನ್ ರಾಡ್ರಿಗಸ್ ಇವರು ದೀಪ ಬೆಳಗಿಸಿ ಸರ್ವಪಲ್ಲಿ ರಾಧಾಕೃಷ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೇಕ್ ಕಟ್ ಮಾಡುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಘಟಕದ ಸದಸ್ಯೆಯಾದ ಸುಷ್ಮಾ ಇವರು ಸರ್ವಪಲ್ಲಿ ರಾಧಾಕೃಷ್ಣ ಅವರ ಜೀವನ ಚರಿತ್ರೆಯನ್ನು ಸಭೆಯ ಮುಂದಿಟ್ಟರು .ಬಳಿಕ ಅಂದಿನ ಮುಖ್ಯ ಅತಿಥಿಯಾದ ಸೆಲಿನ್ ರಾಡ್ರಿಗಸ್ ಹಾಗೂ ಉಳಿದ ಶಿಕ್ಷಕರಾದ ಸೌಮ್ಯಲತಾ ಬಂಗೇರ, ಪಿಆರ್ ಹರಿಣಾಕ್ಷಿ ಹಾಗೂ ಸುಶೀಲಾ ಇವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು .ಬಳಿಕ ಮುಖ್ಯ ಅತಿಥಿ ಆದಂತಹ ಸೆಲಿನ್ ರಾಡ್ರಿಗಸ್ ಅವರು ಮಾತನಾಡಿ 11 ವರ್ಷಗಳ ಕಾಲ ತಾವು ಕೂಳೂರು ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಸೇವೆ ಸಲ್ಲಿಸಿದ್ದು ತನ್ನದೇ ವಿದ್ಯಾರ್ಥಿಗಳು ಯುವವಾಹಿನಿ ಘಟಕದಲ್ಲಿ ಸೇರಿ ಇಂದು ತಮ್ಮನ್ನು ನೆನಪಿಸಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ತಮ್ಮನ್ನು ಅಭಿನಂದಿಸಿದ ಅವರ ಪ್ರೀತಿ ವಾತ್ಸಲ್ಯಕ್ಕೆ ಚಿರರುಣಿ ಎಂದರು . ಕಾರ್ಯಕ್ರಮದಲ್ಲಿ ಸದಸ್ಯರ ಆತ್ಮೀಯತೆ ,ಪ್ರೀತಿ ಖುಷಿ ತಂದಿತು ಎಂದರು .ಹಾಗೂ ಘಟಕದ ಸದಸ್ಯರಲ್ಲದೆ ತಮ್ಮ ಹಳೆ ವಿದ್ಯಾರ್ಥಿಗಳು ಕೂಡ ಇಲ್ಲಿ ಸೇರಿರುವುದು ತುಂಬಾ ಸಂತೋಷದ ವಿಷಯ ಎಂದರು .ಇಂದಿನ ಈ ಕಾರ್ಯಕ್ರಮದಲ್ಲಿ ಈ ನಾಲ್ಕು ಶಿಕ್ಷಕರ ಹಳೆ ವಿದ್ಯಾರ್ಥಿಗಳು ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದು ,ಅವರು ಕೂಡ ತಮ್ಮ ವತಿಯಿಂದ ಶಿಕ್ಷಕರಿಗೆ ಅಭಿನಂದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು .ಮುಖ್ಯ ಅತಿಥಿಯಾಗಿ ಆಗಮಿಸಿ ದಂತಹ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ ಮಾತನಾಡಿ ಶುಭ ಹಾರೈಸಿದರು .
ಸುಜಿತ್ ರಾಜ್ ಕಾರ್ಯಕ್ರಮ ನಿರೂಪಿಸಿದರು .ಸಂಚಾಲಕರಾದ ವಿನೀತ್ ಕುಮಾರ್ ವಂದಿಸಿದರು .

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!