ಯುವವಾಹಿನಿ (ರಿ.) ಬೆಳುವಾಯಿ ಘಟಕದ ಪದಗ್ರಹಣ ಸಮಾರಂಭ

ಬಿಲ್ಲವ ಸಮಾಜ ಸಮೃದ್ದವಾದ ಇತಿಹಾಸ ಹೊಂದಿದೆ : ಶೈಲು ಬಿರ್ವ ಅಗತ್ತಾಡಿ

ಬೆಳುವಾಯಿ : ಬಿಲ್ಲವ ಸಮಾಜದ ಶ್ರೀಮಂತ ಇತಿಹಾಸದಲ್ಲಿ ಅದೆಷ್ಟೋ ಮಹಿಳೆಯರು ಮತ್ತು ಮಹನೀಯರು ದಳವಾಯಿಗಳಾಗಿ ಯೋಧರಾಗಿ ನಾಡು ಕಟ್ಟಿದವರು ಇದ್ದಾರೆ ಆದರೆ ಇತಿಹಾಸಕಾರರು ಅವರ ಬದುಕಿನ ಮೇಲೆ ಬೆಳಕು ಚೆಲ್ಲದ್ದು ವಿಷಾದನೀಯ. ಬಿಲ್ಲವರಲ್ಲಿ ಏನು ಇದೆ ಎಂದು ಕೇಳುವುದಕ್ಕಿಂತ ಏನು ಇಲ್ಲ ಎಂದು ಕೇಳುವುದೇ ಉತ್ತಮ. ಎಲ್ಲವು ಇದ್ದಂತಹ ಸಮಾಜ ಎಂದರೆ ಅದು ಬಿಲ್ಲವ ಸಮಾಜ ಮಾತ್ರ. ನಾಯಕರಾಗಿ, ಬಿಲ್ವಿದ್ದೆ ಪ್ರವೀಣರಾಗಿ, ದೈವಗಳ ಅರ್ಚಕಾಗಿ, ವೈದ್ಯರಾಗಿ, ಕೃಷಿ ಮಾಡುವ ಪ್ರತಿಷ್ಟಿತ ಮನೆಗಳಾಗಿ, ಯೋಧರಾಗಿ, ಬೇಟಗಾರರಾಗಿ ಜನಾನುರಾಗಿಯಾಗಿದ್ದವರು ಇದೇ ಬಿಲ್ಲವರು. ನಮ್ಮ ಸಮಾಜ ನಮ್ಮವರ ಸಾಹಸ ಕತೆಗಳ ಮೂಲಕ ನಮ್ಮ ಜೀವನವನ್ನು ಮುಂದುವರೆಸಬೇಕು ಮತ್ತು ನಮ್ಮ ಜಾತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಪುತ್ತೂರು ಬಿರುವೆರ್ ಕುಡ್ಲ ಇದರ ಅಧ್ಯಕ್ಷ ಶೈಲು ಬಿರ್ವ ಅಗತ್ತಾಡಿ ತಿಳಿಸಿದರು.
ಅವರು ದಿನಾಂಕ 23.09.2018 ರಂದು ಎಸ್.ಬಿ.ಹಾಲ್ ಕಮಲಮ್ಮ ಕಾಂಪ್ಲೆಕ್ಸ್ ಬೆಳುವಾಯಿ ಇಲ್ಲಿ ಜರುಗಿದ ಯುವವಾಹಿನಿ (ರಿ) ಬೆಳುವಾಯಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಬಿಲ್ಲವ ಸಮಾಜದ ಯುವ ಸಮುದಾಯದ ಮುಂದೆ ಬಹಳಷ್ಟು ಸವಾಲುಗಳಿವೆ ಈ ಬಗ್ಗೆ ನಾವು ಚಿಂತಿಸಬೇಕಾಗಿದೆ. ಯುವಜನತೆಯ ಶಕ್ತಿ ಸಮರ್ಪಕವಾಗಿ ಬಳಕೆಯಾಗಬೇಕು, ಯುವಕರು ಸಂಸ್ಕಾರವಂತರಾಗಿ ಉತ್ತಮ ನಡೆನುಡಿಯೊಂದಿಗೆ ಹರಿಯುವ ನದಿಯಂತೆ ಹೊರಹೊಮ್ಮುಬೇಕು ಎಂದು ಸಮಾರಂಭ ಉದ್ಘಾಟಿಸಿದ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ (ರಿ) ಬೆಳುವಾಯಿ ಘಟಕದ ಅಧ್ಯಕ್ಷ ರವಿ ಬಂಗೇರ ಕಳೆದೊಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.


ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬೆಳುವಾಯಿ ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಅಂಚನ್, ಪಡುಮಾನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಾಥ್ ಎನ್.ಸುವರ್ಣ, ಬೆಳುವಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಘು ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಘಟಕದ ಸಲಹೆಗಾರ ಸಾಧು ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಮಮತಾ ಜಯಂತ್ ಸ್ವಾಗತಿಸಿದರು,   ನಿತಿನ್ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿದರು.ನವೀನ್.ಎಸ್.ಸಾಲ್ಯಾನ್ ಕಾಂತಾವರ ಧನ್ಯವಾದ ಸಲ್ಲಿಸಿದರು
ಸಭಾ ಕಾರ್ಯಕ್ರಮದ ಬಳಿಕ ಆಳ್ವಾಸ್ ಕಾಲೇಜಿನ ಕನಸು ತಂಡ, ಎಂ.ಜೆ.ಡಾನ್ಸ್ ಗ್ರೂಪ್, ದವಳಾ ಕಾಲೇಜಿನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!