Yuvavahini

OCT 10, 2018 4.30 PM IST

ಯುವವಾಹಿನಿ ಪುತ್ತೂರು ಘಟಕದ ಪ್ರಾಯೋಜಕತ್ವದಲ್ಲಿ

ಮಂಗಳೂರು ದಸರಾ ಪ್ರಯುಕ್ತ ಯಕ್ಷಗಾನ ನಾಟ್ಯ ವೈಭವ

ಯುವವಾಹಿನಿ ಪುತ್ತೂರು ಘಟಕ ಇದರ ಪ್ರಾಯೋಜಕತ್ವದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ದಸರಾ ಪ್ರಯುಕ್ತ ದಿನಾಂಕ 15.10.2018 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರವಿಚಂದ್ರ ಕನ್ನಡಿಕಟ್ಟೆ ಇವರ ಸಾರಥ್ಯದಲ್ಲಿ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಿತು. ಕ್ಷೇತ್ರಾಡಳಿತದ ಕೋಶಾಧಿಕಾರಿ ಪದ್ಮರಾಜ್, ದೇವೆಂದ್ರ ಪೂಜಾರಿ ಶ್ರೀ ಕ್ಷೇತ್ರ ಕಂಕನಾಡಿ ಗರಡಿಯ ಚಿತ್ತರಂಜನ್, ಯುವವಾಹಿನಿ ( ರಿ ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲ್, ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ ಇವರುಗಳು ಪ್ರಧಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ. ಪಟ್ಲ ಸತೀಶ್ ಶೆಟ್ಟಿ , ಭವ್ಯ ಶ್ರೀ ಮಂಡೆಕೋಲು, ಚಂಡೆವಾದಕ ಪದ್ಯಾಣ ಚೈತನ್ಯ ಕ್ರಷ್ಣ ,
ಮದ್ದಲೆವಾದಕ ವಿನಯ ಆಚಾರ್ಯ, ಚಕ್ರತಾಳ ರಾಜೇಂದ್ರ ಕ್ರಷ್ಣ , ನಿರೂಪಕ ವಾದಿರಾಜ ಕಲ್ಲುರಾಯ ಇವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ನಂತರ ವಿಶೇಷ ಆಕರ್ಷಣೆಯಾಗಿ ನಾಟ್ಯ ವೈಭವ ಕಾರ್ಯಕ್ರಮ ನಡೆಯಿತು. ಪುಂಡು ವೇಷ ಕಲಾವಿದೆ ಸ್ವಾತಿ. ಎಂ. ಪೂಜಾರಿ ಪುತ್ತೂರು ಬೆಟ್ಟಂಪಾಡಿ. ಇವರ ನಾಟ್ಯ ಪ್ರೇಕ್ಷಕರ ಮನ ಸೂರೆಗೊಂಡಿತು. ಅಕ್ಷಯ್ ಮಾರ್ನಾಡ್, ರಕ್ಷಿತ್ ಶೆಟ್ಟಿ ಪಡ್ರೆ, ಚಂದ್ರಶೇಖರ್ ಧರ್ಮಸ್ಥಳ, ಲೋಕೇಶ್ ಮುಚ್ಚೂರು. ಇವರುಗಳು ಯಕ್ಷಗಾನದ ನೈಜ ನಾಟ್ಯವನ್ನು ಪ್ರದರ್ಶಿಸಿದರು. ಎಲ್ಲರಿಂದಲೂ ಪ್ರಶಂಸಿಲ್ಪಟ್ಟ ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಹರೀಶ ಶಾಂತಿ ಪುತ್ತೂರು ಹಾಗೂ ಕಲೆ ಮತ್ತು ಸಾಂಸ್ಕೃತಿಕ ನಿರ್ದೇಶಕ ಅವಿನಾಶ್ ಉಪಸ್ಥಿತರಿದ್ದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ದ ಸಂಘಟಕರು ಅಭಿನಂದಿಸಿದರು. ಅದೇ ದಿನ ಸಂಜೆ 7 ಗಂಟೆಗೆ ಯುವವಾಹಿನಿ ಪುತ್ತೂರು ಪ್ರಾಯೋಜಕತ್ವದಲ್ಲಿ ಶ್ರೀ ಭಟ್ಟಿ ವಿನಾಯಕ ಭಜನ ಮಂಡಳಿಯ ವತಿಯಿಂದ ಭಜನಾ ಕಾರ್ಯಕ್ರಮ ನಡೆಸಿಕೊಡಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!