Yuvavahini

NOV 06, 2018 5.05 PM IST

ಮೂಲ್ಕಿ ಯುವವಾಹಿನಿಯಿಂದ 16ನೇ ವರ್ಷದ ತುಳುವೆರೆ ತುಡರ ಪರ್ಬ

ನಾರಾಯಣಗುರುಗಳ ತತ್ವ ಜೀವನದಲ್ಲಿ ಅಳವಡಿಸಿಕೊಳ್ಳಿರಿ : ಮುಮ್ತಾಜ್

ಮೂಲ್ಕಿ ಯುವವಾಹಿನಿ ಘಟಕದ ವತಿಯಿಂದ ನಡೆದ 16ನೇ ವರ್ಷದ ತುಳುವೆರೆ ತುಡಾರ ಪರ್ಬವನ್ನು ಮೂರೂ ಧರ್ಮದ ಪ್ರಮುಖರು ವಿಶೇಷವಾಗಿ ಮಂಗಳವಾರ ಉದ್ಘಾಟಿಸಿದರು.

ಮೂಲ್ಕಿ: ನಾರಾಯಣಗುರುಗಳ ತತ್ವ ಆದರ್ಶದಂತೆ ಇಂದು ಬಿಲ್ಲವ ಸಮಾಜವು ಸಂಘಟನತ್ಮಕವಾಗಿ ಬೆಳೆಯುವುದರೊಂದಿಗೆ ಸಮಾಜದಲ್ಲಿ ಕರಾವಳಿಯ ಸಂಪ್ರದಾಯವನ್ನು ಸಂಸ್ಥೆಯ ಮೂಲಕ ಉಳಿಸುವ ಪ್ರಯತ್ನ ಶ್ಲಾಘನೀಯವಾಗಿದೆ. ಯುವ ಸಮಾಜವನ್ನು ಕಟ್ಟಿ ಬೆಳೆಸುವ ಜವಬ್ದಾರಿಯನ್ನು ನಾರಾಯಣಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಉಡುಪಿಯ ಕಿರಿಯ ಕಾನೂನು ಅಧಿಕಾರಿ ಮುಮ್ತಾಜ್ ಹೇಳಿದರು.
ಅವರು ಮೂಲ್ಕಿ ಯುವವಾಹಿನಿ ಘಟಕದ ವತಿಯಿಂದ ದಿನಾಂಕ 06.11.2018 ರಂದು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ 16ನೇ ವರ್ಷದ ತುಳುವೆರೆ ತುಡಾರ ಪರ್ಬವನ್ನು ಉದ್ಘಾಟಿಸಿ ಮಾತನಾಡಿದರು.
ಮೂಲ್ಕಿ ಕೊಸೆಸಾಂ ಅಮ್ಮನವರ ಚರ್ಚ್‌ನ ಧರ್ಮಗುರು ಸಿಲ್ವೆಸ್ಟರ್ ಡಿಕೋಸ್ಟಾ ಮಾತನಾಡಿ, “ದೀಪಾವಳಿ ಬೆಳಕಿನ ಹಾಗೂ ಕೊಡುಗೆಗಳ ಹಬ್ಬ,ಧಾರ್ಮಿಕ ಹಬ್ಬಗಳು ನಮ್ಮ ಹೃದಯದ ಕತ್ತಲೆ ದೂರ ಮಾಡುವ ಮೂಲಕ ಸಾಮರಸ್ಯದ ಬೆಳಕನ್ನು ಕಾಣಬೇಕು, ಭಗವಾನ್ ಏಸು ಕ್ರಿಸ್ತರೂ ಇದನ್ನೇ ಸಾರಿದ್ದಾರೆ. ನಾರಾಯಣ ಗುರುಗಳೂ ಇದೇ ತತ್ವವನ್ನು ತಿಳಿಸಿದ್ದಾರೆ” ಎಂದರು.
ಎಲ್‌ಐಸಿಯ ನಿವೃತ್ತ ಅಧಿಕಾರಿ ಕೊಲ್ನಾಡುಗುತ್ತು ವಿದ್ಯಾಧರ ಶೆಟ್ಟಿ ಮಾತನಾಡಿ, “ಹಬ್ಬ ಹರಿದಿನಗಳು ನಮ್ಮನ್ನು ಸಂಘಟಿತರನ್ನಾಗಿಸಿ ಸಂತೋಷ ಪಡುವುದರೊಂದಿಗೆ ಸಂತಸ ಹಂಚುವ ಹಬ್ಬಗಳಾಗಿವೆ ನಮ್ಮ ಪೂರ್ವಿಕರು ಬಿಟ್ಟುಹೊಂದ ಈ ಸಂಪ್ರದಾಯಗಳನ್ನು ಯುವ ಜನತೆಗೆ ತಿಳಿಸಿ ಬೆಳೆಸುವ ಹೊಣೆ ನಮ್ಮದಾಗಿದೆ” ಎಂದರು.

ದಕ್ಷಿಣಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ನಾನಿಲ್ ಹಳೆಯಂಗಡಿ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್ ಶುಭ ಹಾರೈಸಿ, ತುಳುನಾಡಿನ ಪರಂಪರೆಯನ್ನು ಉಳಿಸಿ, ಬೆಳೆಸುವ ಕಾಯಕದಲ್ಲಿ ಯುವವಾಹಿನಿ ಮುನ್ನುಡಿ ಬರೆದಿದೆ, ಇಂದು ಎಲ್ಲಾ ಕಡೆಗಳಲ್ಲಿಯೂ ಸಂಸ್ಕೃತಿ ಮತ್ತು ಸಂಸ್ಕಾರದ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಇದಕ್ಕೆ ಪರೋಕ್ಷವಾಗಿ ಯುವವಾಹಿನಿ ಮೂಲ್ಕಿ ಕಾರಣವಾಗಿರುವುದು ಸಂತಸ ತಂದಿದೆ ಎಂದರು.
ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷೆ ಕುಶಲ ಎಸ್. ಕುಕ್ಯಾನ್ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.
ಹಿರಿಯ ಕೃಷಿಕೆ ರಾಜೀವಿ ಮಾಧವ ಬಂಗೇರ ಕೊಕ್ಕರಕಲ್ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಂದ್ರಶೇಖರ ನಾನಿಲ್‌ರನ್ನು ಸನ್ಮಾನಿಸಲಾಯಿತು.
ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪೀನಾಥ ಪಡಂಗ ಅವರು ಯುವವಾಹಿನಿಯಿಂದ ನೀಡಿದ ವಿಶೇಷ ರಂಗಲಂಕಾರವನ್ನು ಅನಾವರಣಗೊಳಿಸಿದರು.
ಯುವವಾಹಿನಿ ಮೂಲ್ಕಿ ಘಟಕದ ಕೋಶಾಧಿಕಾರಿ ದಿವಾಕರ ಕೋಟ್ಯಾನ್, ಕಾರ್ಯಕ್ರಮ ಸಂಘಟಕರಾದ ಕಮಲಾಕ್ಷ ಬಡಗುಹಿತ್ಲು, ವೇದಾವತಿ ಜಯಕುಮಾರ್ ಉಪಸ್ಥಿತರಿದ್ದರು.
ಮಾಜಿ ಅಧ್ಯಕ್ಷ ಯೋಗೀಶ್ ಕೋಟ್ಯಾನ್ ಚಿತ್ರಾಪು ಪ್ರಸ್ತಾವನೆಗೈದರು, ಮಾಜಿ ಅಧ್ಯಕ್ಷ ಮೋಹನ್ ಸುವರ್ಣ ಮತ್ತು ರಿತೇಶ್ ಸನ್ಮಾನ ಪತ್ರ ವಾಚಿಸಿದರು, ಕಾರ್ಯದರ್ಶಿ ಚರಿಷ್ಠಾ ಶ್ರೀನಿವಾಸ್ ವಂದಿಸಿದರು, ಮಾಜಿ ಅಧ್ಯಕ್ಷರುಗಳಾದ ನರೇಂದ್ರ ಕೆರೆಕಾಡು ಮತ್ತು ಉದಯ ಅಮೀನ್ ಮಟ್ಟು ಕಾರ್ಯಕ್ರಮ ನಿರೂಪಿಸಿದರು.

ಹಿರಿಯ ಕೃಷಿಕೆ ರಾಜೀವಿ ಕೊಕ್ಕರ್‌ಕಲ್ ಅವರನ್ನು ತುಳುವೆರೆ ತುಡರ ಪರ್ಬದ ವಿಶೇಷ ತಮ್ಮನದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ವೈಶಿಷ್ಟ :
* ಮೂರು ಧರ್ಮದ ಪ್ರಮುಖರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
* ರಂಗೋಲಿ/ಗೂಡುದೀಪ ಸ್ಪರ್ಧೆಗಳು ನಡೆದವು.
* ಬಂದವರಿಗೆ ಗಟ್ಟಿ ಬಜೀಲ್ದ್ ಔತಣ.
* ಸಾಧಕರಿಗೆ ಸನ್ಮಾನ.
ಸ್ಪರ್ಧಾ ಫಲಿತಾಂಶ:
ರಂಗೋಲಿ ಸ್ಪರ್ಧೆ : ಶರತ್ ಅಡ್ವೆ ಯುವವಾಹಿನಿ ಘಟಕ (ಪ್ರಥಮ), ರಿತೇಶ್ ಕಂಕನಾಡಿ ಯುವವಾಹಿನಿ ಘಟಕ (ದ್ವೀತಿಯ), ಸಹನಾ ಕರ್ಕೇರಾ ಬಂಟ್ವಾಳ ಯುವವಾಹಿನಿ ಘಟಕ (ತೃತೀಯ).
ಗೂಡುದೀಪ ಸ್ಪರ್ಧೆ: ಆದಿತ್ಯ ಭಟ್ ಮಂಗಳೂರು (ಪ್ರಥಮ), ವಿಖ್ಯಾತ್ ಭಟ್ ಮಂಗಳೂರು (ದ್ವೀತೀಯ), ದೀಕ್ಷಿತ್ ಮತ್ತು ತಂಡ ಯುವವಾಹಿನಿ ಶಕ್ತಿ ನಗರ ಮತ್ತು ಯೋಗೀಶ್ ಯುವವಾಹಿನಿ ಬಜ್ಪೆ (ತೃತೀಯ).

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!