ಸಂಘಟನೆಯಲ್ಲಿ ಯುವವಾಹಿನಿ ಪಾತ್ರ ಮಹತ್ತರ’

ಕಾಪು : ಸಮಾಜದ ಯುವಕರನ್ನು ಸಂಘಟಿಸುವಲ್ಲಿ ಯುವವಾಹಿನಿಯ ಪಾತ್ರ ಮಹತ್ವದ್ದಾಗಿದೆ ಸಮಾಜದ  ಯುವಕರೊಳಗಿನ ಒಗ್ಗಟ್ಟು ಎಲ್ಲಾ  ಸಮಯಗಳಲ್ಲೂ ಮುಂದುವರಿಯ ಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಕಾಪುವಿನಲ್ಲಿ 18.11.2018 ರಂದು ಯುವವಾಹಿನಿ (ರಿ) ಘಟಕದ ಕಾಪು ಘಟಕದ ವತಿಯಿಂದ ಬಿಲ್ಲವ ಸಮಾಜದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಲ್ಲವ ಯುವಕ ಯುವತಿಯರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಸ್ನೇಹ ಸಮ್ಮಿಲನ – ಬ್ರಹ್ಮಶ್ರೀ ನಾರಾಯಣಗುರು ಕ್ರೀಡೋತ್ಸವ-2018 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ,  31 ವರ್ಷದ ಹಿಂದೆ ಪ್ರಾರಂಭಗೊಂಡಿದ್ದ ಯುವವಾಹಿನಿ ಸಂಸ್ಥೆಯು ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಒಟ್ಟು 33 ಘಟಕಗಳ ಮೂಲಕ ಕಾರ್ಯಾಚರಿಸುತ್ತಿದೆ. ವಿದ್ಯೆ, ಉದ್ಯೋಗ ಮತ್ತು ಸಂಪರ್ಕ ಎಂಬ ಮೂರು ಮುಖ್ಯ ಉದ್ದೇಶದೊಂದಿಗೆ ಸಂಘಟನೆಯ ಮೂಲಕ ಸಾವಿರಾರು ಯುವಕ – ಯುವತಿಯರು ಪ್ರಚಾರಕ್ಕೆ ಬರುವಂತಾಗಿದೆ. ಇನ್ನಷ್ಟು ಯುವಜನರನ್ನು ಸಂಘಟಿತರನ್ನಾಗಿಸುವುದು ನಮ್ಮ ಅಭಿಲಾಷೆ ಯಾಗಿದೆ’ ಎಂದರು.

‘ನಮ್ಮನ್ನು ನಾವು ಬಿಲ್ಲವ ಸಮಾಜದವರೆಂದು ಹೇಳಿಕೊಳ್ಳಲು ಅತ್ಯಂತ ಹೆಮ್ಮೆಯಾಗುತ್ತಿದೆ. ಸಾಧಕನಾಗಿ ಮೂಡಿ ಬಂದಾಗ, ಇನ್ಯಾವುದೋ ಕಾರಣಗಳಿಂದಾಗಿ ಕುಗ್ಗಿದಾಗ ಎರಡೂ ಸಂದರ್ಭಗಳಲ್ಲೂ ಸಮಾಜ ನಮ್ಮ ಬೆನ್ನ ಹಿಂದೆ ಇರುತ್ತದೆ’ ಎಂದು ಚಲನಚಿತ್ರ ನಟ ಅರವಿಂದ ಬೋಳಾರ್ ಹೇಳಿದರು.

ಕಾಪು ಬ್ಲಾಕ್ ಕಾಂಗ್ರೆಸ್ (ದ) ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಉಡುಪಿ ಜಿಲ್ಲಾ ಬಿಲ್ಲವರ ಪರಿಷತ್ತಿನ ಅಧ್ಯಕ್ಷ ಶೇಖರ್ ಕರ್ಕೇರ ಹೆಜಮಾಡಿ, ಪಡುಬಿದ್ರಿ ಬಿಲ್ಲರ ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್, ಕಾಪು ಬಿಲ್ಲವರ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ನಟಿ ಚಿರಶ್ರೀ ಅಂಚನ್, ತೆಂಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರತ್ನಾಕರ ಕೋಟ್ಯಾನ್, ಎಸ್‌ಕೆಪಿಎ ಕಾಪು ವಲಯ ಘಟಕದ ಅಧ್ಯಕ್ಷ ವಿರೇಂದ್ರ ಎಸ್. ಪೂಜಾರಿ, ಯುವವಾಹಿನಿ ಪದಾಧಿಕಾರಿಗಳಾದ ಶಶಿಧರ್ ಸುವರ್ಣ, ಸುಖೇಶ್ ಕುಮಾರ್ ಎರ್ಮಾಳ್, ಯೋಗೀಶ್ ಕೋಟ್ಯಾನ್, ಸೂರ್ಯ ನಾರಾಯಣ್, ದಿನಕರ್, ಸಚಿನ್ ಕುಮಾರ್ ಉಪಸ್ಥಿತರಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು , ತುಳು‌ ರಂಗಭೂಮಿ ಹಾಗೂ ಚಲನಚಿತ್ರ‌ ನಟ ಅರವಿಂದ ಬೋಳಾರ್, ಚಿತ್ರ ನಟಿ ಚಿರಶ್ರೀ ಅಂಚನ್ ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಇವರನ್ನು ಅಭಿನಂದಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಸ್ವಾಗತಿಸಿದರು. ಸಲಹಾ ಸಮಿತಿ ಸದಸ್ಯ ನಾಗೇಶ್ ಸುವರ್ಣ ವಂದಿಸಿದರು. ಸತೀಶ್ ಹೊಸ್ಮಾರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!