Yuvavahini

JAN 13, 2019 4.07 PM IST

ಯುವವಾಹಿನಿ (ರಿ.) ಬಜ್ಪೆ ಘಟಕದ ಪದಗ್ರಹಣ

ಬಜ್ಪೆ : ಯುವ ಜನರಲ್ಲಿ ಸ್ವಸ್ಥ ಸಮಾಜದ ಬಗೆಗಿನ ಕಾಳಜಿ, ಸಂಸ್ಕೃತಿ, ಒಳ್ಳೆಯ ಆಚಾರ ವಿಚಾರಗಳು ಹಿರಿಯರಾದ ನಾವು ಅವರಲ್ಲಿ ಸದಾ ಮೇಳೈಸುವಂತೆ ಮಾಡಬೇಕು. ವಿರುದ್ಧ ದಿಕ್ಕಿಗೆ ಮುಖ ಮಾಡಿರುವ ಮನಸ್ಸುಗಳನ್ನು ಮುಖ್ಯವಾಹಿನಿಯತ್ತ ತಿರುಗಿಸಬೇಕು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಮ್ಮ ಸಮಾಜದ ಯುವಕರ ಪಾತ್ರ ಇನ್ನಷ್ಟು ಹಿರಿದಾಗಬೇಕು. ಈ ನಿಟ್ಟಿನಲ್ಲಿ ಯುವವಾಹಿನಿಯಂತಹ ಘಟಕಗಳು ಮುಖ್ಯ ಪಾತ್ರವಹಿಸುತ್ತಿರುವುದು ಶ್ಲಾಘನೀಯ, ಇಂತಹ ಸ್ತುತ್ಯರ್ಹ ಕಾರ್ಯಗಳು ಇನ್ನೂ ಪರಿನಾಮಕಾರಿಯಾಗಲಿ ಎಂದು ನಳಿನಾದೇವಿ ಎಂ. ಆರ್. ಇವರು ದಿನಾಂಕ 13.01.2019ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗರು ಸಭಾ ಭವನದಲ್ಲಿ ಜರುಗಿದ ಯುವವಾಹಿನಿ (ರಿ.) ಬಜ್ಪೆ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ‌ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುತ್ತಾ ನುಡಿದರು.

ಇದೇ ಸಂದರ್ಭದಲ್ಲಿ ವೀರ ಯೋಧ ಶ್ರೀ ಅಶೋಕ್ ಕುಮಾರ್ ಕುಪ್ಪೆಪದವು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನ ಪೂರ್ವಕವಾಗಿ ಮಾತನಾಡಿದ ಶ್ರೀಯುತರು, ಯುವ ಸಮುದಾಯ ದೇಶ ರಕ್ಷಣೆಯತ್ತ ಹೆಚ್ಚು ಆಕರ್ಷಿತರಾಗಬೇಕು ಎನ್ನುತ್ತಾ ಯೋಧನಾದ ತನ್ನನ್ನು ಸನ್ಮಾನಿಸಿದಕ್ಕೆ ಅಭಿವಂದನೆಯನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರತಿಜ್ಞಾವಿಧಿಯನ್ನು ಭೋಧಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲ್ ಇವರು ಯಾವುದೇ ಒಂದು ಸಂಘಟನೆ ಸಮಾನ ಮನಸ್ಕತೆಯ ಮೂಲಕ ಗಟ್ಟಿಯಾಗುವುದು ಅಲ್ಲದೆ ಘಟಕದ ಜವಾಬ್ದಾರಿ ಹಿಡಿದವರು ಸರ್ವರ ಸಹಕಾರದೊಂದಿಗೆ ಘಟಕವನ್ನು ಇನ್ನಷ್ಟು ಸುದೃಢಗೊಳಿಸಬೇಕು ಎಂದು ಹೇಳಿದರು. ಪದಗ್ರಹಣದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಜ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಶಿವರಾಮ್ ಪೂಜಾರಿ ಇವರು ಯುವವಾಹಿನಿಯ ಮೂಲ ಆಶಯ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಮತ್ತು ಇನ್ನಷ್ಟು ಕ್ರಿಯಾಶೀಲವಾಗಿ ನಮ್ಮ ಈ ಘಟಕ ಮುಂದಿನ ದಿನಗಳಲ್ಲಿ ಕಾರ್ಯತತ್ವರವಾಗಲೆಂದು ಹಾರೈಸಿದರು. ಘಟಕದ ಸಲಹೆಗಾರರಾದ ಶ್ರೀ ಪರಮೇಶ್ವರ ಪೂಜಾರಿ ಇವರು ಬಜ್ಪೆ ಘಟಕದ ಸಾಧನೆ ಹೆಮ್ಮೆ ತರಿಸುವಂತದ್ದಾಗಿದ್ದು ಮುಂದಿನ ದಿನಗಳಲ್ಲೂ ಇದು ವಿಸ್ತಾರಕವಾಗಲಿ ಎಂದು ಶುಭ ನುಡಿದರು.

ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸದರಿ ಘಟಕದ ಅಧ್ಯಕ್ಷರಾದ ಶ್ರೀ ದೇವರಾಜ್ ಅಮೀನ್ ಇವರು ತನ್ನ ಕಾರ್ಯಾವಧಿಯಲ್ಲಿ ಸಹಕಾರ ನೀಡಿದ ಸರ್ವರನ್ನೂ ನೆನಪಿಸಿಕೊಂಡು ಬಜ್ಪೆ ಘಟಕದ ಶ್ರೇಯಸ್ಸಿಗೆ ಕಾರಣೀಭೂತರಾದ ಎಲ್ಲರಿಗೂ ಕೃತಜ್ಞತೆಯನ್ನು ಹೇಳಿದರು. ನೂತನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಶ್ರೀಮತಿ ಸಂಧ್ಯಾ ಕುಳಾಯಿ ಇವರು, ಮುಂದಿನ ದಿನಗಳಲ್ಲೂ ಸರ್ವರ ಸಹಕಾರವನ್ನು ಬಯಸಿ ತನ್ನ ಕಾರ್ಯ ಯೋಜನೆಯನ್ನು ಸೂಕ್ಷ್ಮವಾಗಿ ಸಭೆಯ ಮುಂದಿರಿಸಿದರು. ಇದೇ ಸಂದರ್ಭದಲ್ಲಿ ತನ್ನ ಒಂದು ವರುಷದ ಕಾರ್ಯಾವಧಿಯುದ್ದಕ್ಕೆ ತನಗೆ ಹೆಗಲಿಗೆ ಹೆಗಲು ಕೊಟ್ಟ ಎಲ್ಲರನ್ನೂ ಅಧ್ಯಕ್ಷರಾದ ಶ್ರೀ ದೇವರಾಜ್ ಅಮೀನ್ ಇವರು ಗೌರವಿಸಿದರು. ಜೊತೆಗೆ ಸದರಿ ಘಟಕದ ಮಾಜಿ ಸಲಹೆಗಾರರಾದ ರವಿಚಂದ್ರ, ಭಜನಾ ಸ್ಪರ್ಧೆಯ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ತರಬೇತಿ ನೀಡಿದ ಶ್ರೀ ಧೀನ್‌ರಾಜ್ ಹಾಗೂ ಸಲಹೆಗಾರರಾದ ಶ್ರೀ ಜಿ. ಪರಮೇಶ್ವರ ಪೂಜಾರಿ ಇವರೆಲ್ಲನ್ನು ಗಣ್ಯರ ಉಪಸ್ಥಿತಿಯಲ್ಲಿ ಅಭಿನಂದಿಸಲಾಯಿತು.

ಕುಮಾರಿ ಗ್ರೀಷ್ಮ ಎಕ್ಕಾರು ಇವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ, ನಿರ್ಮಲ ಗೋಪಾಲಕೃಷ್ಣ ಇವರು ಸರ್ವರನ್ನು ಸ್ವಾಗತಿಸಿದರು. ಚಂದ್ರಶೇಖರ ಪೂಜಾರಿ ನೂತನ ಪದಾಧಿಕಾರಿಗಳು, ನಿರ್ದೇಶಕರುಗಳ ಪರಿಚಯವನ್ನು ಸಭೆಯ ಮುಂದಿರಿಸಿದರು. ಕಾರ್ಯದರ್ಶಿ ಸುನಿತಾ ವಾರ್ಷಿಕ ವರದಿ ಮಂಡಿಸಿದರು. ಮಾಧವ ಇವರು ಸನ್ಮಾನ ಪತ್ರ ವಾಚಿಸಿದರು. ರವೀಂದ್ರ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾ ಕಿರಣ್ ಮತ್ತು ಕೇಶವ ಇವರು ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ರೋಹಿತ್ ವಂದನಾರ್ಪಣೆಗೈದರು.
ಪದಗ್ರಹಣ ಕಾರ್ಯಕ್ರಮದ ಪೂರ್ವದಲ್ಲಿ ಘಟಕದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!